ಮೇಲುಕೋಟೆ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ
ಮಂಡ್ಯ, ಸೆ.2 : ಮಂಡ್ಯ ಜಿಲ್ಲೆ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯದ ಆಡಳಿತಾಧಿಕಾರಿಯಾಗಿ ವಾಣಿ ಅವರನ್ನು ನೇಮಿಸಲಾಗಿದೆ.
ಸೋಮವಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ವಜ್ರಾಂಗಿ ಆಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ದೇವಾಲಯದ ಆಡಳಿತ ಮಂಡಳಿಯನ್ನು ವಜಾಗೊಳಿಸಿ, ಆಡಳಿತಾಧಿಕಾರಿ ನೇಮಿಸಿರುವುದಾಗಿ ತಿಳಿಸಿದೆ.

ಪಾಂಡವಪುರ ಉಪ ವಿಭಾಗಾಧಿಕಾರಿ ವಾಣಿ ಅವರನ್ನು ದೇವಾಲಯದ ಆಡಳಿತಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯದ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆಯಲ್ಲಿ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಜರಾಯಿ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ವಿಧಾನಸಭೆ ಕಲಾಪದಲ್ಲಿ ಹೇಳಿಕೆ ನೀಡಿದ್ದರು.
ಅದರಂತೆ ವ್ಯವಸ್ಥಾಪನಾ ಮಂಡಳಿ ರದ್ದುಗೊಳಿಸಿ, ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ. ದೇವಾಲಯದ ರತ್ನಾಂಗಿ ಆಭರಣದ ಅವ್ಯವಹಾರ ಪ್ರಕರಣ ಇನ್ನೂ ಬಗೆಹರಿದಿಲ್ಲ. ದೇವಾಲಯದ ಅರ್ಚಕ ನರಸರಾಜ ಭಟ್ಟರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಆದರೆ, ಅವರು ತಲೆಮರಿಸಿಕೊಂಡಿದ್ದಾರೆ.
ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ನರಸರಾಜ ಭಟ್ಟರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಮಂಡ್ಯ ಜಿಲ್ಲಾಧಿಕಾರಿ ಬಿ.ಎಸ್.ಕೃಷ್ಣಯ್ಯ, ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ ಮೇಲುಕೋಟೆ ಠಾಣೆಯಲ್ಲಿ ನರಸರಾಜ ಭಟ್ಟ ವಿರುದ್ಧ ದೂರು ದಾಖಲಿಸುವಂತೆ ದೂರು ಸೂಚಿಸಿದ್ದರು.
ಅದರಂತೆ ಜು.18ರಂದು ಮೇಲುಕೋಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ದೂರು ದಾಖಲಾಗಿದ್ದು, ತಿಳಿಯುತ್ತಿದ್ದಂತೆಯೇ ಭಟ್ಟರು ಪರಾರಿಯಾಗಿದ್ದರು. ಮೇಲುಕೋಟೆ ಠಾಣೆ ಎಸ್ಐ ಅಶೋಕ್ ನೇತೃತ್ವದ ತಂಡ ನರಸರಾಜ ಭಟ್ಟರಿಗಾಗಿ ಹುಟುಕಾಟ ಮುಂದುವರೆಸಿದೆ.
ಯಾವ ಪ್ರಕರಣ : ನರಸರಾಜ ಭಟ್ಟರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406 (ನಂಬಿಕೆ ದ್ರೋಹ), 408 (ಕರ್ತವ್ಯದಲ್ಲಿ ವಂಚನೆ), 420 (ಮೋಸ)ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಮೇಲುಕೋಟೆ : ಪೊಲೀಸರಿಗೆ ಹೆದರಿದ ಅರ್ಚಕರು ಪರಾರಿ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications