ದಿಲ್ಲಿ ರೇಪ್: ಬಾಲ ಅತ್ಯಾಚಾರಿಗೆ ಮೂರೇ ವರ್ಷ ಜೈಲು
ನವದೆಹಲಿ, ಆಗಸ್ಟ್ 31: ದೆಹಲಿಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳಲ್ಲಿ ಒಬ್ಬನಾಗಿರುವ ಬಾಲ ಅತ್ಯಾಚಾರಿಗೆ ಬಾಲಾಪರಾಧಿ ನ್ಯಾಯಮಂಡಳಿಯು ಶನಿವಾರ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಬಾಲರೋಪಿಯ ತೀರ್ಪು ಈ ಹಿಂದೆಯೇ ಪ್ರಕಟವಾಗಬೇಕಿತ್ತಾದರೂ, ಬಾಲಾರೋಪಿ ವ್ಯಾಖ್ಯಾನದ ಕುರಿತು ಸುಬ್ರಮಣ್ಯಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ ಇತ್ಯರ್ಥವಾಗುವವರೆಗೂ ಈತನ ಕುರಿತು ತೀರ್ಪು ನೀಡಲು ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಇತ್ತೀಚೆಗೆ (ಆಗಸ್ಟ್ 22ರಂದು) ಸ್ವಾಮಿಯ ಅರ್ಜಿಯನ್ನು ಪ್ರತ್ಯೇಕವಾಗಿ ಪರಿಶೀಲಿಸಲು ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್, ಬಾಲಾರೋಪಿ ಕುರಿತು ತೀರ್ಪು ನೀಡಲು ತನ್ನ ಅನುಮೋದನೆಯನ್ನು ನೀಡಿತ್ತು.
ಮೂರೇ ವರ್ಷ ಶಿಕ್ಷೆ! ಪ್ರಕರಣದಲ್ಲಿ ಅತ್ಯಂತ ಘೋರ ರೀತಿಯಲ್ಲಿ ವರ್ತಿಸಿದ್ದ ಎಂಬ ಆರೋಪ ಹೊತ್ತಿರುವ ಬಾಲಾರೋಪಿ ವಿರುದ್ಧ ಎಲ್ಲಾ ಆರೋಪಗಳು ಸಾಬೀತಾದರೂ, ಆತನಿಗೆ ಗರಿಷ್ಠ 3 ವರ್ಷ ಮಾತ್ರ ಶಿಕ್ಷೆಯಾಗಿದೆ. ಈಗಾಗಲೇ 8 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ಈ ಬಾಲಾಪರಾಧಿಗೆ, ಇನ್ನು 2 ವರ್ಷ 4 ತಿಂಗಳು ಶಿಕ್ಷೆ ಮಾತ್ರ ಬಾಕಿ ಇದೆ.
ತೀರ್ಪಿನ ವಿರುದ್ಧ ಮೇಲ್ಮನವಿ: ತೀರ್ಪಿನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಾಧಿತ ಯುವತಿಯ ತಾಯಿ ಮತ್ತು ಕುಟುಂಬಸ್ಥರು ಸೋ ಕಾಲ್ಡ್ ಬಾಲ ಅತ್ಯಾಚಾರಿಗೆ ಇನ್ನೂ ಹೆಚ್ಚಿನ ಶಿಕ್ಷೆ ವಿಧಿಸುವಂತೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
23 ವರ್ಷದ ವೈದ್ಯ ವಿದ್ಯಾರ್ಥಿಯನ್ನು ಚಲಿಸುತ್ತಿದ್ದ ಬಸ್ಸಿನಲ್ಲಿ ಡಿಸೆಂಬರ್ 16ರಂದು 6 ಮಂದಿ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಘಟನೆಯ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಬಾಧಿತೆ ನಿರ್ಭಯಾ ಸಿಂಗಾಪುರದಲ್ಲಿ ಮೃತಪಟ್ಟಿದ್ದರು. 6 ಮಂದಿ ಆರೋಪಿಗಳ ಪೈಕಿ ರಾಮ್ ಸಿಂಗ್ ಎಂಬುವವನು ತಿಹಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊ0ಡಿದ್ದ. ಉಳಿದ ನಾಲ್ವರ ವಿರುದ್ಧ ತ್ವರಿತ ವಿಚಾರಣೆ ನಡೆದಿದ್ದು, ಇನ್ನೂ ಶಿಕ್ಷೆ ವಿಧಿಸುವ ಹಂತಕ್ಕೆ ಬಂದಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications