ಇಡ್ಲಿ-ಸಾಂಬಾರ್ ಬೆಳಗ್ಗಿನ ತಿಂಡಿಗೆ ಬೆಸ್ಟ್!
ಚೆನ್ನೈ, ಸೆ.4 : ದಕ್ಷಿಣ ಭಾರತದ ಜನರ ಬಹು ಪ್ರೀತಿಯ ಆಹಾರ ಇಡ್ಲಿ ಮತ್ತು ಸಾಂಬಾರ್ ಅತ್ಯುತ್ತಮ ಪೌಷ್ಟಿಕ ಆಹಾರ ಎಂದು ಸಮೀಕ್ಷೆಯೊಂದು ತಿಳಿಸಿದೆ. ಮೂರು ಇಡ್ಲಿ ಒಂದು ಕಪ್ ಸಾಂಬಾರ್ ಹಾಗೂ ಒಂದು ಲೋಟ ಕಾಫಿ ಅತ್ಯಂತ ರುಚಿಕರ ಮತ್ತು ಪೌಷ್ಟಿಕ ಆಹಾರ ಎಂದು ಸಮೀಕ್ಷೆ ಬಹಿರಂಗ ಪಡಿಸಿದೆ.
ಮುಂಬೈನ ನಿರ್ಮಲ ನಿಕೇತನ ಹೋಮ್ ಸೈನ್ಸ್ ಕಾಲೇಜು ವಿದ್ಯಾರ್ಥಿಗಳು ನಡೆಸಿರುವ ಸಮೀಕ್ಷೆಯಲ್ಲಿ ಮೂರು ಇಡ್ಲಿ, ಒಂದು ಕಪ್ ಸಾಂಬಾರ್ ಮತ್ತು ಒಂದು ಲೋಟ ಕಾಫಿಗೆ ಅಗ್ರಸ್ಥಾನ ಸಿಕ್ಕಿದೆ. ಇದು ರುಚಿಕರ ಮತ್ತು ಪೌಷ್ಟಿಕವಾಗಿದೆ ಎಂಬ ಸತ್ಯ ಬಹಿರಂಗವಾಗಿದೆ.

ಮುಂಬೈ, ದೆಹಲಿ, ಕೋಲ್ಕತ್ತಾ ಸೇರಿದಂತೆ ದೇಶದ ನಾಲ್ಕು ಮೆಟ್ರೋ ನಗರಗಳಲ್ಲಿ 8ರಿಂದ 40 ವರ್ಷದ ವಯೋಮಾನದವರನ್ನು ಸಂದರ್ಶಿಸಿ, ಇಂಡಿಯಾ ಬ್ರೇಕ್ ಫಾಸ್ಟ್ ಹ್ಯಾಬಿಟ್ಸ್ ಎಂಬ ಸಮೀಕ್ಷೆ ನಡೆಸಿ, ಇಡ್ಲಿಗೆ ಅಗ್ರ ಸ್ಥಾನ ನೀಡಲಾಗಿದೆ.
ಬೆಳಗ್ಗಿನ ತಿಂಡಿ ಸಾಕಷ್ಟು ಪ್ರೋಟಿನ್, ಕಾರ್ಬೋಹೈಡ್ರೇಟ್ಸ್, ಕ್ಯಾಲ್ಸಿಯಂ ಒಳಗೊಂಡಿರಬೇಕು. ದಕ್ಷಿಣ ಭಾರತದ ಜನಪ್ರಿಯ ತಿಂಡಿಯಾಗಿರುವ ಇಡ್ಲಿಯಲ್ಲಿ ಅಧಿಕ ಪೋಷಕಾಂಶಗಳನ್ನು ಹೊಂದಿದ್ದು, ಬೆಳಗ್ಗಿನ ತಿಂಡಿಗೆ ಉತ್ತಮ ಆಯ್ಕೆಯಾಗಿದೆ ಎಂದು ಸಮೀಕ್ಷಾ ತಂಡದ ನಿರ್ದೇಶಕಿ ಮಾಲತಿ ಶಿವರಾಮಕೃಷ್ಣನ್ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ಬೆಳಗ್ಗಿನ ಉಪಹಾರದಲ್ಲಿ ಮೈದಾಹಿಟ್ಟು ಹೆಚ್ಚಾಗಿ ಬಳಸಲಾಗುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಾಗಿದ್ದು, ಪ್ರೋಟಿನ್ ಮತ್ತು ನಾರಿನ ಅಂಶ ಕಡಿಮೆ ಇದು ಸಮೀಕ್ಷೆ ತಿಳಿಸಿದೆ.
ದೆಹಲಿಯಲ್ಲಿ ಬೆಳಗ್ಗೆ ಪರೋಟವನ್ನು ಜನರು ಉಪಹಾರಕ್ಕಾಗಿ ಬಳಸುತ್ತಾರೆ. ಮುಂಬೈನಲ್ಲಿ ಹೆಚ್ಚಿನವರು ಬ್ರೇಡ್ ಸೇವಿಸುತ್ತಾರೆ. ಈ ಉಪಹಾರಗಳಲ್ಲಿ ಕಾರ್ಬೋಹೈಡ್ರೇಟ್ ಮಾತ್ರ ದೊರಕುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಭಾರತೀಯರಲ್ಲಿ ಹೆಚ್ಚುತ್ತಿರುವ ಆರೋಗ್ಯದ ಕುರಿತಾದ ಕಾಳಜಿ ಆಹಾರ ಸೇವನೆ ವಿಚಾರದಲ್ಲಿ ಕಂಡುಬರುತ್ತಿಲ್ಲ. ನಾಲ್ವರಲ್ಲಿ ಒಬ್ಬರು ಬೆಳಗ್ಗಿನ ಉಪಹಾರ ಸೇವನೆ ಮಾಡುವುದಿಲ್ಲ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.
ಅಕ್ಕಿ, ಉದ್ದುಗಳನ್ನು ಒಳಗೊಂಡಿರುವ ಇಡ್ಲಿ ಮತ್ತು ಸಾಂಬರ್ ನಲ್ಲಿರುವ ತರಕಾರಿ ಜನಪ್ರಿಯ ಮತ್ತು ಪರಿಪೂರ್ಣ ಆಹಾರ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಳಸುವ ರಾಗಿ ಸಹ ಬೆಳಗಿನ ಉಪಹಾರಕ್ಕೆ ಒಳ್ಳೆಯದು ಎಂದು ಸಮೀಕ್ಷೆ ಹೇಳಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications