ಚಹಾದಂಗಡಿ ಬಾಪು ಬನ್ ಗಯಾ ದೇವಮಾನವ
ನವದೆಹಲಿ, ಸೆ.3: ಚಹಾದಂಗಡಿಯಲ್ಲಿ ಎಂಜಲಿನ ಗ್ಲಾಸು ತೊಳೆಯುತ್ತಿದ್ದ ಅಸಾರಾಮ್ ಈಗ ಸರಿ ಸುಮಾರು ಸಾವಿರಾರು ಕೋಟಿ ರು ಒಡೆಯ. ಸ್ವಯಂ ಘೋಷಿತ ದೇವ ಮಾನವನಾಗಿ ಹಲವಾರು ದೇಶಗಳಲ್ಲಿ ಭಕ್ತರನ್ನು ಹೊಂದಿರುವ ಬಾಪುಗೆ ಮೈತುಂಬಾ ಹಗರಣಗಳೇ ತುಂಬಿದೆ. ಬಾಪು ಅಸಾರಾಮ್ ಯಾರು? ಮುಂದೆ ಓದಿ...
ದೆಹಲಿಯ ಸಾಮೂಹಿಕ ಅತ್ಯಾಚಾರದಲ್ಲಿ ಮೃತಪಟ್ಟ ಯುವತಿ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡಿ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದ ಸ್ವಯಂಘೋಷಿತ ದೇವಮಾನವ ಅಸಾರಮ್ ಬಾಪು ಲೇಟೆಸ್ಟ್ ಆಗಿ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಸಿಲುಕಿದ್ದಾರೆ. ಆದರೆ, ವಿವಾದಗಳು ಬಾಪುಗೆ ಹೊಸತೇನಲ್ಲ. ಅನೇಕ ಭೂ ಹಗರಣ, ಗಲಾಟೆ, ಕೊಲೆ ಕೇಸ್ ಗಳಲ್ಲಿ ಬಾಪು ಹೆಸರು ಕಾಣಿಸಿಕೊಂಡಿದೆ.
ಐಬಿಎನ್ 7 ಹುಡುಕಾಟದಂತೆ ಅಸಾರಾಮ್ ಅವರು ಏಪ್ರಿಲ್ 17, 1942ರಲ್ಲಿ ಅವಿಭಜಿತ ಭಾರತದ ನವಾಬ್ ಶಾ ಜಿಲ್ಲೆಯ ಬೆರಾನಿ ಗ್ರಾಮದಲ್ಲಿ(ಈಗ ಪಾಕಿಸ್ತಾನದಲ್ಲಿದೆ) ಜನಿಸಿದರು. ಮೆನ್ಹಗಿಬಾ ಹಾಗೂ ಉದ್ಯಮಿ ಥೊಮಲ್ ಸಿರುಮಲಾನಿ ದಂಪತಿಗೆ ಜನಿಸಿದ ಗಂಡು ಕೂಸಿಗೆ ಅಸುಮಲ್ ಎಂದು ಹೆಸರಿಡಲಾಗಿತ್ತು.

ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದಲ್ಲಿ ಸಿರುಮಲನಿ ಕುಟುಂಬ ಭಾರತದ ಕಡೆಗೆ ತಿರುಗಿ ಅಹಮದಾಬಾದಿನ ಮಣಿನಗರಕ್ಕೆ ಬಂದು ನೆಲೆಸಿತು. ಭಾರತಕ್ಕೆ ಬಂದ ಕೆಲ ಸಮಯದಲ್ಲೇ ಸಿರುಮಲನಿ ಅವರು ತೀರಿಕೊಂಡರು. ಸಂಸಾರದ ಜವಾಬ್ದಾರಿ ಅಸುಮಾಲ್ ಮೇಲೆ ಬಿದ್ದಿತು. ಗ್ರೇಟರ್ ಬಾಂಬೆ ಹಾಗೂ ಗುಜರಾತ್ ಭಾಗವಾಗಿದ್ದ ಮೆಹ್ಸಾನಾದ ವಿಜಪುರಾಗೆ ಬಾಲಕ ಅಸುಮಲ್ ತೆರಳುತ್ತಾನೆ.
ಅಲ್ಲಿ 1958-59ರ ಅವಧಿಯಲ್ಲಿ ಮ್ಯಾಜಿಸ್ಟ್ರೇಟ್ ಅವರ ಕಚೇರಿ ಎದುರಿನ ಚಹಾ ಅಂಗಡಿಯಲ್ಲಿ ಎಂಜಲು ಲೋಟ ತೊಳೆದು ಬಂದ ಗ್ರಾಹಕರಿಗೆ ಟೀ ನೀಡುತ್ತಿದ್ದ ಅಸುಮಲ್ ಮುಂದೆ ದೇವಮಾನವನಾಗಿ ಬೆಳೆದ.
ಟೀ ಸ್ಟಾಲ್ ನಲ್ಲಿದ್ದಾಗಲೂ ಅಸುಮಲ್(ಅಸಾರಾಮ್) ಉದ್ದುದ್ದಾ ಗಡ್ಡ ಬಿಡುತ್ತಿದ್ದ. ಮ್ಯಾಜಿಸ್ಟ್ರೇಟ್ ಕಚೇರಿ ಬಳಿ ಹೋಂ ಗಾರ್ಡ್ ಆಗಿದ್ದ ರಸಿಕ್ ಭಾಯ್ ಅವರು ಅಸಾರಾಮ್ ಚಹಾ ಅಂಗಡಿಯಲ್ಲಿದ್ದ ಎಂಬುದನ್ನು ದೃಢಪಡಿಸಿದ್ದಾರೆ.
ನಂತರ ಮಧ್ಯಪ್ರದೇಶದಲ್ಲಿ 38 ವರ್ಷಗಳ ಹಿಂದೆ ಜ್ಞಾನೋದಯ ಪಡೆದು ಸ್ವಯಂಘೋಷಿತ ದೇವ ಮಾನವನಾಗಿ ಬೆಳೆದ ಅಸಾರಾಮ್ ಬಾಪು ಅವರಿಗೆ ಭಾರತದಲ್ಲಷ್ಟೇ ಅಲ್ಲ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಗುಜರಾತಿನ ಸಂತ ಶ್ರೀ ಅಶರಾಮ್ ಜೀ ಆಶ್ರಮದ ಭಾಗವಾಗಿ ಬೆಳೆದ ಬಾಪು ಆಶ್ರಮ ದೇಶದೆಲ್ಲೆಡೆ ಹರಡಿಕೊಂಡಿದೆ. ಸುಮಾರು 200 ಕ್ಕೂ ಆಶ್ರಮಗಳ ಜತೆಗೆ 500 ಕೋಟಿ ರು.ಗೂ ಅಧಿಕ ಆಸ್ತಿ ಹೊಂದಿರುವ ಶ್ರೀಮಂತ ಧಾರ್ಮಿಕ ಗುರು ಅಸರಾಮ್ ಅವರು 72 ವರ್ಷ ವಯಸ್ಸಿನಲ್ಲಿ ಹತ್ತಾರು ವಿವಾದಗಳನ್ನು ಹೊತ್ತು ಸಾಗುತ್ತಿದ್ದಾರೆ. [ಅಸಾರಮ್ ಬಾಪು 10 ವಿವಾದಗಳು]
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications