ಬೆನಜೀರ್ ಭುಟ್ಟೋ ಕೊಂದಿದ್ದು ಮುಷರಫ್
ರಾವಲ್ಪಿಂಡಿ, ಆ.20: ಪಾಕಿಸ್ತಾನದ ಮಾಜಿ ಅಧ್ಯಕ್ಷ, ಸೇನಾ ಮುಖ್ಯಸ್ಥ ಪರ್ವೇಜ್ ಮುಷರಪ್ ಅವರುಆತ್ಮಾಹುತಿ ದಾಳಿ ನಡೆಸುವ ಮೂಲಕ ರಾಜಕೀಯ ನಾಯಕಿ ಬೆನಜೀರ್ ಭುಟ್ಟೋ ಅವರನ್ನು ಕೊಂದಿದ್ದಾರೆ ಎಂದು ಮಂಗಳವಾರ (ಆ.20) ಸ್ಥಳೀಯ ಕೋರ್ಟ್ ಅಭಿಪ್ರಾಯಪಟ್ಟಿದೆ.
2007ರಲ್ಲಿ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರನ್ನು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾವಲ್ಪಿಂಡಿಯಲ್ಲಿ ಆತ್ಮಾಹುತಿ ದಾಳಿ ಮೂಲಕ ಹತ್ಯೆಗೈಯಲಾಗಿತ್ತು. ಈ ಕುರಿತಂತೆ ದೋಷಾರೋಪ ಪಟ್ಟಿಯಲ್ಲಿ ಸಲ್ಲಿಸಲಾಗಿದೆ.
ಕಳೆದ ಏ.19ರಿಂದ ಇಸ್ಲಾಮಾಬಾದಿನ ಹೊರವಲಯದಲ್ಲಿ ಗೃಹ ಬಂಧನದಲ್ಲಿರುವ ಮುಶರಪ್ ಅವರು ಕೋರ್ಟಿಗೆ ಖುದ್ದು ಹಾಜರಾಗಿದ್ದರು. ಕೊಲೆ, ಕೊಲೆ ಸಂಚು, ಹತ್ಯೆಗೆ ಸಹಾಯ ಮುಂತಾದ ಆರೋಪಗಳನ್ನು ಮುಶರಪ್ ಮೇಲೆ ಹೊರೆಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಚೌಧರಿ ಮಹಮ್ಮದ್ ಅಜರ್ ಅವರು ಸುದ್ದಿಗಾರರಿಗೆ ವಿಷಯ ತಿಳಿಸಿದರು.

ತಮ್ಮ ಮೇಲಿರುವ ಎಲ್ಲಾ ಆರೋಪಗಳನ್ನು ಮುಶರಪ್ ನಿರಾಕರಿಸಿದ್ದು ಆ.27ರಂದು ರಾವಲ್ಪಿಂಡಿಯ ಉಗ್ರ ನಿರೋಧಿ ಕೋರ್ಟ್ ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ.
ಮತ್ತೊಂದು ಪ್ರಕರಣದಲ್ಲಿ : 2006ರಲ್ಲಿ ನಡೆದ ಸೇನಾ ಕಾರ್ಯಚರಣೆಯಲ್ಲಿ ಬಲೂಚಿಸ್ತಾನದ ಮುಖಂಡ ನವಾಬ್ ಅಕ್ಬರ್ ಬುಗ್ತಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಪಾಕಿಸ್ತಾನದ ಮಿಲಿಟರಿ ಮುಖ್ಯಸ್ಥನಾಗಿದ್ದ ಮುಷರಫ್ ಅವರು ಹತ್ಯೆ ಪ್ರಕರಣದ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬಲೂಚಿಸ್ತಾನದಪೊಲೀಸರು ತನಿಖೆ ನಡೆಸಿದ್ದರು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದಿನ ಮುಷರಫ್ ಅವರ ಫಾರ್ಮ್ ಹೌಸ್ ನಲ್ಲಿ ಪೊಲೀಸರು ಬಂಧಿಸಿ, ಕೋರ್ಟಿಗೆ ಹಾಜರು ಪಡಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications