ಶೆಟ್ಟರ್ ಗೆ ಒಂದು ದಿನದ ಗಡುವು ಕೊಟ್ಟ ಪಾಪು

ಸರ್ಕಾರಿ ಜಾಗವನ್ನು ರಿಕ್ರಿಯೇಶನ್ ಕ್ಲಬ್ ಅನ್ನಾಗಿ ಪರಿವರ್ತಿಸಿದ ವಿರುದ್ಧ ಗ್ರೌಂಡ್ ಬಚಾವೋ ಸಮಿತಿ ಆಶ್ರಯದಲ್ಲಿ ಶೆಟ್ಟರ್ ನಿವಾಸದ ಎದುರು ಬುಧವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಇದೇವೇಳೆ ತಮ್ಮ ನಿಲುವು ಪ್ರಕಟಿಸಲು ಶೆಟ್ಟರ್ ಗೆ ಸಮಿತಿ ಅಧ್ಯಕ್ಷ ಪಾಟೀಲ್ ಪುಟ್ಟಪ್ಪ ಗಡುವು ನೀಡಿದ್ದಾರೆ.
ಮೈದಾನ ಸಾರ್ವಜನಿಕರಿಗೆ ಮುಕ್ತವಾಗಬೇಕು ಎಂದು ಆಗ್ರಹಿಸಿ ರಾಜಕೀಯ ಹಿತಾಸಕ್ತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದೇವೆ. ಜಗದೀಶ್ ಶೆಟ್ಟರ್ ಅವರ ತೇಜೋವಧೆ ಮಾಡಲು ಅಲ್ಲ ಎಂದು ಸಮತಿ ಸ್ಪಷ್ಟಪಡಿಸಿದೆ.
ರಾಜಕೀಯ ನಾಯಕರು ಜನರಲ್ಲಿ ಒಬ್ಬರಾಗಬೇಕು. ಪ್ರತ್ಯೇಕವಾಗಿ ಬದುಕಬಾರದು. ಕೆಲವರ ಹಿತಾಸಕ್ತಿ ಕಾಪಾಡಲು ಸರ್ಕಾರಿ ಜಾಗದಲ್ಲಿದ್ದ ಮೈದಾನವನ್ನು ಕ್ಲಬ್ನ್ನಾಗಿ ಪರಿವರ್ತಿಸಿರುವ ಕುರಿತು ಶೆಟ್ಟರ್ ಗುರುವಾರ ಸಂಜೆಯವೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಪಾಪು ಗಡುವು ವಿಧಿಸಿದ್ದಾರೆ.
ನನ್ನ ಪಾತ್ರವಿಲ್ಲ : ಸಾರ್ವಜನಿಕರಿಗೆ ಮುಕ್ತವಾದ ಮೈದಾನವನ್ನು ರಿಕ್ರಿಯೇಶನ್ ಕ್ಲಬ್ ಆಗಿ ಪರಿವರ್ತಿಸುವಲ್ಲಿ ನನ್ನ ಪಾತ್ರವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಉದ್ದೇಶದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನಾನು ಸ್ಥಳೀಯ ಜನಪ್ರತಿನಿಧಿಯಾದ ಕಾರಣ ನನ್ನನ್ನು ಕ್ಲಬ್ ಗೌರವ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕಾನೂನು ಮೂಲಕವೇ ಕ್ಲಬ್ ಸ್ಥಾಪಿಸಲಾಗುತ್ತಿದೆ. ಕಾನೂನು ಬಾಹಿರವಾಗಿ ಕ್ಲಬ್ ಸ್ಥಾಪನೆಯಾಗಿಲ್ಲ ಎಂದು ಶೆಟ್ಟರ್ ತಿಳಿಸಿದರು.
ಪ್ರಸ್ತುತ ನಾವು ಪ್ರತಿ ಪಕ್ಷ ಸ್ಥಾನದಲ್ಲಿ ಕುಳಿತಿದ್ದೇವೆ. ಕ್ಲಬ್ ಅಕ್ರಮವಾಗಿ ಸ್ಥಾಪನೆಗೊಳ್ಳುತ್ತಿದ್ದರೆ ಆ ಕುರಿತು ಸರ್ಕಾರ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ, ನಾವು ತನಿಖೆ ಎದುರಿಸಲು ಸಿದ್ಧ ಎಂದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications