ಶ್ರೀ ಕಾಳಹಸ್ತಿ ದೇವಾಲಯದ ಕಲಶ ಕುಸಿತ

ಪುರಾತನವಾದ ಕಾಳಹಸ್ತಿ ದೇವಸ್ಥಾನದ ಪ್ರವೇಶದ್ವಾರದ ರಾಜಗೋಪುರದ ಮೇಲಿರುವ ಸುಮಾರು 10 ಕೆಜಿ ಕಲಶ ಗುರುವಾರ ರಾತ್ರಿ ಕುಸಿದು ಬಿದ್ದಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ. ಅವಘಡ ನಡೆಯುವಾಗ ಭಕ್ತರು ಯಾರೂ ಸ್ಥಳದಲ್ಲಿ ಇರಲಿಲ್ಲ. ಆದ್ದರಿಂದ ಯಾರು ಗಾಯಗೊಂಡಿಲ್ಲ.
ಕಲಶ ಕುಸಿದು ಬಿದ್ದಿರುವುದು ಅಪಶಕುನ ಎಂದು ಭಕ್ತರು ಆತಂಕಗೊಂಡಿದ್ದಾರೆ. ಶುಕ್ರವಾರ ದೇವಾಲಯದಲ್ಲಿ ವಿಶೇಷ ಹೋಮ, ಹವನ, ಪೂಜೆ ನಡೆಸಲಾಗುತ್ತಿದ್ದು, ನೂರಾರು ಭಕ್ತರು ಪಾಲ್ಗೊಂಡಿದ್ದಾರೆ.
ಸುಮಾರು 500 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಗೋಪುರದ 30 ಅಡಿ ಮೇಲ್ಭಾಗದಲ್ಲಿ ಕಲಶವಿತ್ತು. ಗುರುವಾರ ಸಂಜೆ ಇದ್ದಕ್ಕಿದ್ದಂತೆ ಅದು ಕುಸಿದು ಬಿದ್ದು, ಐದು ಚೂರುಗಳಾಗಿವೆ. ಇದರಿಂದ ದೇವಾಲಯದ ಭಕ್ತರು ಆತಂಕ ಗೊಂಡಿದ್ದಾರೆ.
ಕಲಶ ಬಿದ್ದ ತಕ್ಷಣ ದೇವಾಲಯದ ಸುತ್ತಮುತ್ತಲಿನ ಅಂಗಡಿಗಳನ್ನು ಮುಚ್ಚಿದ ವ್ಯಾಪಾರಿಗಳು ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿ ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಕಳಶ ಇದ್ದಕ್ಕಿದ್ದಂತೆ ಉರುಳಿ ಬೀಳಲು ಕಾರಣವೇನು ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ವಿಜಯನಗರದ ಅರಸರು ನಿರ್ಮಿಸಿದ್ದ ಈ ದೇವಸ್ಥಾನ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ. ತಿರುಪತಿಯಿಂದ 36 ಕಿ.ಮೀ.ದೂರದಲ್ಲಿದ್ದು, ನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications