ಸರ್ಕಾರಿ ಕಂಪ್ಯೂಟರ್ ಗಳಲ್ಲಿ ಡರ್ಟಿ ಪಿಕ್ಚರ್ಸ್ ಇನ್ನಿಲ್ಲ

ವಿಧಾನಸೌಧದ ಕಚೇರಿಗಳಲ್ಲಿನ ಅಧಿಕಾರಿಗಳು ಕೆಲಸದ ವೇಳೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಗಳು ಕೇಳಿ ಬಂದಿದೆ. ಈ ಬಗ್ಗೆ ಪ್ರಮುಖ ಪತ್ರಿಕೆಗಳು ವರದಿ ಮಾಡಿದೆ. ಈ ಬಗ್ಗೆ ಸಿಐಡಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ.
ಉದ್ಯೋಗಕ್ಕೆ ಸಂಬಂಧಪಟ್ಟ ಕಡತಗಳು, ವೆಬ್ ತಾಣಗಳು ಮಾತ್ರ್ರ ಬಳಸುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕಚೇರಿಗಳ ಕಂಪ್ಯೂಟರ್ ಜಾಲಕ್ಕೆ ಫೈರ್ ವಾಲ್ ಅಳವಡಿಸಲು ನಿರ್ದೇಶನ ನೀಡಲಾಗಿದೆ ಎಂದು ಐಟಿ-ಬಿಟಿ ಸಚಿವ ಎಸ್ ಆರ್ ಪಾಟೀಲ್ ಹೇಳಿದರು.
ಅನಗತ್ಯ ವೆಬ್ ತಾಣಗಳನ್ನು ತಡೆಗಟ್ಟಲು ಫೈರ್ ವಾಲ್ ಹಾಗೂ ಇನ್ನಿತರ ಸುರಕ್ಷಿತ ತಂತ್ರಾಂಶ ಅಳವಡಿಕೆಯನ್ನು ವಿಧಾನಸೌಧದಿಂದ ಆರಂಭಿಸಲಾಗುವುದು ನಂತರ ಸರ್ಕಾರಿ ಕಚೇರಿಗಳ ಕಂಪ್ಯೂಟರ್ ಗಳಿಗೂ ಇದೂ ಜಾರಿಯಾಗಲಿದೆ. ಸೈಬರ್ ಕ್ರೈಂ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಡೀ ರಾಜ್ಯದಲ್ಲಿ ಸೈಬರ್ ಅಪರಾಧಗಳು ನಡೆಯದಂತೆ ಎಚ್ಚರಿಕೆವಹಿಸಲಾಗುತ್ತದೆ ಎಂದು ಪಾಟೀಲ್ ಹೇಳಿದರು.
ಐಟಿ ಸಮಾವೇಶ: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರುವಂತೆ ಮಾಡುವು ದಕ್ಕಾಗಿ ಅ.22ರಿಂದ ನಗರದಲ್ಲಿ ಐಟಿ ಬಿಜ್ ಸಮಾವೇಶ ಹಮ್ಮಿಕೊಂಡಿರುವುದಾಗಿ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ತಿಳಿಸಿದ್ದಾರೆ.
ಅಕ್ಟೋಬರ್ 22 ಮತ್ತು 23ರಂದು ಎರಡು ದಿನಗಳ ಕಾಲ ಮಾಹಿತಿ ತಂತ್ರಜ್ಞಾನ ಸಂಬಂಧಿಸಿದಂತೆ ಐಟಿ ಬಿಜ್ ಸಮಾವೇಶ ನಡೆಸಲಾಗುತ್ತದೆ. ಮೈಸೂರು ಮತ್ತು ಮಂಗ ಳೂರಿನಲ್ಲಿ ಉಪ ಸಮಾವೇಶಗಳನ್ನು ನಡೆಸಲಾಗಿದೆ. ಇದಕ್ಕೆ ಪೂರಕವಾಗಿ ಸೆ. 26 ಕ್ಕೆ ಹುಬ್ಬಳ್ಳಿಯಲ್ಲಿ ಉಪ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಪಾಟೀಲ್ ಹೇಳಿದರು.
ಐಟಿ ಬಿಜ್ ಸಮಾವೇಶವನ್ನು ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಕಪಿಲ್ ಸಿಬಲ್ ಉದ್ಘಾಟಿಸಲಿದ್ದಾರೆ. ಇದೇ ಖಾತೆಯ ಸಹಾಯಕ ಸಚಿವ ಮಿಲಿಂದ ದಿಯೋರಾ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಶಶಿ ತರೂರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು.
ಬಂಡವಾಳ ಹೂಡಿಕೆದಾರರ ಸಮಾವೇಶ: 2014ರ ಜೂನ್ 14ರಿಂದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಲು ಸರಕಾರ ನಿರ್ಧರಿಸಿದ್ದು, ಅಗತ್ಯ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications