ಅಪ್ರಾಮಾಣಿಕತೆಯನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡ ಸಿದ್ದು
ಬೆಂಗಳೂರು, ಆ. 29 : ರಾಜಕಾರಣಿಗಳನ್ನು ಮೈಕ್ ಮುಂದೆ ಬಿಟ್ರೆ ಸಾಕು ಅಥವಾ ರಾಜಕಾರಣಿಗಳು ಪತ್ರಕರ್ತರೆದಿರು ಬಂದ್ರೆ ಸಾಕು ಶುರು ಹಚ್ಚಿಕೊಳ್ಳುತ್ತಾರೆ. ಸಾಧನೆಯ ಪಟ್ಟಿಗೆ ಮೊದಲು ಕೊನೆಯಿರುವುದಿಲ್ಲ. ಪ್ರಾಮಾಣಿಕತೆಯ ತಲೆಯ ಮೇಲೆ ಹೊಡೆದಂತೆ ಭಾಷಣ ಬಿಗಿಯಲು ಆರಂಭಿಸುತ್ತಾರೆ. ಇದಕ್ಕೆ ಯಾವ ಮಂತ್ರಿ, ಮುಖ್ಯಮಂತ್ರಿಯೂ ಹೊರತಲ್ಲ.
ಆದರೆ, ಇಲ್ಲೊಬ್ಬರಿದ್ದಾರೆ ನೋಡಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳು! ಸಿದ್ದರಾಮಯ್ಯನವರು ಸಮಾರಂಭವೊಂದರಲ್ಲಿ, "ನಾನು ನೂರಕ್ಕೆ ನೂರರಷ್ಟು ಪ್ರಾಮಾಣಿಕನಾಗಿದ್ದೇನೆ ಎಂದು ಹೇಳಿದರೆ ನನಗೆ ನಾನೇ ಸುಳ್ಳು ಹೇಳಿಕೊಂಡಂತೆ" ಎಂದು ಹೇಳಿ ರಾಜಕಾರಣಿಗಳನ್ನು ಮಾತ್ರವಲ್ಲ ಪತ್ರಕರ್ತರೂ ಅಚ್ಚರಿಯಾಗುವಂತೆ ಮಾಡಿದರು ಮತ್ತು ಪ್ರಾಮಾಣಿಕತೆ ಪ್ರದರ್ಶಿಸಿದ್ದಕ್ಕೆ ಚಪ್ಪಾಳೆಗಳನ್ನೂ ಗಿಟ್ಟಿಸಿದರು.

ಚಪ್ಪಾಳೆ ಗಿಟ್ಟಿಸಬೇಕೆಂದು ನೀಡಿದ ಹೇಳಿಕೆ ಅದಾಗಿರಲಿಲ್ಲ ಎಂಬುದು ವಿಶೇಷ. ಸಿದ್ದರಾಮಯ್ಯ ಅಂದ್ರೇನೆ ಹಾಗೆ. ಚುನಾವಣೆಗೆ ಸಂಬಂಧಿಸಿದಂತೆ, ಚುನಾವಣೆಗಳಲ್ಲಿ ಹಣವನ್ನು ವಂತಿಗೆಯಾಗಿ ಪಡೆಯುವ ಬಗ್ಗೆ ತಮ್ಮ 'ಅಪ್ರಾಮಾಣಿಕತೆ'ಯನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯವೇ ಆದರೂ, ಯಾವ ರಾಜಕಾರಣಿಯೂ ಒಪ್ಪಿಕೊಳ್ಳುವುದಿಲ್ಲ ಎಂಬುದೂ ಎಲ್ಲರಿಗೂ ತಿಳಿದ ಸಂಗತಿ.
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 87ನೇ ಹುಟ್ಟಹಬ್ಬದ ನಿಮಿತ್ತ 'ರಾಷ್ಟ್ರೀಯ ನವನಿರ್ಮಾಣ ವೇದಿಕೆ' ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಬುಧವಾರ ಭಾಗವಹಿಸಿದ್ದ ಸಿದ್ದರಾಮಯ್ಯನವರು, ಚುನಾವಣೆಯಲ್ಲಿ ಹೋರಾಟ ಮಾಡಬೇಕಾದರೆ ಹಣದ ಅಗತ್ಯವೂ ಇರುತ್ತದೆ, ಅನ್ಯ ಮೂಲಗಳಿಂದ ಹಣವನ್ನು ಪಡೆಯಲೇಬೇಕಾಗುತ್ತದೆ ಎಂದು ಹೇಳಿದರು.
"ಇಂದಿನ ರಾಜಕೀಯದಲ್ಲಿ ಮೌಲ್ಯಗಳು ಕುಸಿದಿರುವುದು ನಿಜವಾದ ಸಂಗತಿ ಮತ್ತು ವಿಷಾದನೀಯ ವಿಷಯ. ಹೆಗಡೆ ಅವರ ಕಾಲದಲ್ಲಿ ಇದ್ದ ರಾಜಕಾರಣಕ್ಕೂ ಇಂದಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ" ಎಂದು ಸಿದ್ದರಾಮಯ್ಯನವರು ವಿಷಾದ ವ್ಯಕ್ತಪಡಿಸಿದರು. 1980ರಲ್ಲಿ ರಾಮಕೃಷ್ಣ ಹೆಗಡೆ ಅವರು ಅಧಿಕಾರದ ಚುಕ್ಕಾಣಿ ಹಿಡಿದಾಗ ಸಿದ್ದರಾಮಯ್ಯನವರು ಮಂತ್ರಿಮಂಡಲದಲ್ಲಿದ್ದರು.
"ಇಂದು ರಾಜಕೀಯದಲ್ಲಿ ಇರಬೇಕಾದರೆ ಹಣಬಲ ಮಾತ್ರವಲ್ಲ ತೋಳ್ಬಲವೂ ಬೇಕು. ನಾನು ಕೂಡ ಸಾಕಷ್ಟು ರೀತಿಯಲ್ಲಿ ತತ್ತ್ವ ಸಿದ್ಧಾಂತಗಳಲ್ಲಿ ರಾಜಿ ಮಾಡಿಕೊಂಡಿದ್ದೇನೆ, ಪ್ರಾಮಾಣಿಕತೆಯನ್ನು ತ್ಯಾಗ ಮಾಡಿದ್ದೇನೆ. ನಾನು ನೂರಕ್ಕೆ ನೂರರಷ್ಟು ಪ್ರಾಮಾಣಿಕನಾಗಿದ್ದೇನೆ ಎಂದು ಹೇಳಿಕೊಂಡರೆ ನನಗೆ ನಾನೇ ಮೋಸ ಮಾಡಿಕೊಂಡಂತೆ" ಎಂದ ನೂರು ದಿನ ಪೂರೈಸಿರುವ ಸಿದ್ದರಾಮಯ್ಯನವರಿಗೆ ಬಿದ್ದಿದ್ದವು ಸಾವಿರಾರು ಚಪ್ಪಾಳೆಗಳು.
"ಚುನಾವಣೆ ಬಂದಾಗ ಹಲವಾರು ಜನರು ರಾಜಕೀಯ ಪಕ್ಷಗಳಿಗೆ ಹಣ ನೀಡುತ್ತಾರೆ. ಅದು ಯಾವ ಮೂಲದಿಂದ ಬಂದಿದೆ ಎಂಬುದೂ ನಮಗೆ ತಿಳಿದಿರುವುದಿಲ್ಲ. ರಾಜಕೀಯ ಇಂದು ಭ್ರಷ್ಟವಾಗಿದೆ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳಲೇಬೇಕು" ಎಂದು ನುಡಿದರು. ಈ ಸಮಾರಂಭದಲ್ಲಿ ಹೆಗಡೆಯವರ ಆಪ್ತರಲ್ಲಿ ಒಬ್ಬರಾಗಿದ್ದ ಪ್ರವಾಸೋದ್ಯಮ ಮತ್ತು ಉನ್ನತ ಶಿಕ್ಷಣ ಸಚಿವ ಆರ್ ವಿ ದೇಶಪಾಂಡೆ ಅವರು ಕೂಡ ಉಪಸ್ಥಿತರಿದ್ದರು. (ಪಿಟಿಐ)
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications