VHP ಯಾತ್ರೆಗೆ ಕ್ಷಣಗಣನೆ:ಸಿಎಂ ಎಲ್ಲಾ ಕೆಲಸ ಬಂದ್
ಲಕ್ನೋ, ಆ 24: ವಿಶ್ವ ಹಿಂದೂ ಪರಿಷತ್ ನಡೆಸಲು ಉದ್ದೇಶಿಸಿರುವ 'ಚೌರಾಸಿ ಕೋಸ್ ಪರಿಕ್ರಮಾ ಯಾತ್ರೆ'ಗೆ ಕ್ಷಣಗಣನೆ ಆರಂಭವಾಗಿದೆ. ಯಾತ್ರೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಉತ್ತರಪ್ರದೇಶ ಸರಕಾರ ಹೇಳಿದರೆ, ಶತಾಯುಗತಾಯು ಯಾತ್ರೆ ನಡೆಸಿಯೇ ತೀರುವುದಾಗಿ ವಿಎಚ್ಪಿ ಹಠ ಹಿಡಿದಿದೆ.
ಭಾನುವಾರದಿಂದ (ಆ 25) ಆರಂಭವಾಗಲಿರುವ ವಿಎಚ್ಪಿ ಪ್ರಾಯೋಜಿತ ಯಾತ್ರೆಗೆ ಈಗಾಗಲೇ ಉತ್ತರ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯಾದ್ಯಂತ ಭಾರೀ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಮಧ್ಯೆ, ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಭಾನುವಾರದ (ಆ 25) ತನ್ನ ಎಲ್ಲಾ ಸರಕಾರಿ ಮತ್ತು ಖಾಸಾಗಿ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ. ಲಕ್ನೋದಲ್ಲಿ ಕೂತು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದ್ದಾರೆ.
ಶುಕ್ರವಾರ (ಆ 23) ಸೇನೆ ಅಯೋಧ್ಯೆಯಲ್ಲಿ ಪಥಸಂಚಲನ ನಡೆಸಿ ಶಾಂತಿ ಕಾಪಾಡುವ ಭರವಸೆಯನ್ನು ಜನತೆಗೆ ನೀಡಿದೆ. ಯಾವುದೇ ಕಾರಣಕ್ಕೂ ಯಾತ್ರೆಯನ್ನು ಕೈಬಿಡುವುದಿಲ್ಲ ಎಂದು ವಿಎಚ್ಪಿ ನಾಯಕರು ಪಟ್ಟು ಹಿಡಿದಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಏನಿದು ಯಾತ್ರೆ? ಸ್ಲೈಡಿನಲ್ಲಿ..

ಚೌಕಾಸಿ ಕೋಸ್ ಯಾತ್ರೆ
ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣಕ್ಕೆ ಒತ್ತಡ ತರಲು ವಿಎಚ್ಪಿ ಈ ಯಾತ್ರೆಗೆ ಮುಂದಾಗಿದೆ. ಆಗಸ್ಟ್ 25ರಿಂದ ಸೆಪ್ಟಂಬರ್ 13ರ ವರೆಗೆ ಉತ್ತರ ಪ್ರದೇಶದ ಆರು ಜಿಲ್ಲೆಗಳ ಮೂಲಕ ಈ ಯಾತ್ರೆ ಸಾಗಲಿದೆ.

ಯಾತ್ರೆ ಸಾಗುವ ಜಿಲ್ಲೆಗಳು
ಅಯೋಧ್ಯೆಯಲ್ಲಿ ಆರಂಭವಾಗುವ ಈ ಯಾತ್ರೆ ಫೈಜಾಬಾದ್, ಬಸ್ತಿ, ಬಾರಬಂಕಿ, ಗೊಂಡಾ, ಬಹ್ರಿಚ್ ಮತ್ತು ಅಂಬೇಡ್ಕರ್ ನಗರ ಜಿಲ್ಲೆಯ ಮೂಲಕ ಸಾಗಲಿದೆ. ಹಿಂದೂ ಸಂಘಟನೆಯ ಪ್ರಮುಖ ನಾಯಕರು ಅಯೋಧ್ಯೆಯಲ್ಲಿ ಈಗಾಗಲೇ ಬೀಡು ಬಿಟ್ಟಿದ್ದಾರೆ.

ವಿಎಚ್ಪಿ ಮುಖಂಡರಿಗೆ ಅರೆಸ್ಟ್ ವಾರಂಟ್
ವಿಎಚ್ಪಿ ಮುಖಂಡರಾದ ಅಶೋಕ್ ಸಿಂಘಾಲ್, ಪ್ರವೀಣ್ ಭಾಯ್ ತೊಗಡಿಯಾ, ರಾಮ್ ವಿಲಾಸ್ ವೇದಂತಿ ಸೇರಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಎಪ್ಪತ್ತು ವಿಎಚ್ಪಿ ನಾಯಕರಿಗೆ ಉತ್ತರಪ್ರದೇಶ ಸರಕಾರ ಬಂಧನದ ವಾರಂಟ್ ಜಾರಿ ಮಾಡಿದೆ.

ಅಶೋಕ್ ಸಿಂಘಾಲ್
ಸರಕಾರದ ಯಾವುದೇ ಬೆದರಿಕೆಗೆ ನಾವು ಸೊಪ್ಪು ಹಾಕುವುದಿಲ್ಲ. ಯಾತ್ರೆ ನಡೆಸಿಯೇ ತೀರುತ್ತೇವೆ. ರಾಮಮಂದಿರಕ್ಕಾಗಿ ಯಾತ್ರೆ ನಡೆಸುವುದು ಹಿಂದೂಗಳ ಧಾರ್ಮಿಕ ಹಕ್ಕು ಎಂದು ಸಿಂಘಾಲ್ ಯಾತ್ರೆಯ ಉದ್ದೇಶವನ್ನು ಸ್ಪಷ್ಟ ಪಡಿಸಿದ್ದಾರೆ.

ಉತ್ತರಪ್ರದೇಶ ಸರಕಾರ
ಯಾತ್ರೆಯನ್ನು ತಡೆಯಲು ಅಖಿಲೇಶ್ ಸರಕಾರ ಸಾಧ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಮುಂದಾಗಿದೆ. ಎರಡು ಎಸ್ಪಿ, 16 ಸಹಾಯಕ ಎಸ್ಪಿ, 32 ಡೆಪ್ಯುಟಿ ಎಸ್ಪಿ, 80 ಇನ್ಸ್ ಪೆಕ್ಟರ್, 240 ಸಬ್ ಇನ್ಸ್ ಪೆಕ್ಟರ್ ಸೇರಿ ಪೋಲಿಸ್ ಸರ್ಪಗಾವಲನ್ನೇ ಹಾಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications