ಸಂಸದ ನವಜೋತ್ ಸಿಂಗ್ ಸಿದ್ದು ನಾಪತ್ತೆ!

ಅಮೃತಸರ ನಗರದ ಪ್ರಮುಖ ಸಾರ್ವಜನಿಕ ಪ್ರದೇಶಗಳಲ್ಲಿ ಈ ಭಿತ್ತಿಪತ್ರ ಮಂಗಳವಾರ ಬೆಳಗ್ಗೆ ಪತ್ತೆಯಾಗಿದ್ದು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು ಇದನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿದೆ.
ಅಮೃತಸರದ ಸಂಸದ ನವಜೋತ್ ಸಿಂಗ್ ಸಿದ್ದು ಕೆಲವು ದಿನಗಳಿಂದ ಕಾಣೆಯಾಗಿದ್ದು, ಅವರನ್ನು ಹುಡುಕಿಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಭಿತ್ತಿಪತ್ರ ಮುದ್ರಣಗೊಂಡಿದೆ.
ಸಿದ್ದು ವಿರುದ್ಧ ಆಕ್ರೋಶ : ಲೋಕಸಭೆ ಚುನಾವಣೆಗೂ ಮುನ್ನ ಸಿದ್ದು ಅಮೃತಸರ ಕ್ಷೇತ್ರವನ್ನು ಪ್ಯಾರಿಸ್ ನಗರದಂತೆ ಪರಿವರ್ತನೆ ಮಾಡುವುದಾಗಿ ಹೇಳಿದ್ದರು. ಆದರೆ, ಸಿದ್ದು ಕಳೆದ ಹಲವು ದಿನಗಳಿಂದ ಕ್ಷೇತ್ರಕ್ಕೆ ಆಗಮಿಸಿಲ್ಲ. ಕೇವಲ ಟಿವಿಯಲ್ಲಿ ಜನರು ಅವರನ್ನು ನೋಡುವಂತಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ವಚನ ಭ್ರಷ್ಟರಾದ ನವಜೋತ್ ಸಿಂಗ್ ಸಿದ್ದು ಎಲ್ಲಿದ್ದಾರೆ ಎಂದು ಹುಡುಕಿಕೊಡಿ ಎಂದು ಭಿತ್ತಿಪತ್ರದಲ್ಲಿ ಮನವಿ ಮಾಡಲಾಗಿದೆ. ಸಂಸದರ ಯೋಜನೆಯಡಿ ದೊರೆಯುವ ಅನುದಾನದಲ್ಲಿ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡಲು ಸಿದ್ದು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಕೇವಲ ಟಿವಿ ಕಾರ್ಯಕ್ರಮಗಳಲ್ಲಿ ಮಾತ್ರ ನವಜೋತ್ ಸಿಂಗ್ ಸಿದ್ದು ಕಾಣಿಸಿಕೊಳ್ಳುತ್ತಾರೆ. ಅವರ ಭರವಸೆ ನಂಬಿ ಮತ ನೀಡಿದ ಕ್ಷೇತ್ರದ ಮತದಾರರು, ಈಗ ಸಂಸದರನ್ನು ಎಲ್ಲಿ ಹುಡಕಬೇಕು? ಎಂದು ಪ್ರಶ್ನಿಸಲಾಗಿದೆ. 2012ರ ನಂತರ ಸಿದ್ದು ಕ್ಷೇತ್ರಕ್ಕೆ ಆಗಮಿಸಿಲ್ಲ ಎಂಬುದು ಕ್ಷೇತ್ರದ ಜನತೆಯ ಕೋಪಕ್ಕೆ ಕಾರಣವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications