ಚರ್ಚ್ ದಾಳಿ: ಕೊನೆಗೂ ಆರೋಪಿ ಸಿಕ್ಕಿ ಬಿದ್ದ

ಬೆಂಗಳೂರಿನ ಹೊರ ವಲಯದ ಅತ್ತಿಬೆಲೆಯ ಯಡವನಹಳ್ಳಿ, ಹೆಬ್ಬಗೋಡಿಯ ಹುಸ್ಕೂರ್ ಗೇಟ್ ಬಳಿಯ ಕ್ರೈಸ್ತರ ಪ್ರಾರ್ಥನಾ ಮಂದಿರ ಸೇರಿ ನಾಲ್ಕು ಚರ್ಚ್ ಗಳ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ತಾಲೂಕಿನ ಮದಗೊಂಡನಪಲ್ಲಿಯ ನಿವಾಸಿ ಸಜ್ಜನ್ ಕುಮಾರ್ ಅಲಿಯಾಸ್ ಬಾಬು (33) ಎಂದು ಗುರುತಿಸಲಾಗಿದೆ.
ಆರೋಪಿ ಸಜ್ಜನ್ ಕುಮಾರ್ ಗೆ ಕ್ರೈಸ್ತ ಧರ್ಮಕ್ಕೆ ಸೇರುವಂತೆ ಫುಸಲಾಯಿಸಲಾಗಿದ್ದು, ಅನೇಕ ಆಮಿಷ ಒಡ್ಡಲಾಗಿತ್ತು. ಆದರೆ, ಸಜ್ಜನ್ ಯಾವುದೇ ಕಾರಣಾಕ್ಕೂ ಕ್ರೈಸ್ತಧರ್ಮಕ್ಕೆ ಮತಾಂತರವಾಗಲು ವಿರೋಧ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಬಲವಂತ ಮತಾಂತರಕ್ಕೆ ವಿರೋಧಿಸಿ ಕ್ರೈಸ್ತರಿಗೆ ಪಾಠ ಕಲಿಸುವ ಉದ್ದೇಶದಿಂದ ದಾಳಿ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯು ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಯಡವನಹಳ್ಳಿಯ ಚರ್ಚ್ ಕಟ್ಟಡದೊಳಗೆ ಪ್ರವೇಶಿಸಿ ಅಲ್ಲಿದ್ದ ಯೇಸುವಿನ ಪ್ರತಿಮೆ ಧ್ವಂಸಗೊಳಿಸಿದ್ದ.
2009ರಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹುಸ್ಕೂರ್ ಗೇಟ್ ಬಳಿಯ ಇನ್ಫಂಟ್ ಜೀಸಸ್ ಚರ್ಚ್ ಕಟ್ಟಡದೊಳಗೆ ಪ್ರವೇಶ ಮಾಡಿ ಭದ್ರತಾ ಕೊಠಡಿ ಜಖಂಗೊಳಿಸಿದ್ದ. ಅಲ್ಲದೆ ಕಟ್ಟಡದ ಕಿಟಕಿ ಗಾಜು ಪುಡಿಗೈದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಇನ್ನಿತರ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ. ಅಪರಾಧ ವಿಭಾಗದ ಡಿಸಿಪಿ ವಿ.ಎಸ್.ಡಿಸೋಜಾ, ಸಿಸಿಬಿ ಎಸಿಪಿ ಎಚ್.ಸಿದ್ದಪ್ಪ, ಎಚ್.ಸಿ.ಮಹದೇವ, ಪಿಸಿಗಳಾದ ದಿನೇಶ್ ಶೆಟ್ಟಿ, ಹರಿಶ್ಚಂದ್ರ, ರಂಜಿತ್ ಶೆಟ್ಟಿ ತನಿಖೆ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ನಡೆದ ಚರ್ಚ್ ದಾಳಿಗೆ ಸಂಬಂಧಿಸಿದಂತೆ ಸರಕಾರ ನೇಮಿಸಿದ್ದ ನ್ಯಾ. ಸೋಮಶೇಖರ್ ಆಯೋಗ ನೀಡಿದ ವರದಿಯನ್ನು ರಾಜ್ಯ ಕ್ರೈಸ್ತ ಸಮುದಾಯ ತಿರಸ್ಕರಿಸಿತ್ತು.
ಕ್ರೈಸ್ತ ಸಮುದಾಯದ ಮೇಲೆ ಮತಾಂತರದ ಆರೋಪ ಹೊರಿಸಲಾಗಿದೆ. ದಾಳಿ ಯಾರು ಮಾಡಿದ್ದಾರೆಂದು ಗುರುತಿಸಿಲ್ಲ. ಇದರಿಂದ ನಮ್ಮ ಸಮುದಾಯದ ಭಾವನೆಗೆ ನೋವುಂಟಾಗಿದೆ. ಹಾಗಾಗಿ ವರದಿಯನ್ನು ನಾವು ತಿರಸ್ಕರಿಸಿ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ ಎಂದು ಆರ್ಚ್ ಬಿಷಪ್ ಬರ್ನಾಡ್ ಮೋರಸ್ ಹೇಳಿದ್ದರು.
ರಾಜ್ಯದ ವಿವಿಧ ಭಾಗದಲ್ಲಿ 2008ರಲ್ಲಿ ನಡೆದ ಚರ್ಚ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸೋಮಶೇಖರ್ ಆಯೋಗ 2437 ಪುಟಗಳ ಸಮಗ್ರ ವರದಿಯನ್ನು ನೀಡಿತ್ತು.ಈ ಘಟನೆಯಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಲಾಗಿತ್ತು. ರಾಜ್ಯದ ಮಂಗಳೂರು, ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚರ್ಚ್ ಮೇಲೆ ದಾಳಿ ನಡೆದಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications