ನಿತ್ಯಾನಂದ ವಿಡಿಯೋ: ನಟಿ ರಂಜಿತಾ ಕ್ಷಮಾಪಣೆಗೆ ಆದೇಶ

ಈ ಸಂಬಂಧ, Broadcast Content Complaints Council (BCCC) ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಪಿ ಷಾ ಅವರು Star Vijay ಚಾನೆಲ್ ವಿರುದ್ಧ ಸೋಮವಾರ ಈ ಮಹತ್ವದ ಆದೇಶ ನೀಡಿದ್ದು, ನಟಿ ರಂಜಿತಾ ಅವರಲ್ಲಿ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ. ಅಂದಹಾಗೆ BCCC ಸಮಿತಿಯು ಟಿವಿ ಚಾನೆಲ್ಲುಗಳ ನಿಯಂತ್ರಣ ಸಂಸ್ಥೆಯಾಗಿದೆ.
ಸೆಪ್ಟೆಂಬರ್ 9ರಿಂದ ಪ್ರಾರಂಭ ಮಾಡಿ 7 ದಿನಗಳ ಪ್ರತಿ 2 ಗಂಟೆಗೊಮ್ಮೆ scrollನಲ್ಲಿ ಪ್ರಸಾರ ಮಾಡಬೇಕು ಎಂದು BCCC ಅಧ್ಯಕ್ಷ ಎಪಿ ಷಾ ಅವರು ಆದೇಶಿಸಿದ್ದಾರೆ. 2012ರ ಮಾರ್ಚ್ 21ರಂದು 'ಸ್ಟಾರ್ ವಿಜಯ್' ಚಾನೆಲ್ Nadanthadhu Enna Kutramum Pinnaniyum ಎಂಬ ಕಾರ್ಯಕ್ರಮ ಪ್ರಸಾರವಾಗಿತ್ತು. ಅದರಲ್ಲಿ ಈ ಆಕ್ಷೇಪಾರ್ಹ ವಿಡಿಯೋ ಪ್ರಸಾರವಾಗಿತ್ತು.
ಅರ್ಜಿದಾರರಾದ ರಂಜಿತಾ ಅವರ ಖಾಸಗಿ ತನಕ್ಕೆ ಧಕ್ಕೆ ತಂದಿದೆ. ಆಕೆಯ ಗೌರವಕ್ಕೆ ಚ್ಯುತಿಬರುವಂತೆ ಈ ವಿಡಿಯೋ ಪ್ರಸಾರ ಮಾಡಲಾಗಿದೆ. ಆದ್ದರಿಂದ ರಂಜಿತಾ ಮೆನನ್ ಗೆ ಚಾನೆಲ್ ಕ್ಷಮಾಪಣೆ ಕೋರಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಪ್ರಕರಣದ ಸಂಬಂಧ ನಟಿ ರಂಜಿತಾ ಅವರು ಕರ್ನಾಟಕ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಸಿ.ಡಿ. ಸಮೇತ ಅರ್ಜಿಯನ್ನು BCCCಗೆ ವರ್ಗಾಯಿಸಿತ್ತು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications