ನರೇಂದ್ರ ಮೋದಿ ಆಧುನಿಕ ಹಿಟ್ಲರ್ : ದಿಗ್ವಿಜಯ್
ಇಂದೋರ್, ಆ.23: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಬೇಕಾಬಿಟ್ಟಿ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ನೀಡದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಇದ್ದರೂ ಕಾಂಗ್ರೆಸ್ ಮುಖಂಡರ ಬಾಯಿ ಕಟ್ಟಿ ಹಾಕಲು ಸಾಧ್ಯವಾಗುತ್ತಿಲ್ಲ. ಮೋದಿ ಅವರನ್ನು ಮತ್ತೊಮ್ಮೆ ದಿಗ್ವಿಜಯ್ ಸಿಂಗ್ ಟೀಕಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮಾತನಾಡಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಆಧುನಿಕ ಹಿಟ್ಲರ್, ಹಿಟ್ಲರ್ ಅನುಸರಿಸಿದ ತಂತ್ರವನ್ನು ಬಳಸಿ ಅಧಿಕಾರ ಚುಕ್ಕಾಣಿ ಹಿಡಿಯುತ್ತಿದ್ದಾರೆ ಎಂದಿದ್ದಾರೆ.
"ನನಗನ್ನಿಸುವ ಮಟ್ಟಿಗೆ ಹಿಟ್ಲರ್ ಹಾಗೂ ಮೋದಿ ನಡುವೆ ಸಾಕಷ್ಟು ಸಾಮ್ಯತೆಗಳಿವೆ. ಹಿಟ್ಲರ್ ಹೇಗೆ ಜನರನ್ನು ಹಿಂಸಿಸಿ ಅಧಿಕಾರವನ್ನು ಅನುಭವಿಸಿದನೋ ಅದೇ ರೀತಿ ಮೋದಿ ಕೂಡಾ ಜನರನ್ನು ಮರಳು ಮಾಡಿ ಸುಳ್ಳು ಅಭಿವೃದ್ಧಿ ಮಂತ್ರ ಜಪಿಸುವಂತೆ ಮಾಡಿ ಅಧಿಕಾರ ಉಳಿಸಿಕೊಂಡಿದ್ದಾರೆ. ಗುಜರಾತ್ ಜನ ಮೋದಿ ಎಂಬ ಭ್ರಮೆಯಲ್ಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ವಿಷಾದ ವ್ಯಕ್ತಪಡಿಸಿದರು.

ಮೋದಿಯಿಂದಾಗಿ ರಾಷ್ಟ್ರೀಯ ಪಕ್ಷ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ವ್ಯಕ್ತಿತ್ವ ಕಳೆದುಕೊಳ್ಳುತ್ತಿದೆ.ಮುಂದೆ ಬಿಜೆಪಿ ಮೋದಿಮಯವಾಗಲಿದೆ.ಜನರು ಬಿಜೆಪಿಯನ್ನು ಮರೆಯಲಿದ್ದಾರೆ ಎಂದು ದಿಗ್ವಿಜಯ್ ಎಚ್ಚರಿಸಿದ್ದಾರೆ.
ಮಧ್ಯಪ್ರದೇಶ, ಛತ್ತೀಸ್ ಗಢದಂಥ ಬಿಜೆಪಿ ಪ್ರಾಬಲ್ಯವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಅಲೆ ಏಳಲಿದೆ. ಮಧ್ಯಪ್ರದೇಶದಲ್ಲಿ ಶಿವರಾಜ್ ಚೌಹಾಣ್, ಛತ್ತೀಸ್ ಗಢದಲ್ಲಿ ರಮಣ್ ಸಿಂಗ್ ಜನಪ್ರಿಯತೆ ಕಳೆದುಕೊಳ್ಳಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಭವಿಷ್ಯ ನುಡಿದಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications