ಮಹಾನಗರ ಪಾಲಿಕೆಗಳ ಮೀಸಲಾತಿ ಘೋಷಣೆ

2013ರ ಮಾರ್ಚ್ ತಿಂಗಳಿನಲ್ಲಿ ಬಿಬಿಎಂಪಿ ಹೊರತುಪಡಿಸಿ ಅವಧಿ ಪೂರ್ಣಗೊಂಡಿದ್ದ ರಾಜ್ಯದ ಏಳು ನಗರಪಾಲಿಕೆಗಳು ಸೇರಿದಂತೆ 208 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು.
ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾದರೂ ಮೇಯರ್ ಮತ್ತು ಉಪ ಮೇಯರ್ ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಸೂಚನೆ ಹೊರಡಿಸಿರಲಿಲ್ಲ.
ಗುರುವಾರ ಬಿಬಿಎಂಪಿ ಸೇರಿದಂತೆ ಎಂಟು ಮಹಾ ನಗರಪಾಲಿಕೆಗಳ ಹುದ್ದೆಗಳಿಗೆ ಮೀಸಲಾತಿ ನಿಗದಿಗೊಳಿಸಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಎದುರಾಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದಕ್ಕೆ ಎಲ್ಲ ರಾಜಕೀಯ ಪಕ್ಷಗಳೂ ವಿರೋಧ ವ್ಯಕ್ತಪಡಿಸಿ ಹೈಕೋರ್ಟ್ ಮೆಟ್ಟಿಲೇರಿದ್ದವು.
ಆದರೆ, ಅವಧಿ ಪೂರ್ಣಗೊಂಡ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ ಎಂಬ ಚುನಾವಣಾ ಆಯೋಗದ ಧೃಡ ನಿರ್ಧಾರದಿಂದಾಗಿ ಚುನಾವಣೆ ನಡೆದಿತ್ತು. ನಂತರ, ವಿಧಾನಸಭೆ ಚುನಾವಣೆ ಘೋಷಣೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ರಚನೆಗೊಂಡರೂ, ಮೂರುವರೆ ತಿಂಗಳಿಂದ ಮೀಸಲು ನಿಗದಿ ವಿಚಾರ ನೆನೆಗುದಿಗೆ ಬಿದ್ದಿತ್ತು.
ಬೆಂಗಳೂರು ಮಹಾನಗರ ಪಾಲಿಕೆಯ ಮೀಸಲಾತಿ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಬಿಬಿಎಂಪಿಯ ಮೇಯರ್- ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಕಲ್ಪಿಸಿರುವ ನಗರಾಭಿವೃದ್ಧಿ ಇಲಾಖೆ, ಅದರ ಜತೆಗೆ ರಾಜ್ಯದ ಏಳು ಮಹಾ ನಗರಪಾಲಿಕೆಗಳಿಗೂ ಮೀಸಲಾತಿ ಪ್ರಕಟಿಸಿದೆ.
ಆದರೆ, ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿಯನ್ನು ಸರ್ಕಾರ ಇನ್ನೂ ಪ್ರಕಟಿಸಿಲ್ಲ. ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸುವಲ್ಲಿ ಸರ್ಕಾರ ಇನ್ನೂ ವಿಳಂಬ ನೀತಿ ಅನುಸರಿಸುತ್ತಿದೆ.
ರಾಜ್ಯದ ಎಂಟು ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳ ಮೀಸಲು ಪಟ್ಟಿ:
| ಪಾಲಿಕೆ | ಮೇಯರ್ | ಉಪ ಮೇಯರ್ |
| ಬಿಬಿಎಂಪಿ | ಸಾಮಾನ್ಯ | ಸಾಮಾನ್ಯ ಮಹಿಳೆ |
| ಬೆಳಗಾವಿ | ಹಿಂದುಳಿದ ವರ್ಗ (ಎ) | ಸಾಮಾನ್ಯ ಮಹಿಳೆ |
| ಬಳ್ಳಾರಿ | ಪರಿಶಿಷ್ಟ ಜಾತಿ | ಹಿಂದುಳಿದ ವರ್ಗ (ಬಿ) ಮಹಿಳೆ |
| ದಾವಣಗೆರೆ | ಪರಿಶಿಷ್ಟ ಜಾತಿ ಮಹಿಳೆ | ಹಿಂದುಳಿದ ವರ್ಗ (ಎ) |
| ಗುಲ್ಬರ್ಗಾ | ಹಿಂದುಳಿದ ವರ್ಗ (ಎ) ಮಹಿಳೆ | ಸಾಮಾನ್ಯ |
| ಹುಬ್ಬಳ್ಳಿ-ಧಾರವಾಡ | ಸಾಮಾನ್ಯ | ಪರಿಶಿಷ್ಟ ವರ್ಗ ಮಹಿಳೆ |
| ಮೈಸೂರು | ಸಾಮಾನ್ಯ ಮಹಿಳೆ | ಪರಿಶಿಷ್ಟ ಜಾತಿ |
| ಮಂಗಳೂರು | ಸಾಮಾನ್ಯ ಮಹಿಳೆ | ಸಾಮಾನ್ಯ |
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications