ಶ್ರೀಕೃಷ್ಣನ ಜನ್ಮನಾಡಿನಲ್ಲಿ ಮುಸ್ಲಿಮರಿಗೆ ಓವರ್ ಟೈಂ
ಮಥುರಾ, ಆ 27: ಇಂದು ಬುಧವಾರ (ಆ 28) ಪೊರದೊಡೆಯ ಶ್ರೀಕೃಷ್ಣನ ಜನ್ಮದಿನದ ಸಂಭ್ರಮ. ಮಥುರಾ, ಉಡುಪಿ, ಪಂಡರಾಪುರ, ಗುರುವಾಯೂರು, ದ್ವಾರಕಾ ಮುಂತಾದ ಶ್ರೀಕೃಷ್ಣ ದೇವಾಲಯಗಳಲ್ಲಿ ಸಂಭ್ರಮ, ಸಡಗರದ ಜನ್ಮಾಷ್ಠಮಿ ಹಬ್ಬದ ಆಚರಣೆ.
ಇದು ಉತ್ತರಪ್ರದೇಶದ ಮಥುರಾ ನಗರಿ ವಸುದೇವ ಕೃಷ್ಣ ಹುಟ್ಟಿದ ಸ್ಥಳ. ಇಲ್ಲಿ ಜನ್ಮಾಷ್ಠಮಿ ಬಂತೆಂದರೆ ಸಡಗರವೋ ಸಡಗರ. ಹಿಂದೂ, ಮುಸ್ಲಿಂ ಭಾವೈಕ್ಯತೆಯ ಸಂಕೇತ ಎನ್ನುವಂತೆ ಮುಸ್ಲಿಂ ಭಾಂದವರು ಭಕ್ತಿ, ಸಡಗರದಲ್ಲಿ ಕೃಷ್ಣನ ಸೇವೆಗೆ ನಿಲ್ಲುತ್ತಾರೆ.
ಜನ್ಮಾಷ್ಠಮಿ ಹಬ್ಬಕ್ಕೆ ಕೃಷ್ಣನಿಗೆ ವಿವಿಧ ರೀತಿಯ ಪೋಷಾಕು,ಆಭರಣಗಳನ್ನು ಗಳನ್ನು ತೊಡಿಸುವುದು ವಾಡಿಕೆ. ಹಾಗಾಗಿ ಸಾವಿರಾರು ಮಂದಿ ಮುಸ್ಲಿಮರು ಹಗಲಿರುಳು ಈ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ.

(ಚಿತ್ರದಲ್ಲಿ: ವಿದ್ಯುತ್ ದೀಪದಿಂದ ಅಲಂಕೃತ ಗೊಂಡಿರುವ ಮಥುರಾ ದೇವಾಲಯ)
ವಿಶ್ವ ಹಿಂದೂ ಪರಿಷತ್ತಿನ ಆಯೋಜಿಸಿರುವ 'ಚೌರಾಸಿ ಕೋಸ್ ಪರಿಕ್ರಮಾ ಯಾತ್ರೆ' ಇಲ್ಲಿ ಎರಡು ಕೋಮಿನ ಬಾಂಧವ್ಯಕ್ಕೆ ಯಾವುದೇ ಅಡ್ದಿಯಾಗುವುದಿಲ್ಲ. ಆತ್ಮ ಸಂತೃಪ್ತಿಯಿಂದ ಮತ್ತು ಹಗಲು ರಾತ್ರಿ ಎನ್ನದೇ ಠಾಕೂರ್ ಜಿ (ಶ್ರೀಕೃಷ್ಣ) ಸೇವೆ ಮಾಡುತ್ತೇವೆ ಎನ್ನುತ್ತಾರೆ ಸ್ಥಳೀಯ ನಿವಾಸಿ ಅಕ್ರಂ ವಾಸಿಂ.
ಪ್ರತಿ ಜನ್ಮಾಷ್ಠಮಿಗೂ ಶ್ರೀಕೃಷ್ಣನಿಗೆ ಹೊಸ ವಿನ್ಯಾಸದ ಉಡುಗೆಯನ್ನು ತೊಡಗಿಸಲು ನಾವು ಉತ್ಸುಕರಾಗಿರುತ್ತೇವೆ. ಈ ಭಾಗದಲ್ಲಿ ಸುಮಾರು ಆರು ಸಾವಿರ ಕುಟುಂಬ ಈ ಕೆಲಸದಲ್ಲಿ ನಿರತರಾಗಿರುತ್ತೇವೆ ಎನ್ನುತ್ತಾರೆ ಇನ್ನೊಬ್ಬ ಸ್ಥಳೀಯ ನಿವಾಸ್ ಇಕ್ಬಾಲ್ ಅಹಮದ್.
ನಾವು ಮತ್ತು ಹಿಂದೂ ಬಾಂಧವರು ಸೋದರರಂತೆ ಇರುತ್ತೇವೆ. ಕೋಮು ಗಲಭೆಗೆ ಕಾರಣರಾಗುವುದು ರಾಜಕಾರಿಣಿಗಳು. ದೇಶದ ಯಾವುದೇ ಭಾಗದಲ್ಲೂ ಕೋಮು ಗಲಭೆ ನಡೆದರೂ ನಮ್ಮ ಸಂಬಂಧದ ನಡುವೆ ಯಾವುದೇ ಒಡಕು ಉಂಟಾಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ಮುಸ್ಲಿಂ ನಿವಾಸಿಗಳು.
ಎರಡೂ ಕೋಮಿನ ನಡೆವೆ ಪ್ರೀತಿ, ವಿಶ್ವಾಸ, ಸಾಮರಸ್ಯ ಹೀಗೇ ಮುಂದುವರಿಯಲಿ.

(ಚಿತ್ರದಲ್ಲಿ:ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿ)
ಉಡುಪಿ : ಎರಡು ದಿನಗಳ ಕೃಷ್ಣ ಜನ್ಮಾಷ್ಠಮಿ ಹಬ್ಬ ದೇವಾಲಯ ನಗರಿ ಉಡುಪಿಯಲ್ಲಿ ವಿಜ್ರುಂಭಣೆಯಿಂದ ಆರಂಭವಾಗಿದೆ. ಪರ್ಯಾಯ ಸೋದೆ ಶ್ರೀಗಳಿಂದ ಶ್ರೀಕೃಷ್ಣನಿಗೆ ತುಳಸಿ ಅರ್ಚನೆ, ಮಹಾಪೂಜೆ ನಡೆಯಲಿದೆ. ಮಧ್ಯರಾತ್ರಿ 12.10ಕ್ಕೆ ಅರ್ಘ್ಯ ಪ್ರಧಾನ ನಡೆಯಲಿದೆ.
ನಾಳೆ (ಆ 29) ಬೆಳಗ್ಗೆ ಮಹಾಪೂಜೆಯ ನಂತರ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ವೈಭವದ ವಿಟ್ಲಪಿಂಡಿ (ಮೊಸರು ಕುಡಿಕೆ) ರಥೋತ್ಸವ ನಡೆಯಲಿದೆ.
ಒನ್ ಇಂಡಿಯಾ ಕನ್ನಡದ ಸಮಸ್ತ ಓದುಗರಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಷಯಗಳು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications