ಯುಪಿಎ ಸರ್ಕಾರದ ಆಹಾರ ಭದ್ರತೆಗೆ ಅನುಮೋದನೆ ಸಿಕ್ತು!
ನವದೆಹಲಿ, ಆಗಸ್ಟ್ 27: ಕಾಂಗ್ರೆಸ್ ನೇತೃತ್ವದ ಯುಪಿಎ-2 ಸರ್ಕಾರ ಮಂಡಿಸಿದ ಮಹತ್ವಾಕಾಂಕ್ಷಿ ಆಹಾರ ಭದ್ರತಾ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಬಹುಚರ್ಚಿತ ಮಸೂದೆಗೆ ಸೋಮವಾರ ರಾತ್ರಿ 10.45ರಲ್ಲಿ ಅನುಮೋದನೆ ಸಿಕ್ಕಿದೆ.
ಆದರೆ ರಾಜಕೀಯ ಮಹತ್ವದ ಈ ಮಸೂದೆಗೆ ಅಂಗೀಕಾರ ಪಡೆಯುವಾಗ ಮಸೂದೆಯ ರೂವಾರಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು AIIMS ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ಮಂಗಳವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹಾಗಾಗಿ ಭಾರತಕ್ಕೆ ನಿನ್ನೆಯ ದಿನ (ಆಗಸ್ಟ್ 26) ಚರಿತ್ರಾರ್ಹ ದಿನವಾಗಿದೆ ಎಂದೇ ಹೇಳಬಹುದು. ಆಹಾರ ಭದ್ರತೆಯ ಸಾಧಕಗಳು ಎಂದಿಗೋ ಎಂಬುದು ಪ್ರಶ್ನಾರ್ಹವಾದರೂ ಬಡವರಿಗೆ ಆಹಾರ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆಯಾಗಿದೆ ಎಂದು ಸಂತಸ/ಸಮಾಧಾನಪಡಬಹುದು.

ಈ ಆಹಾರ ಭದ್ರತೆ ಮಸೂದೆ ಜಾರಿಗೆ ತರುವುದಾಗಿ ಕಾಂಗ್ರೆಸ್ ಪಕ್ಷ 2009ರ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಮಸೂದೆಗೆ ಅಪಸ್ವರವೆತ್ತಿ, ವಿರೋಧ ಪಕ್ಷಗಳು ಮಸೂದೆಯಲ್ಲಿ 308 ತಿದ್ದುಪಡಿಗಳು ಆಗಬೇಕು ಎಂದು ಸೂಚಿಸಿದ್ದವು. ಆದರೆ ಅದ್ಯಾವುದಕ್ಕೂ ಸಂಸತ್ತಿನಲ್ಲಿ ಮನ್ನಣೆ ಸಿಗಲಿಲ್ಲ.
ಅಹಾರ ಸಚಿವ ಕೆ ವಿ ಥಾಮಸ್ ಸೂಚಿಸಿದ ಹತ್ತು ಅಧಿಕೃತ ತಿದ್ದುಗಳು ಮಾತ್ರ ಅಂಗೀಕೃತಗೊಂಡವು. ಆದಾಗ್ಯೂ ವಿರೋಧ ಪಕ್ಷಗಳು ಮಂಡಿಸಿರುವ ತಿದ್ದುಪಡಿಗಳನ್ನು ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಆದ್ಯವಾಗಿ ಪರಿಗಣಿಸಲಾಗುವುದು ಎಂದು ಸಚಿವ ಥಾಮಸ್ ಸ್ಪಷ್ಟಪಡಿಸಿದರು.
ಬಿಜೆಪಿದು ಅರೆಮನಸ್ಸಿನ ಬೆಂಬಲ:
ಪ್ರತಿಪಕ್ಷವಾದ ಬಿಜೆಪಿ ವಿಧೇಯಕವನ್ನು ಅರೆಮನಸ್ಸಿನಿಂದ ಬೆಂಬಲಿಸಿದ್ದರಿಂದ ವಿಧೇಯಕ ಜಾರಿ ಸುಗಮವಾಯಿತು. ಇದರ ಜತೆಗೆ ಹಿಂದೂ ವಿವಾಹ ಕಾಯಿದೆಯನ್ನು ಮತ್ತಷ್ಟು ಮಹಿಳಾ ಸ್ನೇಹಿಯಾಗಿಸುವ ವಿಧೇಯಕಕ್ಕೂ ರಾಜ್ಯಸಭೆ ಅನುಮೋದನೆ ನೀಡಿದೆ. ಈ ನಡುವೆ ಸಂಸತ್ ಅಧಿವೇಶನವನ್ನು ಸೆ. 6ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ವಿಶ್ವದ ಅತಿ ದೊಡ್ಡ ಯೋಜನೆ:
ಮಸೂದೆ ಮೇಲಿನ ಚರ್ಚೆಯಲ್ಲಿ ಆರಂಭದಲ್ಲಿ ಮಾತನಾಡಿದ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಬಡವರ ಹಸಿವು ಮತ್ತು ಅಪೌಷ್ಟಿಕತೆ ತೊಡೆದುಹಾಕುವ ಉದ್ದೇಶದಿಂದ ರೂಪಿಸಿರುವ ಆಹಾರ ಭದ್ರತಾ ಮಸೂದೆಗೆ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ಬದಿಗೊತ್ತಿ ಬೆಂಬಲ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದರು.
'ಜನರ ಹಸಿವು ನೀಗಿಸುವ ನಿಟ್ಟಿನಲ್ಲಿ ಇದು ವಿಶ್ವದ ಅತಿ ದೊಡ್ಡ ಯೋಜನೆಯಾಗಿದೆ. ಈ ವಿಧೇಯಕ ಜಾರಿಯಿಂದಾಗಿ ದೇಶದ ಶೇ. 67ರಷ್ಟು, ಅಂದರೆ 82 ಕೋಟಿ ಜನ ರಿಯಾಯಿತಿ ದರದಲ್ಲಿ ಆಹಾರ ಧಾನ್ಯ ಪಡೆಯಲಿದ್ದಾರೆ ಎಂದು ಅವರು ಸಂಸತ್ತಿಗೆ ತಿಳಿಸಿದರು.
'ಈ ಮಹತ್ವದ ಯೋಜನೆಗೆ ಅಗತ್ಯವಿರುವ ಸಂಪನ್ಮೂಲ ಇಲ್ಲ' ಎಂಬ ವಿರೋಧ ಪಕ್ಷಗಳ ಆಕ್ಷೇಪವನ್ನು ತಳ್ಳಿಹಾಕಿದರು. 'ಆಹಾರ ಭದ್ರತೆ ಮಸೂದೆ ಜಾರಿಗೆ ಸಹಕರಿಸುವ ಮೂಲಕ ಎಲ್ಲ ಜನರಿಗೂ ಆಹಾರ ಒದಗಿಸಲು ದೇಶ ಸಶಕ್ತವಾಗಿದೆ' ಎಂಬ ಸಂದೇಶ ಕಳುಹಿಸಬೇಕೆಂದು ಸಲಹೆ ಮಾಡಿದರು.
ಆಹಾರ ಭದ್ರತೆ ಯೋಜನೆ ಉದ್ದೇಶಿತ ಫಲಾನುಭವಿಗಳಿಗೆ ಮುಟ್ಟಬೇಕಾದರೆ ಪಡಿತರ ವಿತರಣಾ ವ್ಯವಸ್ಥೆಯಲ್ಲಿನ ಸೋರಿಕೆ ತಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖ ಆಗಲಿದೆ ಎಂದು ಭರವಸೆ ನೀಡಿದರು.
ಮತ ಭದ್ರತೆ ಮಸೂದೆ:
ಇದು ಆಹಾರ ಭದ್ರತೆ ಮಸೂದೆಯಲ್ಲ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮಂಡಿಸಿದ ಮತ ಭದ್ರತೆ ಮಸೂದೆ' ಎಂದು ಬಿಜೆಪಿಯ ಮುರಳಿ ಮನೋಹರ ಜೋಷಿ ಅವರು ಟೀಕಿಸಿದರಾದರೂ 'ನಾವು ಆಹಾರ ಮಸೂದೆ ಪರವಾಗಿದ್ದೇವೆ. ಆದರೆ, ಅದರಲ್ಲಿರುವ ಕೆಲವು ನ್ಯೂನತೆಗಳನ್ನು ಸರಿಪಡಿಸಬೇಕು' ಎಂದು ಸಲಹೆ ಮಾಡಿದರು.
ಚುನಾವಣೆ ಮೇಲೆ ಕಣ್ಣು:
ಯುಪಿಎಗೆ ಹೊರಗಿನಿಂದ ಬೆಂಬಲ ಕೊಡುತ್ತಿರುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂಸಿಂಗ್ ಯಾದವ್, 2014ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಆಹಾರ ಭದ್ರತೆ ಮಸೂದೆ ಜಾರಿಗೆ ತರಲಾಗುತ್ತಿದೆ ಎಂದು ಟೀಕಿಸಿದರು. ಯೋಜನೆಯಿಂದ ರಾಜ್ಯಗಳ ಮೇಲೆ ಹೆಚ್ಚುವರಿ ಹೊರೆ ಬೀಳುವುದರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಿದರೆ ಬೆಂಬಲ ಕೊಡಲು ಸಿದ್ಧ ಎಂಬ ಷರತ್ತು ಹಾಕಿದರು.
ಮಸೂದೆಯ ವಿಶೇಷತೆಗಳೇನು?
ಆಹಾರ ಭದ್ರತೆ ಮಸೂದೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ ತಿಂಗಳಿಗೆ 5 ಕೆಜಿ ಆಹಾರ ಧಾನ್ಯ ಪೂರೈಸಲಿದೆ. ಇದರಲ್ಲಿ 1 ಕೆಜಿ ಅಕ್ಕಿಗೆ 3 ರೂಪಾಯಿ, ಗೋಧಿಗೆ 2 ರೂಪಾಯಿ, ಬೇಳೆ ಕಾಳಿಗೆ 1 ರೂಪಾಯಿ ದರ ನಿಗದಿಪಡಿಸಲಾಗಿದೆ. ಸುಮಾರು 80 ಕೋಟಿ ಜನರಿಗೆ ಇದರ ಲಾಭ ದೊರೆಯಲಿದ್ದು, ಸರ್ಕಾರದ ಮೇಲೆ ಪ್ರತಿವರ್ಷ ಸುಮಾರು 1.25 ಲಕ್ಷ ಕೋಟಿ ರೂಪಾಯಿ ಹೊರೆ ಬೀಳಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications