ಉರುಳುಸೇವೆಯಿಂದ ಅಂಬರೀಷಣ್ಣ ಪಾರು, ಆದರೂ!
ಮಂಡ್ಯ, ಆಗಸ್ಟ್ 26: ಎಸ್ಎಂ ಕೃಷ್ಣ ಜತೆಗಿನ ಮುನಿಸಿನ ನಡುವೆಯೂ ನಟಿ ರಮ್ಯಾ ಗೆಲುವಿಗೆ ಟೊಂಕಕಟ್ಟಿ ನಿಂತ 'ಮಂಡ್ಯದ ಗಂಡು' ಅಂಬರೀಷ್ ಗೆ ಈಗ ಆತ್ಮಾನಂದವಾಗಿರಬಹುದು.
ರಮ್ಯಾ ಗೆಲುವಿಗೆ ಸಾಕಷ್ಟು ಶ್ರಮ ಹಾಕಿದ್ದ ಅಂಬರೀಷ್ ಈಗ 'ಸದ್ಯ ದೊಡ್ಡ ಪ್ರಯಾಸದಿಂದ ಪಾರಾಗಿದ್ದಾರೆ' ಎಂದು ಅಂಬಿ ಅಭಿಮಾನಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಏನಪ್ಪಾ ಅಂದರೆ ಮತದಾರರನ್ನು ಓಲೈಕೆ ಮಾಡುವ ಭರದಲ್ಲಿ ಅಣ್ಣ ಅಂಬಿ ಅವರು ನನ್ನ ಕ್ಷೇತ್ರದಲ್ಲಿ (ಮಂಡ್ಯದಲ್ಲಿ) ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ನನಗಿಂತ ಒಂದೇ ಒಂದು ಮತ ಹೆಚ್ಚು ಗಳಿಸಿದ್ದೇ ಆದರೆ ತಾನು ಸೋಮೇಶ್ವರನ ಗುಡಿಯಲ್ಲಿ ಉರುಳು ಸೇವೆ ಮಾಡುವುದಾಗಿ ಸೋಮೇಶ್ವರನ ಸಮ್ಮುಖದಲ್ಲಿ ಹರಕೆ ಕಮ್ ವಾಗ್ದಾನ ನೀಡಿದ್ದರು.

ಲೋಕಸಭೆ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಆಗಸ್ಟ್ 13ರಂದು ಬಸರಾಳು ಗ್ರಾಮದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಅಂಬರೀಷ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಮಂಡ್ಯ ಕ್ಷೇತ್ರದಲ್ಲಿ ಪಡೆದ ಮತಗಳಿಗಿಂತ ಒಂದು ಮತ ಹೆಚ್ಚಿಗೆ ಪಡೆದು ರಮ್ಯಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ತಾವು ಸೋಮೇಶ್ವರನ ಗುಡಿಯಲ್ಲಿ ಉರುಳುಸೇವೆ ಮಾಡುವುದಾಗಿ ಪ್ರಕಟಿಸಿದ್ದರು.
ಅಂಬರೀಷಣ್ಣ ಉರುಳುಸೇವೆ ಮಾಡುವುದು ಖಚಿತ?: ಈಗ ರಮ್ಯಾ ಉಪಚುನಾವಣೆಯಲ್ಲಿ ಭರ್ಜರಿ ಗೆಲುವ ದಾಖಲಿಸಿಯಾಗಿದೆ. ಆದರೆ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅವರು ಪಡೆದಿರುವ ಮತಗಳು 60,182. ಅದೇ ಅಂಬರೀಷ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 90,329 ಮತ ಗಳಿಸಿದ್ದರು.
ರಮ್ಯಾ ಅಂಬಿಗಿಂತ ಒಂದು ಮತ ಹೆಚ್ಚಿಗೆ ಪಡೆಯುವುದು ಹಾಗಿರಿಲಿ 30,147 ಮತಗಳಿಂದ ವಂಚಿತರಾಗಿದ್ದಾರೆ. ಹಾಗಾಗಿ, ಅಂಬರೀಷಣ್ಣ ಉರುಳುಸೇವೆ ಮಾಡುವುದರಿಂದ ಬಚಾವಾಗಿದ್ದಾರೆ ಎನ್ನಬಹುದು. ಆದರೆ ಆ ಸೋಮೇಶ್ವರನೇ ರಮ್ಯಾರನ್ನು ಗೆಲ್ಲಿಸಿದ್ದು ಎಂದು ಕೃತಜ್ಞತಾಭಾವದಿಂದ ಭಕ್ತಿಪೂರ್ವಕವಾಗಿ ಅಂಬರೀಷಣ್ಣ ಉರುಳುಸೇವೆ ಮಾಡುವುದು ಖಚಿತ ಎನ್ನುತ್ತಿದ್ದಾರೆ ಮಂಡ್ಯದ ಪಡ್ಡೆಗಳು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications