ಸರ್ಕಾರಿ ಪೌರೋಹಿತ್ಯದಲ್ಲಿ ಅನಾಥೆಗೆ ಕಂಕಣಭಾಗ್ಯ!
ಬೆಂಗಳೂರು, ಆ.20 : ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ವೀಕಾರ ಕೇಂದ್ರದಲ್ಲಿ ಸೋಮವಾರ ಸಂಭ್ರಮ ಮನೆ ಮಾಡಿತ್ತು. ಕೇಂದ್ರದ ಆವರಣದಲ್ಲಿ ಮದುವೆ ಸಂಭ್ರಮದ ಕಳೆ ಕಟ್ಟಿತ್ತು. ಅನಾಥೆ ಕಾಳಮ್ಮ ಮತ್ತು ಸತೀಶ್ ಅವರ ವಿವಾಹಕ್ಕೆ ಇಲಾಖೆ ಆವರಣ ಸಾಕ್ಷಿಯಾಯಿತು.
ಮದುವೆ ಸಂಪ್ರದಾಯದಂತೆಯೇ ನಡೆಯಿತು. ತೋರಣ, ಹೂಗಳಿಂದ ಅಲಂಕಾರಗೊಂಡಿದ್ದ ಕೇಂದ್ರದಲ್ಲಿ ಇಲಾಖೆ ಸಿಬ್ಬಂದಿಗಳು ಮನೆ ಮಗಳ ಮದುವೆಯಂತೆ ಉತ್ಸಾಹದಲ್ಲಿ ಓಡಾಡಿಕೊಂಡಿದ್ದರು. ಚಿಕ್ಕ ವಯಸ್ಸಿನಲ್ಲಿ ಅನಾಥೆಯಾಗಿ ಕೇಂದ್ರಕ್ಕೆ ಸೇರಿದ್ದ ಕಾಳಮ್ಮ ವಿವಾಹವಾಗುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟರು.

ಅನಾಥೆಯಾಗಿ ಬಾಲಮಂದಿರ ಸೇರಿ ಬೆಳೆದ ಕಾಳಮ್ಮ ವಿವಾಹ ಮಹೋತ್ಸವಕ್ಕೆ ಸರ್ಕಾರ ಪೌರೋಹಿತ್ಯ ವಹಿಸಿತ್ತು. ಸಚಿವರಾದ ಉಮಾಶ್ರೀ ಮತ್ತು ರಾಮಲಿಂಗಾರೆಡ್ಡಿ ಸಮ್ಮುಖದಲ್ಲಿ ಕಾಳಮ್ಮ, ಚಿಕ್ಕಮಗಳೂರಿನ ಸತೀಶ್ ಜೊತೆ ವಿವಾಹವಾದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳಾ ಸಂಘಟನೆ ಮತ್ತು ದಾನಿಗಳ ನೆರವಿನೊಂದಿಗೆ ಸೋಮವಾರ ಸಂದ್ರಪಾಯಬದ್ಧವಾಗಿ ಕಾಳಮ್ಮ ಮತ್ತು ಸತೀಶ್ ಅವರ ವಿವಾಹವನ್ನು ನಡೆಸಿಕೊಟ್ಟಿತು.
ಚಿಕ್ಕಮಗಳೂರಿನ ಬಿಕಾಂ ಪದವೀಧರ ಸತೀಶ್, ಪೂರ್ಣ ಪ್ರಜ್ಞಾ ಶಾಲೆಯ ಹಾಸ್ಟೆಲ್ನಲ್ಲಿ ಕೆಟರಿಂಗ್ ಕೆಲಸ ಮಾಡುತ್ತಿದ್ದಾರೆ. ಕಾಳಮ್ಮ ಅವರನ್ನು ವಿವಾಹವಾಗುವ ಮೂಲಕ ಅನಾಥೆಗೆ ಬಾಳು ನೀಡಿ ಬ್ರಾಹ್ಮಣ ಜನಾಂಗದ ಇವರು ಆದರ್ಶ ಮೆರೆದಿದ್ದಾರೆ.
ವಿವಾಹದಲ್ಲಿ ಪಾಲ್ಗೊಂಡಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೂತನ ದಂಪತಿಗಳಿಗೆ ಐದು ಸಾವಿರ ರೂ. ಉಡುಗೊರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಉಮಾಶ್ರೀ ಕಾಣಿಕೆ ಇಬ್ಬರನ್ನು ಹರಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವಾರು ಸಿಬ್ಭಂದಿಗಳು ಪಾಲ್ಗೊಂಡಿದ್ದರು. (ಅನಾಥ ಕಾಳಮ್ಮನ ಲಗ್ನಕ್ಕೆ ಸರಕಾರದ ಪೌರೋಹಿತ್ಯ)
ಕಾಳಮ್ಮ ಯಾರು : ಆರು ವರ್ಷವಿರುವಾದ ಕಾಳಮ್ಮ ಬಾಲಮಂದಿರದಲ್ಲಿ ಆಶ್ರಯ ಪಡೆದಿದ್ದಳು. ಆಕೆಯ ವಿದ್ಯಾಭ್ಯಾಸ ನೀಡಲು ಡಿವಿಎಸ್ ರಸ್ತೆಯಲ್ಲಿರುವ ಅಭಯ ಆಶ್ರಮಕ್ಕೆ ಸೇರಿಸಲಾಗಿತ್ತು. ಆದರೆ, ಕಾಳಮ್ಮಳಿಗೆ ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಾಧ್ಯವಾಗದೆ 9ನೇ ತರಗತಿವರೆಗೆ ಓದಿದಳು.
ಬಳಿಕ ಸ್ವೀಕರ ಕೇಂದ್ರಕ್ಕೆ ಮರಳಿದರೂ ಓದನ್ನು ಮುಂದುವರೆಸಲಿಲ್ಲ. ತಂದೆ-ತಾಯಿ, ಜಾತಿ ಯಾವುದೂ ಗೊತ್ತಿಲ್ಲದ ಆಕೆಯನ್ನು ವಿವಾಹವಾಗಿ ಸತೀಶ್ ಆಕೆಗೆ ಹೊಸ ಜೀವನ ನೀಡಿದ್ದಾನೆ. ವಿವಾಹದ ನಂತರ ಕಾಳಮ್ಮ ಓದು ಮುಂದುವರೆಸುವ ಉತ್ಸಾಹದಲ್ಲಿದ್ದಾರೆ.
ಕಾಳಮ್ಮಳಿಗೆ ಸ್ವೀಕಾರ ಕೇಂದ್ರದ ಅಧೀಕ್ಷಕಿ ವಾಸಂತಿ ತಾಯಿ ಸ್ಥಾನದಲ್ಲಿ ನಿಂತು ಧಾರೆ ಎರೆದುಕೊಟ್ಟರು. ವರನ ಪೋಷಕರು ಸಹ ತಮ್ಮ ಸೊಸೆಯನ್ನು ಸಂತೋಷದಿಂದ ಮನೆ ತುಂಬಿಸಿಕೊಂಡರು. ತನ್ನ ಪೌರೋಹಿತ್ಯದಲ್ಲಿ ನಡೆದ ಮದುವೆಗೆ ಸರ್ಕಾರದಿಂದ 15 ಸಾವಿರ ರೂ. ನೀಡಲಾಯಿತು.
ಕೇಂದ್ರದಲ್ಲಿನ 11ನೇ ಮದುವೆ : ಅನಾಥ ಹುಡುಗಿಯರನ್ನು ವಿವಾಹವಾಗಲು ಬಯಸುವ ಹುಡುಗರನ್ನು ಇಲಾಖೆ ಅಧಿಕಾರಿಗಳು ಪರೀಕ್ಷೆ ನಡೆಸುತ್ತಾರೆ. ಹುಡುಗ-ಹುಡುಗಿಯ ಒಪ್ಪಿಗೆ ಮೇರೆಗೆ ಮದುವೆ ಮಾಡಿಸಲಾಗುತ್ತದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications