ಸರ್ಕಾರಿ ಕಂಪ್ಯೂಟರ್ ಗಳಲ್ಲಿ ಡರ್ಟಿ ಪಿಕ್ಚರ್ಸ್ ಇನ್ನಿಲ್ಲ

ವಿಧಾನಸೌಧದ ಕಚೇರಿಗಳಲ್ಲಿನ ಅಧಿಕಾರಿಗಳು ಕೆಲಸದ ವೇಳೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಗಳು ಕೇಳಿ ಬಂದಿದೆ. ಈ ಬಗ್ಗೆ ಪ್ರಮುಖ ಪತ್ರಿಕೆಗಳು ವರದಿ ಮಾಡಿದೆ. ಈ ಬಗ್ಗೆ ಸಿಐಡಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ.
ಉದ್ಯೋಗಕ್ಕೆ ಸಂಬಂಧಪಟ್ಟ ಕಡತಗಳು, ವೆಬ್ ತಾಣಗಳು ಮಾತ್ರ್ರ ಬಳಸುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕಚೇರಿಗಳ ಕಂಪ್ಯೂಟರ್ ಜಾಲಕ್ಕೆ ಫೈರ್ ವಾಲ್ ಅಳವಡಿಸಲು ನಿರ್ದೇಶನ ನೀಡಲಾಗಿದೆ ಎಂದು ಐಟಿ-ಬಿಟಿ ಸಚಿವ ಎಸ್ ಆರ್ ಪಾಟೀಲ್ ಹೇಳಿದರು.
ಅನಗತ್ಯ ವೆಬ್ ತಾಣಗಳನ್ನು ತಡೆಗಟ್ಟಲು ಫೈರ್ ವಾಲ್ ಹಾಗೂ ಇನ್ನಿತರ ಸುರಕ್ಷಿತ ತಂತ್ರಾಂಶ ಅಳವಡಿಕೆಯನ್ನು ವಿಧಾನಸೌಧದಿಂದ ಆರಂಭಿಸಲಾಗುವುದು ನಂತರ ಸರ್ಕಾರಿ ಕಚೇರಿಗಳ ಕಂಪ್ಯೂಟರ್ ಗಳಿಗೂ ಇದೂ ಜಾರಿಯಾಗಲಿದೆ. ಸೈಬರ್ ಕ್ರೈಂ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಡೀ ರಾಜ್ಯದಲ್ಲಿ ಸೈಬರ್ ಅಪರಾಧಗಳು ನಡೆಯದಂತೆ ಎಚ್ಚರಿಕೆವಹಿಸಲಾಗುತ್ತದೆ ಎಂದು ಪಾಟೀಲ್ ಹೇಳಿದರು.
ಐಟಿ ಸಮಾವೇಶ: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರುವಂತೆ ಮಾಡುವು ದಕ್ಕಾಗಿ ಅ.22ರಿಂದ ನಗರದಲ್ಲಿ ಐಟಿ ಬಿಜ್ ಸಮಾವೇಶ ಹಮ್ಮಿಕೊಂಡಿರುವುದಾಗಿ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ತಿಳಿಸಿದ್ದಾರೆ.
ಅಕ್ಟೋಬರ್ 22 ಮತ್ತು 23ರಂದು ಎರಡು ದಿನಗಳ ಕಾಲ ಮಾಹಿತಿ ತಂತ್ರಜ್ಞಾನ ಸಂಬಂಧಿಸಿದಂತೆ ಐಟಿ ಬಿಜ್ ಸಮಾವೇಶ ನಡೆಸಲಾಗುತ್ತದೆ. ಮೈಸೂರು ಮತ್ತು ಮಂಗ ಳೂರಿನಲ್ಲಿ ಉಪ ಸಮಾವೇಶಗಳನ್ನು ನಡೆಸಲಾಗಿದೆ. ಇದಕ್ಕೆ ಪೂರಕವಾಗಿ ಸೆ. 26 ಕ್ಕೆ ಹುಬ್ಬಳ್ಳಿಯಲ್ಲಿ ಉಪ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಪಾಟೀಲ್ ಹೇಳಿದರು.
ಐಟಿ ಬಿಜ್ ಸಮಾವೇಶವನ್ನು ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಕಪಿಲ್ ಸಿಬಲ್ ಉದ್ಘಾಟಿಸಲಿದ್ದಾರೆ. ಇದೇ ಖಾತೆಯ ಸಹಾಯಕ ಸಚಿವ ಮಿಲಿಂದ ದಿಯೋರಾ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಶಶಿ ತರೂರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು.
ಬಂಡವಾಳ ಹೂಡಿಕೆದಾರರ ಸಮಾವೇಶ: 2014ರ ಜೂನ್ 14ರಿಂದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಲು ಸರಕಾರ ನಿರ್ಧರಿಸಿದ್ದು, ಅಗತ್ಯ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications