ಮುಂಬೈ : ಫೋಟೋಗ್ರಾಫರ್ ಮೇಲೆ ಗ್ಯಾಂಗ್ ರೇಪ್

ಗುರುವಾರ ಸಂಜೆ ವರದಿಗಾರಿಕೆಗಾಗಿ ಸಹೋದ್ಯೋಗಿಯ ಜೊತೆ ಛಾಯಾಗ್ರಾಹಕಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 22 ವರ್ಷದ ಛಾಯಾಗ್ರಾಹಕಿ ಜೊತೆ ಇದ್ದ ಸಹೋದ್ಯೋಗಿಯನ್ನು, ಮಹಾಲಕ್ಮೀ ಬಡಾವಣೆಯ ಶಕ್ತಿ ಮಿಲ್ ನಲ್ಲಿ ಕಟ್ಟಿಹಾಕಿದ ದುಷ್ಕರ್ಮಿಗಳು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ಯುವತಿಯ ಸ್ನೇಹಿತರು ಮತ್ತು ಕುಟುಂಬದವರು ಎನ್.ಎಂ.ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಸ್ ಲೋಕ್ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗುರುವಾರ ಸಂಜೆ ನಿಯತಕಾಲಿಕೆಯೊಂದೆ ವರದಿಗೆ ಮಹಾಲಕ್ಮೀ ಮಿಲ್ ಬಳಿ ತೆರಳಿದ್ದಾಗ, ಅಲ್ಲಿಗೆ ಆಗಮಿಸಿದ ಐವರು ಯುವಕರ ಗುಂಪು, ಛಾಯಾಗ್ರಾಹಕಿ ಜೊತೆ ಇದ್ದ ಸಹೋದ್ಯೋಗಿಯ ಜೊತೆ ಜಗಳವಾಡಿದ್ದಾರೆ. ನಂತರ ಆತನಿಗೆ ಥಳಿಸಿ ಮಿಲ್ ನಲ್ಲಿ ಕಟ್ಟಿಹಾಕಿದ್ದಾರೆ. ನಂತರ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಎಂದು ತಿಳಿದು ಬಂದಿದೆ.
ಯುವತಿ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದಾಳೆ ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್.ಪಾಟೀಲ್, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ಜೋಶಿ ಮಾರ್ಗ ಪೊಲೀಸರು ಹೇಳಿದ್ದಾರೆ. ತಲೆ ಮರಿಸಿಕೊಂಡಿರುವ ಇಬ್ಬರಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ಯುವತಿ ಚೇತರಿಸಿಕೊಂಡ ಬಳಿಕ ಘಟನೆಯ ಪೂರ್ಣ ವಿವರ ಲಭ್ಯವಾಗಲಿದೆ.
ರೇಖಾಚಿತ್ರ ಬಿಡುಗಡೆ :ಫೋಟೋಗ್ರಾಫರ್ ಮೇಲೆ ಗುರುವಾರ ರಾತ್ರಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳ ರೇಖಾಚಿತ್ರವನ್ನು ಶುಕ್ರವಾರ ಬೆಳಗ್ಗೆ ಮುಂಬೈ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಯುವತಿ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಐವರು ಶಂಕಿತ ಅತ್ಯಾಚಾರಿಗಳ ರೇಖಾ ಚಿತ್ರ ಬಿಡುಗಡೆ ಮಾಡಿದ್ದಾರೆ. ಆರೋಪಿಗಳ ಪತ್ತೆಗಾಗಿ 18 ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications