ನಮ್ಮ ಮೊದಲ ಟಾರ್ಗೆಟ್ ನರೇಂದ್ರ ಮೋದಿ: ಐಎಂ
ಪಟ್ನಾ, ಸೆ.3: ಇತೀಚಿಗಷ್ಟೇ ಭಾರತ-ನೇಪಾಳ ಗಡಿಭಾಗದಲ್ಲಿ ಸಿಕ್ಕಿಬಿದ್ದ ಇಂಡಿಯನ್ ಮುಜಾಹಿದ್ದೀನ್ ನ ಸ್ಥಾಪಕ ಸದಸ್ಯ ಯಾಸಿನ್ ಭಟ್ಕಳ ಮತ್ತೊಮ್ಮೆ ಸ್ಫೋಟಕ ಮಾಹಿತಿ ಹೊರ ಹಾಕಿದೆ.
ಭಾರತದಲ್ಲಿ ವಿಧ್ವಂಸಕ ಕೃತ್ಯಗಳ ಸಂಚು ರೂಪಿಸುವುದಕ್ಕಿಂತ ಇಂಡಿಯನ್ ಮುಜಾಹಿದ್ದೀನ್ ಗೆ ನರೇಂದ್ರ ಮೋದಿ ಅವರ ತಲೆ ತೆಗೆಯುವುದೇ ಪ್ರಮುಖ ಟಾರ್ಗೆಟ್ ಆಗಿದೆ ಎಂದು ಯಾಸಿನ್ ಭಟ್ಕಳ ಹೇಳಿದ್ದಾನೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಸ್ವತಃ ಯಾಸಿನ್ ಭಟ್ಕಳ ಈ ವಿಷಯವನ್ನು ಹೇಳಿದ್ದಾನೆ. ಮೋದಿ ಅವರನ್ನು ತೆಗೆಯಲು ಅಂತಾರಾಷ್ಟ್ರೀಯ ನಿಧಿಗಳನ್ನು ಬಳಸಿಕೊಳ್ಳಲು ಯೋಜಿಸಲಾಗಿತ್ತು. ನಮ್ಮ ಮೊದಲ ಟಾರ್ಗೆಟ್ ನರೇಂದ್ರ ಮೋದಿ ನಂತರದ ಸ್ಥಾನದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಇದ್ದಾರೆ ಎಂದಿದ್ದಾನೆ.

2008ರ ನವೆಂಬರ್ ನಲ್ಲಿ ಮುಂಬೈನಲ್ಲಿ ಉಗ್ರರು ದಾಳಿ ನಡೆಸಿದ ಮೇಲೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಬೃಹತ್ ಪ್ರಮಾಣದಲ್ಲಿ ನಿಧಿ ಸಿಕ್ಕಿದೆ. ಐಎಂ ಸಂಘಟನೆಯ ಪ್ರಮುಖ ಸದಸ್ಯ ಬಿಹಾರ ಮೂಲದ ಮೊನುಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗಿದ್ದು ಭಾರತದಲ್ಲಿ ಬಂದು ಸ್ಫೋಟ ನಡೆಸುವ ತಾಣಗಳ ಪರಿಶೀಲನೆಯಲ್ಲಿ ತೊಡಗಿದ್ದಾನೆ. ಅತನ ಅಡಗುತಾಣಗಳ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಯಾಸಿನ್ ಭಟ್ಕಳ ಹೇಳಿದ್ದಾರೆ.
2010ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸ್ಫೋಟವಾದ ನಂತರ ಮೋನು ತನ್ನದೇ ಆದ ಗುಂಪು ನಡೆಸುತ್ತಿದ್ದು, ಸಮರ್ಥವಾಗಿ ಮುನ್ನಡೆಸುತ್ತಿದ್ದಾನೆ ಎಂದು ಭಟ್ಕಳ ಹೇಳಿದ್ದಾನೆ.
ರಾಷ್ಟ್ರೀಯ ತನಿಖಾ ದಳ(NIA) ತಂಡ ಮೋನುವಿನ ಸ್ವಂತ ಊರಿಗೆ ಕಾಲಿಟ್ಟಿದೆ. ಬಿಹಾರದ ಸಮಸ್ಟಿಪುರದ ಜಿಲ್ಲೆಯ ಗ್ರಾಮದಲ್ಲಿರುವ ಆತನ ಸಂಬಂಧಿಕರು, ತಂದೆ ತನಕ ತನಿಖಾ ದಳದ ವಿಚಾರಣೆ ತಲುಪಿದೆ. ಮೋನುವಿನ ಹಳೆ ಚಿತ್ರಗಳು, ಪೋಷಕರ ರಕ್ತದ ಸ್ಯಾಂಪಲ್ ಗಳು(ಡಿಎನ್ ಎ ಪ್ರೊಫೈಲ್ ಹೊಂದಾಣಿಕೆಗಾಗಿ) ಕಲೆ ಹಾಕಲಾಗಿದೆ.
ಭಟ್ಕಳನ ಸಂಬಂಧಿಕರು ಹಾಗೂ ಜಾಲದ ಬಗ್ಗೆ ಗುಜರಾತ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ದೊಡ್ಡ ಪ್ರಮಾಣದ ತಲೆ ತೆಗೆಯದಿದ್ದರೆ, ಅಥವಾ ಸ್ಫೋಟ ಕೃತ್ಯ ಎಸಗದಿದ್ದರೆ ಅಂತಾರಾಷ್ಟ್ರೀಯ ದಾನಿಗಳಿಂದ ಸಿಗುವ ಅನುದಾನ ಕೈ ತಪ್ಪುವ ಸಾಧ್ಯತೆ ಹೆಚ್ಚಿದೆ. ಹೊಸ ಉಗ್ರ ಸಂಘಟನೆಗೆ ಆರ್ಥಿಕ ಸಹಾಯ ಹಸ್ತ ಸಿಗಲಿದೆ ಎಂದು ಭಟ್ಕಳ ಹೇಳಿಕೆ ನೀಡಿದ್ದಾನೆ ಎಂದು ಗುಪ್ತಚರ ಅಧಿಕಾರಿಗಳು ಹೇಳಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications