ಐಸಾನ್ ಧೂಮಕೇತು ಬಗ್ಗೆ ಬೆಂಗಳೂರಲ್ಲಿ ಕಾರ್ಯಾಗಾರ

ರಾಷ್ಟ್ರಾದ್ಯಂತ ಈ ಧೂಮಕೇತುವನ್ನು ಹಿಂಬಾಲಿಸಿ ಆಕರ್ಷಕ ದೃಶ್ಯಗಳನ್ನು ಸೆರೆಹಿಡಿಯಲು ವಿವಿಧ ವಿಜ್ಞಾನ ಸಂಸ್ಥೆಗಳು, ಖಗೋಳ ಅಧ್ಯಯನ ಗುಂಪುಗಳು ಮತ್ತು ಇತರೆ ಸಂಘಟನೆಗಳು ಕಾತುರದಿಂದ ಸಿದ್ದತೆ ನಡೆಸಿವೆ. ವಿವಿಧ ಗ್ರಹಣಗಳು ಮತ್ತು ಶುಕ್ರ ಸಂಕ್ರಮ, ಇತ್ಯಾದಿ ಘಟನಾವಳಿಗಳ ಸಮಯದಲ್ಲಿಯಂತೆಯೇ ಈ ಘಟನಾವಳಿಯನ್ನೂ ಸಹ ರಾಜ್ಯದ ಹಲವಾರು ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸಲು ಭಾರತ ಜ್ಞಾನ ವಿಜ್ಞಾನ ಸಮಿತಿ ತಯಾರಿ ನಡೆಸಿದೆ.
ಇದಕ್ಕೆ ಪೂರ್ವಭಾವಿಯಾಗಿ ಕೇಂದ್ರ ಸರ್ಕಾರದ ವಿಜ್ಞಾನ ಪ್ರಸಾರ್ ಮತ್ತು ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು ಸಂಸ್ಥೆಗಳ ಸಹಯೋಗದೊಂದಿಗೆ ದಕ್ಷಿಣ ರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡುವ ಸಲುವಾಗಿ ರಾಷ್ಟ್ರ ಮಟ್ಟದ 3 ದಿನಗಳ ಐಸಾನ್ ಧೂಮಕೇತು ಕುರಿತು ಕಾರ್ಯಾಗಾರವನ್ನು ಭಾರತ ಜ್ಞಾನ ವಿಜ್ಞಾನ ಸಮಿತಿ, ಕರ್ನಾಟಕ ಮತ್ತು ಸಮಕಾಲೀನ ಅಧ್ಯಯನ ಕೇಂದ್ರ, ಭಾರತೀಯ ವಿಜ್ಞಾನ ಮಂದಿರ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿವೆ.
ಆಗಸ್ಟ್ 22ರಿಂದ 24ರವರೆಗೆ ದಕ್ಷಿಣ ರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈ ಸಂಪನ್ಮೂಲ ವ್ಯಕ್ತಿಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಶಿಕ್ಷಕರಿಗೆ ಮತ್ತು ವಿಜ್ಞಾನ ಕಾರ್ಯಕರ್ತರಿಗೆ ತರಬೇತಿ ನೀಡಲಿದ್ದಾರೆ. ದಕ್ಷಿಣದ 6 ರಾಜ್ಯಗಳಿಂದ ಒಟ್ಟು 40 ಜನರು ಮೂರು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಐಸಾನ್ ಧೂಮಕೇತು ಬಗ್ಗೆ ತಿಳಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಐಸಾನ್ ಧೂಮಕೇತು ಕುರಿತಾಗಿ ಜಾಗೃತಿ ಮೂಡಿಸಲು ಹಾಗೂ ಮತ್ತಷ್ಟು ವಿವರಗಳನ್ನು ನೀಡುವ ಸಲುವಾಗಿ 19ನೇ ಆಗಸ್ಟ್, ಸೋಮವಾರ ಬೆಳಿಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿದ್ದು, ಇದರಲ್ಲಿ ಭಾರತೀಯ ಖಗೋಳಭೌತಶಾಸ್ತ್ರ ಸಂಸ್ಥೆಯ ವಿಜ್ಞಾನಿಗಳಾದ ಪ್ರೊ. ಪ್ರಜ್ವಲ ಶಾಸ್ತ್ರಿ, ಡಾ: ಎಸ್. ಚಟರ್ಜಿ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಖಜಾಂಚಿ ಜೈಕುಮಾರ್ ಮತ್ತು ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯೆ ಪ್ರಭಾರವರು ಹಾಜರಿರುತ್ತಾರೆ.
ಪತ್ರಿಕಾಗೋಷ್ಠಿ ಸ್ಥಳ : ಬೆಂಗಳೂರು ಪ್ರೆಸ್ ಕ್ಲಬ್, ಹೈಕೋರ್ಟ್ ಹತ್ತಿರ, ಬೆಂಗಳೂರು.
ದಿನಾಂಕ & ವೇಳೆ : ಆಗಸ್ಟ್ 19, ಸೋಮವಾರ, ಬೆಳಿಗ್ಗೆ 11.30ಕ್ಕೆ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications