ಕೇಂದ್ರಾಡಳಿತ ಪ್ರದೇಶವಾಗಿ ಹೈದರಾಬಾದ್?
ನವದೆಹಲಿ, ಸೆ.3: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ವಿವಾದ ಕೇಂದ್ರ ಬಿಂದು ಹೈದರಾಬಾದ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದು ಸ್ಪಷ್ಟವಾಗಿದೆ. ಸದ್ಯಕ್ಕೆ ಈ ವಿಷಯ ಗೃಹ ಸಚಿವಾಲಯದಲ್ಲಿ ಚರ್ಚೆಗೊಳಪಡುತ್ತಿದೆ.
ಕೇಂದ್ರ ಗೃಹ ಸಚಿವಾಲಯದ ಮೂಲಗಳ ಪ್ರಕಾರ. ಈಗಾಗಲೇ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಕ್ಯಾಬಿನೆಟ್ ಟಿಪ್ಪಣಿ ಸಿದ್ಧಪಡಿಸಿದ್ದು, ಇದರಲ್ಲಿ ಹೈದರಾಬಾದ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡುವ ಬಗ್ಗೆ ಸೇರ್ಪಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಇನ್ನು 20 ದಿನಗಳಲ್ಲಿ ಈ ನೋಟ್ ಹೊರಬೀಳಲಿದ್ದು ತೆಲಂಗಾಣ ರಾಜ್ಯದ ರೂಪುರೇಷೆಗಳ ಬಗ್ಗೆ ಹೇಳಲಿದೆ. ಈ ಮೂಲಕ ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಚರ್ಚೆ ನಡೆಸಿದ್ದು, ವಿವಾದಕ್ಕೆ ಎಳ್ಳುನೀರು ಬಿಡಲು ಮುಂದಾಗಿದೆ ಎನ್ನಲಾಗಿದೆ.

ಈಗಿರುವ ನಿಯಮದ ಪ್ರಕಾರ ಹೈದರಾಬಾದ್ ಸೀಮಾಂಧ್ರ ಮತ್ತು ತೆಲಂಗಾಣಗಳಿಗೆ 10 ವರ್ಷಗಳ ಕಾಲ ರಾಜಧಾನಿಯಾಗಿ ಇರಲಿದೆ. ಆ ಬಳಿಕ ಹೈದರಾಬಾದ್ ಕೇವಲ ತೆಲಂಗಾಣಕ್ಕೆ ಮಾತ್ರ ರಾಜಧಾನಿಯಾದರೆ ಸೀಮಾಂಧ್ರಕ್ಕೆ ವಿಜಯವಾಡ ಅಥವಾ ವಿಶಾಖಪಟ್ಟಣಂ ರಾಜಧಾನಿಯಾಗಲಿದೆ.
ತಾವು ಸಂಪುಟದಲ್ಲಿ ನಿರ್ಣಯವೊಂದನ್ನು ಮಂಜೂರು ಮಾಡುವ ಕುರಿತು ಟಿಪ್ಪಣಿಯೊಂದನ್ನು ಸಿದ್ಧಪಡಿಸುತ್ತಿದ್ದೇವೆ. ಅದನ್ನು ಅಂತಿಮಗೊಳಿಸಿದ ಬಳಿಕ ಕಾನೂನು ಸಚಿವಾಲಯಕ್ಕೆ ಕಾನೂನು ಪರಿಶೀಲನೆಗಾಗಿ ಕಳುಹಿಸಲಾಗುವುದು.
20 ದಿನಗಳೊಳಗಾಗಿ ಟಿಪ್ಪಣಿ. ಸಂಪುಟದ ಮುಂದೆ ಮಂಡನೆಯಾಗ ಬಹುದೆಂದು ತಾನು ಆಶಿಸುತ್ತೇನೆಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ಸೀಮಾಂಧ್ರ ವಲಯದ ಕಾಂಗ್ರೆಸ್ ಹಾಗೂ ಟಿಡಿಪಿ ಸಂಸದರು ನಡೆಸುತ್ತಿರುವ ಪ್ರಬಲ ಪ್ರತಿಭಟನೆಗೆ ಸಂಸತ್ತಿನ ಮುಂಗಾರು ಅಧಿವೇಶನ ಸಾಕ್ಷಿಯಾಗಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications