ಗಂಡ ಕುಡುಕ: ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು
ಬೆಂಗಳೂರು, ಆ 28: ಗಂಡ ಕುಡುಕ ಎಂದು ಅವನಿಗೆ ಮತ್ತು ಅವನ ಕುಟುಂಬಕ್ಕೆ ಹೆಂಡತಿ ಮತ್ತು ಅವಳ ಮನೆಯವರು ಇನ್ನು ಮುಂದೆ ಕಿರುಕುಳ ನೀಡುವಂತಿಲ್ಲ. ಹೀಗೊಂದು ಅಪರೂಪದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಹೊರಡಿಸಿದೆ.
ಕೆಲಸಕ್ಕೆ ಹೋಗದೇ ಗಂಡ ಮದ್ಯವಸ್ಯಸಿಯಾಗಿ, ದುಡ್ಡು ನೀಡುವಂತೆ ಹೆಂಡತಿಗೆ ದಂಬಾಲು ಬಿದ್ದರೆ ಅದನ್ನು ಚಿತ್ರಹಿಂಸೆ, ಕ್ರೌರ್ಯ ಅಥವಾ ಕಿರುಕುಳ ಎಂದು ಹೇಳುವುದು ಸರಿಯಲ್ಲ.
ಇದೇ ಕಾರಣಕ್ಕೆ ಗಂಡ ಹೆಂಡತಿಯರ ನಡುವೆ ಮನಸ್ತಾಪ ಉಂಟಾಗಿ ಹೆಂಡತಿ ಆತ್ಮಹತ್ಯೆ ಮಾಡಿಕೊಂಡರೆ ಅವಳ ಸಾವಿಗೆ ಗಂಡನೇ ಪ್ರಚೋದನೆ ನೀಡಿದ್ದು ಎಂದು ಆತನ ಮೇಲೆ ಆಪಾದನೆ ಹೊರಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟ ಪಡಿಸಿದೆ.

ಈ ಪ್ರಕರಣದ ಹಿಂದೆ ಮುಂದೆ : ವೆಂಕಟಾಚಲಪತಿ ಮತ್ತು ರಾಧಿಕಾ ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ದಂಪತಿಗಳು. ಎಪ್ರಿಲ್ 1999ರಲ್ಲಿ ಮದುವೆಯಾದ ನಂತರ ವೆಂಕಟಾಚಲಪತಿ ಉಪನ್ಯಾಸಕ ಹುದ್ದೆಗೆ ವಿಶ್ರಾಂತಿ ನೀಡಿ ಮನೆಯಲ್ಲೇ ಟ್ಯೂಷನ್ ಆರಂಭಿಸಿದ್ದರು.
ಟ್ಯೂಷನ್ ಜೊತೆಗೆ ಕುಡಿತದ ಚಟ ಆರಂಭಿಸಿಕೊಂಡಿದ್ದ ವೆಂಕಟಾಚಲಪತಿ, ಕುಡಿಯಲು ದುಡ್ಡು ನೀಡುವಂತೆ ಹೆಂಡತಿಯನ್ನು ಪೀಡಿಸಲಾರಂಭಿಸಿದ್ದ. ಕುಡಿತ ಬಿಡುವಂತೆ ಹೆಂಡತಿ ಮಾಡಿದ ಒತ್ತಾಯಕ್ಕೆ, ಮನವಿಗೆ ಗಂಡ ಒಪ್ಪದೇ ಇದ್ದಾಗ ಹೆಂಡತಿ ಆಗಸ್ಟ್ 2004ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು.
ತನ್ನ ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಗಂಡನ ಮೇಲೆ ದೂರು ದಾಖಲಾಯಿತು. ಪೊಲೀಸರು ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಫಾಸ್ಟ್ ಟ್ರ್ಯಾಕ್ ಕೋರ್ಟ್ ವೆಂಕಟಾಚಲಪತಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಫಾಸ್ಟ್ ಟ್ರ್ಯಾಕ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ವೆಂಕಟಾಚಲಪತಿ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವೆಂಕಟಾಚಲಪತಿಗೆ ಕುಡಿತದ ಚಟ ಬಿಟ್ಟರೆ ಪತ್ನಿಯನ್ನು ಪೀಡಿಸಿಲ್ಲ ಅಥವಾ ಮಾನಸಿಕವಾಗಿ, ದೈಹಿಕವಾಗಿ ಹಿಂಸಿಸಿಲ್ಲ ಎಂದು ಆತನ ಪರ ವಕೀಲರು ವಾದಿಸಿದ್ದರು.
ಈ ಕುತೂಹಲಕಾರಿ ಕೇಸಿನ ಕೂಲಂಕುಷ ವಿಚಾರಣೆ ನಡೆಸಿದ ನ್ಯಾ.ಪಚ್ಚಾಪುರೆ ಅವರು ಈ ಮೇಲಿನ ಆದೇಶ ನೀಡಿ ವೆಂಕಟಾಚಲಪತಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ನೀಡಿದ್ದ ತೀರ್ಪನ್ನು ರದ್ದು ಮಾಡಿ, ಶಿಕ್ಷೆಯಿಂದ ವಿಮುಕ್ತರನ್ನಾಗಿ ಮಾಡಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications