ಬೆಂಗಳೂರು, ಮೈಸೂರು ಅಭಿವೃದ್ಧಿಗೆ 61 ಯೋಜನೆ

ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ, ಎರಡೂ ನಗರಗಳ ಅಭಿವೃದ್ಧಿಗಾಗಿ ಸುಮಾರು 5265.22ಕೋಟಿ ರೂ.ಗಳ ಯೋಜನೆ ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು.
ಯೋಜನೆ ಯಡಿ ರಸ್ತೆಗಳ ಅಭಿವೃದ್ಧಿ, ಸಾರಿಗೆ ವ್ಯವಸ್ಥೆ ಸುಧಾರಣೆ, ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮುಂತಾದ ಅಭಿವೃದ್ದಿ ಕೆಲಸಗಳನ್ನು ಮೈಸೂರು ಮತ್ತು ಬೆಂಗಳೂರಿನಲ್ಲಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರದ ಅಭಿವೃದ್ದಿ ಯೋಜನೆಗಳನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ಸಂಸ್ಥೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ನೀಡಿದೆ. ಕೆಲವು ಯೋಜನೆಗಳಿಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದರು.
ರಾಜ್ಯದ ಯೋಜನೆಗಳಿಗೆ ಒಪ್ಪಿಗೆ ನೀಡುವಂತೆ ಕೇಂದ್ರ ನಗರಾಭಿವೃದ್ದಿ ಸಚಿವ ಕಮಲ್ ನಾಥ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. 61 ಯೋಜನೆಗಳಲ್ಲಿ ಹಲವು ಯೋಜನೆಗಳಿಗೆ ಕೇಂದ್ರ ಒಪ್ಪಿಗೆ ನೀಡಲಿದೆ ಎಂದು ತಿಳಿಸಿದರು.
ಯಾವ ಯೋಜನೆಗಳು : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸೋರಿಕೆ ತಡೆಗಟ್ಟಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಜಲಮಂಡಳಿಯ ಪ್ರಸ್ತಾಪದಂತೆ, ಟಿ.ಕೆ.ಹಳ್ಳಿ ಜಲಾಶಯದ ಅಭಿವೃದ್ಧಿ ಪಡಿಸುವ ಯೋಜನೆ ಸಿದ್ದಪಡಿಸಲಾಗಿದೆ ಎಂದರು.
ಜೆ-ನರ್ಮ್ ಯೋಜನೆ ಅನುಷ್ಠಾನಕ್ಕೆ ಜನಸಂಖ್ಯೆ ಮಿತಿ ತೆಗೆದುಹಾಕಿರುವ ಹಿನ್ನೆಲೆಯಲ್ಲಿ ರಾಜ್ಯದ ಇತರೆ ನಗರಗಳಿಗೂ ಎರಡನೇ ಹಂತದಲ್ಲಿ ಜೆ-ನರ್ಮ್ ಯೋಜನೆ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬೆಳಗಾವಿ, ಗುಲ್ಬರ್ಗ ಮತ್ತು ಹುಬ್ಬಳ್ಳಿ- ಧಾರವಾಡ ನಗರಪಾಲಿಕೆಯ ವ್ಯಾಪ್ತಿಯ ನಗರ ಪ್ರದೇಶಗಳಿಗೆ ದಿನದ 24 ಗಂಟೆ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ 1760 ಕೋಟಿ ರೂ. ಯೋಜನೆಯನ್ನು ತಯಾರಿ ಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯ ನಗರ ಸಾರಿಗೆ ನಿಧಿಯಿಂದ ಉತ್ತರ ಕರ್ನಾಟಕದ ಬಳ್ಳಾರಿ, ಬಿಜಾಪುರ, ಯಾದಗಿರಿ, ಹೊಸಪೇಟೆ, ಬೀದರ್ ನಲ್ಲಿ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಲು 12 ಕೋಟಿ ರೂ. ನೆರವು ನೀಡಲಾಗುವುದು ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications