ಐಸಾನ್ ಧೂಮಕೇತು ಬಗ್ಗೆ ಬೆಂಗಳೂರಲ್ಲಿ ಕಾರ್ಯಾಗಾರ

ರಾಷ್ಟ್ರಾದ್ಯಂತ ಈ ಧೂಮಕೇತುವನ್ನು ಹಿಂಬಾಲಿಸಿ ಆಕರ್ಷಕ ದೃಶ್ಯಗಳನ್ನು ಸೆರೆಹಿಡಿಯಲು ವಿವಿಧ ವಿಜ್ಞಾನ ಸಂಸ್ಥೆಗಳು, ಖಗೋಳ ಅಧ್ಯಯನ ಗುಂಪುಗಳು ಮತ್ತು ಇತರೆ ಸಂಘಟನೆಗಳು ಕಾತುರದಿಂದ ಸಿದ್ದತೆ ನಡೆಸಿವೆ. ವಿವಿಧ ಗ್ರಹಣಗಳು ಮತ್ತು ಶುಕ್ರ ಸಂಕ್ರಮ, ಇತ್ಯಾದಿ ಘಟನಾವಳಿಗಳ ಸಮಯದಲ್ಲಿಯಂತೆಯೇ ಈ ಘಟನಾವಳಿಯನ್ನೂ ಸಹ ರಾಜ್ಯದ ಹಲವಾರು ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸಲು ಭಾರತ ಜ್ಞಾನ ವಿಜ್ಞಾನ ಸಮಿತಿ ತಯಾರಿ ನಡೆಸಿದೆ.
ಇದಕ್ಕೆ ಪೂರ್ವಭಾವಿಯಾಗಿ ಕೇಂದ್ರ ಸರ್ಕಾರದ ವಿಜ್ಞಾನ ಪ್ರಸಾರ್ ಮತ್ತು ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು ಸಂಸ್ಥೆಗಳ ಸಹಯೋಗದೊಂದಿಗೆ ದಕ್ಷಿಣ ರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡುವ ಸಲುವಾಗಿ ರಾಷ್ಟ್ರ ಮಟ್ಟದ 3 ದಿನಗಳ ಐಸಾನ್ ಧೂಮಕೇತು ಕುರಿತು ಕಾರ್ಯಾಗಾರವನ್ನು ಭಾರತ ಜ್ಞಾನ ವಿಜ್ಞಾನ ಸಮಿತಿ, ಕರ್ನಾಟಕ ಮತ್ತು ಸಮಕಾಲೀನ ಅಧ್ಯಯನ ಕೇಂದ್ರ, ಭಾರತೀಯ ವಿಜ್ಞಾನ ಮಂದಿರ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿವೆ.
ಆಗಸ್ಟ್ 22ರಿಂದ 24ರವರೆಗೆ ದಕ್ಷಿಣ ರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈ ಸಂಪನ್ಮೂಲ ವ್ಯಕ್ತಿಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಶಿಕ್ಷಕರಿಗೆ ಮತ್ತು ವಿಜ್ಞಾನ ಕಾರ್ಯಕರ್ತರಿಗೆ ತರಬೇತಿ ನೀಡಲಿದ್ದಾರೆ. ದಕ್ಷಿಣದ 6 ರಾಜ್ಯಗಳಿಂದ ಒಟ್ಟು 40 ಜನರು ಮೂರು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಐಸಾನ್ ಧೂಮಕೇತು ಬಗ್ಗೆ ತಿಳಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಐಸಾನ್ ಧೂಮಕೇತು ಕುರಿತಾಗಿ ಜಾಗೃತಿ ಮೂಡಿಸಲು ಹಾಗೂ ಮತ್ತಷ್ಟು ವಿವರಗಳನ್ನು ನೀಡುವ ಸಲುವಾಗಿ 19ನೇ ಆಗಸ್ಟ್, ಸೋಮವಾರ ಬೆಳಿಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿದ್ದು, ಇದರಲ್ಲಿ ಭಾರತೀಯ ಖಗೋಳಭೌತಶಾಸ್ತ್ರ ಸಂಸ್ಥೆಯ ವಿಜ್ಞಾನಿಗಳಾದ ಪ್ರೊ. ಪ್ರಜ್ವಲ ಶಾಸ್ತ್ರಿ, ಡಾ: ಎಸ್. ಚಟರ್ಜಿ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಖಜಾಂಚಿ ಜೈಕುಮಾರ್ ಮತ್ತು ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯೆ ಪ್ರಭಾರವರು ಹಾಜರಿರುತ್ತಾರೆ.
ಪತ್ರಿಕಾಗೋಷ್ಠಿ ಸ್ಥಳ : ಬೆಂಗಳೂರು ಪ್ರೆಸ್ ಕ್ಲಬ್, ಹೈಕೋರ್ಟ್ ಹತ್ತಿರ, ಬೆಂಗಳೂರು.
ದಿನಾಂಕ & ವೇಳೆ : ಆಗಸ್ಟ್ 19, ಸೋಮವಾರ, ಬೆಳಿಗ್ಗೆ 11.30ಕ್ಕೆ
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications