ಸುಳ್ಳು ಹೇಳಿ ಪಡೆದ ಜಿ ಕೆಟಗರಿ ಸೈಟ್ ಗಳಿಗೆ ಕುತ್ತು

ಜಿ ಕೆಟಗರಿಯ 313 ನಿವೇಶನ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಹೈ ಕೋರ್ಟ್ ಆದೇಶದಂತೆ, ಬಿಡಿಎ ನ್ಯಾ.ಬಿ.ಪದ್ಮರಾಜ್ ನೇತೃತ್ವದ ಮೂವರು ಸದಸ್ಯರ ಸಮಿತಿ ರಚಿಸಿತ್ತು. ಸಮಿತಿಯು ಸೋಮವಾರ ಸರ್ಕಾರಕ್ಕೆ ತನ್ನ ವರದಿ ನೀಡಿದೆ.
ವರದಿಯಲ್ಲಿ ಸ್ವಂತ ಮನೆ, ನಿವೇಶನ ಹೊಂದಿದ್ದರೂ ಹಾಗೂ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಸೈಟ್ ಪಡೆದಿದ್ದರೂ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಜಿ-ಕೆಟಗರಿ ನಿವೇಶನ ಪಡೆದಿದ್ದರೆ, ಅದನ್ನು ರದ್ದಗೊಳಿಸುವಂತೆ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಸಮಿತಿಯ ವರದಿ ಪ್ರಕಾರ ಹಾಲಿ ಮತ್ತು ಮಾಜಿ ಮಂತ್ರಿಗಳು, ಶಾಸಕರು, ಸಂಸದರು ಸೇರಿದಂತೆ ಅನೇಕರು ಸುಳ್ಳುಪ್ರಮಾಣ ಪತ್ರ ಸಲ್ಲಿಸಿ ಜಿ-ಕೆಟಗರಿಯಡಿ ಬಿಡಿಎ ನಿವೇಶನ ಪಡೆದಿರುವುದು ವಿಚಾರಣೆಯಲ್ಲಿ ಪತ್ತೆಯಾಗಿದೆ.
ಸಮಿತಿಯಲ್ಲಿದ್ದ ನ್ಯಾ.ರಂಗವಿಠಲಚಾರ್ ಹಾಗೂ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಪಿ.ಬಿ.ಮಹಿಷಿ, ಎಂಟು ತಿಂಗಳ ವಿಚಾರಣೆ ಬಳಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸೊದೆ. ಸಮಿತಿಯ ವಿಚಾರಣಾ ವರದಿಯನ್ನು ಸರ್ಕಾರ ಹೈಕೋರ್ಟ್ಗೆ ಸಲ್ಲಿಸಲಿದೆ.
ಕೈ ತಪ್ಪಲಿದೆ ನಿವೇಶನ : ಸಮಿತಿಯ ವರದಿಯ ಕುರಿತು ಕೆಲವು ಮಾಹಿತಿಗಳು ಲಭ್ಯವಾಗಿವೆ. ಸುಳ್ಳುಪ್ರಮಾಣ ಪತ್ರ ನೀಡಿ ಪಡೆದ ನಿವೇಶನಗಳು ರದ್ದಾಗಲಿವೆ. ಆದರೆ, ನಿವೇಶನದಲ್ಲಿ ಮನೆ ಕಟ್ಟಿಕೊಂಡಿದ್ದರೆ ಅಥವ ಮಾರಾಟ ಮಾಡಿ ನೋಂದಣಿ ಮಾಡಿಸಿಕೊಂಡಿದ್ದರೆ ನಿವೇಶನ ರದ್ದಾಗುವುದಿಲ್ಲ.
ಜನಪ್ರತಿನಿಧಿಗಳು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಬಿಡಿಎಯಿಂದ ನಿವೇಶನ ಪಡೆದಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇಂಥವರ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಮಿತಿ ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ.
ರಾಜಕೀಯ ನಾಯಕರು ಹೆಚ್ಚು : ಜಿ-ಕೆಟಗರಿಯಡಿ ನಿವೇಶನ ಪಡೆದ 313 ಮಂದಿಯಲ್ಲಿ ಜನಪ್ರತಿನಿಧಿಗಳ ಸಂಖ್ಯೆಯೇ ಹೆಚ್ಚಿದೆ. ಹಾಲಿ ಮತ್ತು ಮಾಜಿ ಶಾಸಕರು/ಸಂಸದರು ತಮ್ಮ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ನಿವೇಶನಗಳನ್ನು ಪಡೆದಿದ್ದಾರೆ. (ಜಿ ಕೆಟಗರಿ ನಿವೇಶನ ತನಿಖೆಗೆ ಸಮಿತಿ ರಚನೆ)
ಸಮಿತಿ ಕೆಎಚ್ಬಿ, ನಗರಾಭಿವೃದ್ಧಿ ಪ್ರಾಧಿಕಾರಗಳು, ಬಿಡಿಎ, ಬಿಬಿಎಂಪಿ, ನಗರಸಭೆ, ನೋಂದಣಿ ಇಲಾಖೆಯಿಂದ ಮಾಹಿತಿಗಳನ್ನು ತರಿಸಿಕೊಂಡು ಅಕ್ರಮಗಳನ್ನು ಪತ್ತೆ ಹಚ್ಚಿದೆ. ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದೆ.
ಶಿಕ್ಷೆ ಏನು : ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಪಡೆದ ನಿವೇಶನ ರದ್ದುಪಡಿಸುವ ಜೊತೆಗೆ, ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 463, 464, 465 ಪ್ರಕಾರ ಕೇಸು ದಾಖಲಿಸಿ, ಗರಿಷ್ಟ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications