ಶೆಟ್ಟರ್ ಗೆ ಒಂದು ದಿನದ ಗಡುವು ಕೊಟ್ಟ ಪಾಪು

ಸರ್ಕಾರಿ ಜಾಗವನ್ನು ರಿಕ್ರಿಯೇಶನ್ ಕ್ಲಬ್ ಅನ್ನಾಗಿ ಪರಿವರ್ತಿಸಿದ ವಿರುದ್ಧ ಗ್ರೌಂಡ್ ಬಚಾವೋ ಸಮಿತಿ ಆಶ್ರಯದಲ್ಲಿ ಶೆಟ್ಟರ್ ನಿವಾಸದ ಎದುರು ಬುಧವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಇದೇವೇಳೆ ತಮ್ಮ ನಿಲುವು ಪ್ರಕಟಿಸಲು ಶೆಟ್ಟರ್ ಗೆ ಸಮಿತಿ ಅಧ್ಯಕ್ಷ ಪಾಟೀಲ್ ಪುಟ್ಟಪ್ಪ ಗಡುವು ನೀಡಿದ್ದಾರೆ.
ಮೈದಾನ ಸಾರ್ವಜನಿಕರಿಗೆ ಮುಕ್ತವಾಗಬೇಕು ಎಂದು ಆಗ್ರಹಿಸಿ ರಾಜಕೀಯ ಹಿತಾಸಕ್ತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದೇವೆ. ಜಗದೀಶ್ ಶೆಟ್ಟರ್ ಅವರ ತೇಜೋವಧೆ ಮಾಡಲು ಅಲ್ಲ ಎಂದು ಸಮತಿ ಸ್ಪಷ್ಟಪಡಿಸಿದೆ.
ರಾಜಕೀಯ ನಾಯಕರು ಜನರಲ್ಲಿ ಒಬ್ಬರಾಗಬೇಕು. ಪ್ರತ್ಯೇಕವಾಗಿ ಬದುಕಬಾರದು. ಕೆಲವರ ಹಿತಾಸಕ್ತಿ ಕಾಪಾಡಲು ಸರ್ಕಾರಿ ಜಾಗದಲ್ಲಿದ್ದ ಮೈದಾನವನ್ನು ಕ್ಲಬ್ನ್ನಾಗಿ ಪರಿವರ್ತಿಸಿರುವ ಕುರಿತು ಶೆಟ್ಟರ್ ಗುರುವಾರ ಸಂಜೆಯವೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಪಾಪು ಗಡುವು ವಿಧಿಸಿದ್ದಾರೆ.
ನನ್ನ ಪಾತ್ರವಿಲ್ಲ : ಸಾರ್ವಜನಿಕರಿಗೆ ಮುಕ್ತವಾದ ಮೈದಾನವನ್ನು ರಿಕ್ರಿಯೇಶನ್ ಕ್ಲಬ್ ಆಗಿ ಪರಿವರ್ತಿಸುವಲ್ಲಿ ನನ್ನ ಪಾತ್ರವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಉದ್ದೇಶದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನಾನು ಸ್ಥಳೀಯ ಜನಪ್ರತಿನಿಧಿಯಾದ ಕಾರಣ ನನ್ನನ್ನು ಕ್ಲಬ್ ಗೌರವ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕಾನೂನು ಮೂಲಕವೇ ಕ್ಲಬ್ ಸ್ಥಾಪಿಸಲಾಗುತ್ತಿದೆ. ಕಾನೂನು ಬಾಹಿರವಾಗಿ ಕ್ಲಬ್ ಸ್ಥಾಪನೆಯಾಗಿಲ್ಲ ಎಂದು ಶೆಟ್ಟರ್ ತಿಳಿಸಿದರು.
ಪ್ರಸ್ತುತ ನಾವು ಪ್ರತಿ ಪಕ್ಷ ಸ್ಥಾನದಲ್ಲಿ ಕುಳಿತಿದ್ದೇವೆ. ಕ್ಲಬ್ ಅಕ್ರಮವಾಗಿ ಸ್ಥಾಪನೆಗೊಳ್ಳುತ್ತಿದ್ದರೆ ಆ ಕುರಿತು ಸರ್ಕಾರ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ, ನಾವು ತನಿಖೆ ಎದುರಿಸಲು ಸಿದ್ಧ ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications