ಲೈಂಗಿಕ ದೌರ್ಜನ್ಯ ಕೇಸಿನಲ್ಲಿ ಸಿಲುಕಿದ ದೇವಮಾನವ

ಜೋಧಪುರದಲ್ಲಿರುವ ಅಸಾರಾಮ್ ಬಾಪು ಅವರ ಆಶ್ರಮದಲ್ಲಿ ನೆಲೆಸಿರುವ 16 ವರ್ಷದ ಯುವತಿ ಈ ರೀತಿ ಆರೋಪ ಹೊರೆಸಿ ನ್ಯಾಯ ದೊರೆಕಿಸಿಕೊಡುವಂತೆ ದೆಹಲಿ ಪೊಲೀಸರ ಮೊರೆ ಹೊಕ್ಕಿದ್ದಾರೆ. ದೆಹಲಿಯ ಕಮಲಾ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಸಾರಾಮ್ ಬಾಪು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿದ್ದು, ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.
ದೆಹಲಿಯಲ್ಲಿ ಖಾಸಗಿ ಬಸ್ ನಲ್ಲಿ 23 ವರ್ಷದ ಯುವತಿ ಅತ್ಯಾಚಾರಕ್ಕೊಳಗಾದ ಘಟನೆ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಅಸಾರಾಮ್ ಬಾಪು ಅಸಂಬದ್ಧ ಹೇಳಿಕೆ ನೀಡಿದ್ದರು. 'ನನ್ನ ಪ್ರಕಾರ ಎರಡು ಕೈ ಸೇರಿದರೆ ಮಾತ್ರ ಚಪ್ಪಾಳೆ. ಒಂದು ಕೈಯಿಂದ ಚಪ್ಪಾಳೆ ಸಾಧ್ಯವಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಪುರುಷರಷ್ಟೇ ಅತ್ಯಾಚಾರಕ್ಕೊಳಗಾದ ಯುವತಿಯ ಪಾತ್ರವೂ ಇದೆ'ಎಂದು ವಿವಾದಾತ್ಮಕ ಹೇಳಿಕೆಯನ್ನು ಆಸಾರಮ್ ಬಾಪು ನೀಡಿದ್ದರು.
ಆಸಾರಮ್ ಬಾಪು ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಜಾಫರ್ ಪುರ ಕೋರ್ಟ್ ಬಾಪು ವಿರುದ್ಧ ಆರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಕೋರ್ಟಿಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ. ಆದರೆ, ಸ್ವಯಂ ಘೋಷಿತ ದೇವಮಾನವ ಬಾಪು ಎಲ್ಲವನ್ನೂ ನಿರ್ಲಕ್ಷಿಸಿದ್ದಾರೆ.
ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸುದ್ದಿಗ್ರಾಸವಾಗಿದ್ದ ಅಧ್ಯಾತ್ಮಿಕ ಗುರು ಅಸಾರಾಮ್ ಬಾಪು ವಿರುದ್ಧ ಸುಮಾರು 700 ಕೋಟಿ ರು ಹಗರಣದ ಆರೋಪ ಕೂಡಾ ಇದೆ. ಮಧ್ಯ ಪ್ರದೇಶದ ರತ್ಲಾಂನಲ್ಲಿ 200ಎಕರೆ ಭೂಮಿ ಅತಿಕ್ರಮಣದ ಆರೋಪವನ್ನು ಅವರ ವಿರುದ್ಧ ಹೊರಿಸಲಾಗಿದೆ. ಕೇಂದ್ರ ಕಾರ್ಪೊರೇಟ್ ವ್ಯವಹಾರಗಳಸಚಿವಾಲಯ ತನಿಖೆ ನಡೆದಿತ್ತು.
ಕೇಂದ್ರ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಕ್ರಮ ಆಸ್ತಿ ಗಳಿಕೆ ಹೊಂದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಸಂತರ ವಿರುದ್ಧ ಇಂತಹ ಆರೋಪಗಳನ್ನು ಹೊರಿಸಿ ಅವರ ವರ್ಚಸ್ಸಿಗೆ ಕಳಂಕ ಹಚ್ಚಲಾಗುತ್ತಿದೆ. ಆರೋಪಗಳಲ್ಲಿ ಸತ್ಯವಿಲ್ಲವೆಂದು ವ್ಯಕ್ತವಾದಾಗ ಮೌನ ವಹಿಸುತ್ತದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅದೇ ಚರ್ಚ್, ಮಸೀದಿಗಳಿಂದ ನಡೆದಿರುವ ಅತಿಕ್ರಮಣಗಳನ್ನು ಪ್ರಶ್ನಿಸುವುದಿರಲಿ,ಅಂಥ ಅತಿಕ್ರಮಣಗಳ ವಿರುದ್ಧ ನ್ಯಾಯಾಲಯ ಆದೇಶವಿದ್ದರೂ ಅದನ್ನು ಜಾರಿಗೊಳಿಸಲು ಮುಂದಾಗುತ್ತಿಲ್ಲವೇಕೆ? ಇದರ ಹಿಂದಿರುವ ಹುನ್ನಾರವೇನು ಎಂಬುದಾಗಿ ಅಲ್ಲಿನ ಹಿಂದು ಸಂಘಟನೆಗಳು ಪ್ರಶ್ನಿಸಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications