ಬೆಗ್ಗರ್ ಅಂದಿದ್ದಕ್ಕೆ ರಾಹುಲ್ ಗೆ ಸಮನ್ಸ್
ಬೆಂಗಳೂರು, ಸೆ.4: ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಹೊರಡಿಸಿರುವ ಚಂಡೀಗಡದ ನ್ಯಾಯಾಲಯ, ಸೆಪ್ಟೆಂಬರ್ 19ರಂದು ಹಾಜರಾಗುವಂತೆ ಸೂಚಿಸಲಾಗಿದೆ.
ರಾಹುಲ್ ಗಾಂಧಿ ಅವರಿಗೆ ನೇರವಾಗಿ ಸಮನ್ಸ್ ತಲುಪಿಸಲು ಸೂಚಿಸಲಾಗಿದೆ. ಈ ಮುಂಚೆಯು ನ್ಯಾಯಾಲಯ ಸಮನ್ಸ್ ಹೊರಡಿಸಿತ್ತು.ಆದರೆ, ಎಂಟು ಸಲವೂ ಅವರಿಗೆ ಸಮನ್ಸ್ ನೀಡಿರಲಿಲ್ಲ.
ಉತ್ತರ ಪ್ರದೇಶ ಮತ್ತು ಬಿಹಾರದ ಜನರು ಅನ್ಯ ರಾಜ್ಯಗಳಿಗೆ ಕೆಲಸ ಮತ್ತು ಭಿಕ್ಷೆ ಬೇಡಲು ಹೋಗುತ್ತಾರೆ ಎಂದು 2011ರ ಡಿಸೆಂಬರ್ನಲ್ಲಿ ಉತ್ತರ ಪ್ರದೇಶದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಮೆರವಣಿಗೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ಅರವಿಂದ್ ಠಾಕೂರ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಫುಲ್ ಪುರದ ಪ್ರಚಾರ ಕಾರ್ಯದಲ್ಲಿ ರಾಹುಲ್ ಗಾಂಧಿ ಅವರು ಉತ್ತರಪ್ರದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ 'ಇನ್ನೆಷ್ಟು ಕಾಲ ಉತ್ತರ ಪ್ರದೇಶ ಹಾಗೂ ಬಿಹಾರದ ಜನರು ಮಹಾರಾಷ್ಟ್ರ ಹಾಗೂ ಪಂಜಾಬ್ ಗೆ ತೆರಳಿ ಉದ್ಯೋಗಕ್ಕಾಗಿ ಭಿಕ್ಷೆ ಬೇಡುತ್ತೀರಾ? ಎಂದು ಪ್ರಶ್ನಿಸಿದ್ದರು.
ಉತ್ತರ ಪ್ರದೇಶದ ಜನರು ಕಠಿಣ ಶ್ರಮಕ್ಕಾಗಿ ಹೆಸರುವಾಸಿಯಾಗಿದ್ದಾರೆ. ಆದರೆ, ಈ ರೀತಿ ಪರ ರಾಜ್ಯಕ್ಕೆ ಹೋಗಿ ಭಿಕ್ಷೆ ಎತ್ತುವುದು ಹೇಗೆ ಸಹಿಸಿಕೊಂಡಿದ್ದೀರಾ ಎಂದು ಕೇಳಿದ್ದರು. ರಾಹುಲ್ ಗಾಂಧಿ ಅವರ ಭಾಷಣದ ಉದ್ದೇಶ ಸರಿ ಇದ್ದರೂ ಭಿಕ್ಷೆ ಬೇಡುವುದನ್ನು ಬಳಸಿದ್ದು ಉತ್ತರಪ್ರದೇಶದ ಜನರನ್ನು ಕೆರಳಿಸಿತ್ತು. 2011ರಲ್ಲಿ ಸಾಮಾಜಿಕ ಕಾರ್ಯಕರ್ತ ವಕೀಲ ಅರವಿಂದ್ ಠಾಕೂರ್ ಅವರು ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications