ಸೈಕೋ ಜೈಶಂಕರ್ ಸೆರೆಸಿಕ್ಕಿದ್ದು ಹೇಗೆ?
ಬೆಂಗಳೂರು, ಸೆ.6 : ಪರಪ್ಪನ ಅಗ್ರಹಾರ ಜೈಲಿನಿಂದ ಸಿನೀಮಯ ರೀತಿಯಲ್ಲಿ ಪರಾರಿಯಾಗಿದ್ದ ಸೈಕೋ ಕಿಲ್ಲರ್ ಜಯಶಂಕರ್ ತನ್ನ ಸ್ನೇಹಿತರಿಗೆ ಕರೆ ಮಾಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಜಯಶಂಕರ್ ಸ್ನೇಹಿತರ ಪೋನ್ ಕರೆಯ ಮಾಹಿತಿ ಮೇರೆಗೆ ಅವನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಪ್ರತಿಕಾಗೋಷ್ಠಿ ನಡೆಸಿ ರಾಘವೇಂದ್ರ ಔರಾದ್ಕರ್, ಜೈ ಶಂಕರ್ ಬಂಧನದ ಮಾಹಿತಿಯನ್ನು ನೀಡಿದರು. ತಾನು ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಕೂಡ್ಲು ಗೇಟ್ ಬಳಿ ಇದ್ದೇನೆ ಎಂದು ಸ್ನೇಹಿತರಿಗೆ ಕರೆ ಮಾಡಿದ್ದ. ಈ ಫೋನ್ ಕರೆ ಆಧರಿಸಿ ಆತನನ್ನು ಬಂಧಿಸಲಾಗಿದೆ ಎಂದು ಔರಾದ್ಕರ್ ತಿಳಿಸಿದರು.
ಪರಪ್ಪನ ಅಗ್ರಹಾರ ಜೈಲಿನಿಂದ ತಪ್ಪಿಸಿಕೊಳ್ಳುವಾಗ ಜೈ ಶಂಕರ್ ಕಾಲಿಗೆ ಗಾಯಗಳಾಗಿತ್ತು. ಆತನ ಮೊಣಕಾಲು ಊದಿಕೊಂಡಿತ್ತು. ಆದ್ದರಿಂದ ಆತ ಹೆಚ್ಚು ದೂರ ಪ್ರಯಾಣಿಸಲಾಗದೆ ಬೆಂಗಳೂರಿನಲ್ಲೇ ಉಳಿದಿದ್ದ ಎಂದು ಆಯುಕ್ತರು ಹೇಳಿದರು.
ಜಯಶಂಕರ್ ಪತ್ತೆಗಾಗಿ 4 ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಹಿಂದೆ ಚಿತ್ರದುರ್ಗ, ತುಮಕೂರಿನಲ್ಲಿ ಜೈಶಂಕರ್ ಬಂಧಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸರು ತಂಡದಲ್ಲಿದ್ದರು ಎಂದು ಔರಾದ್ಕರ್ ಮಾಹಿತಿ ನೀಡಿದರು.
ನಮ್ಮ ಮಾಹಿತಿದಾರರು ಜೈಶಂಕರ್ ಬೆಂಗಳೂರಿನಲ್ಲಿದ್ದಾನೆ ಎಂದು ಮಾಹಿತಿ ಒದಗಿಸಿದ್ದರು. ಜೊತೆಗೆ ನಾವು ಜೈಶಂಕರ್ ಸ್ನೇಹಿತರ ಮೊಬೈಲ್ ನಂಬರ್ ಗಳನ್ನು ಕರೆಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೆವು. ಇವುಗಳ ಆಧಾರದ ಮೇಲೆಯೇ ಆತನನ್ನು ಬಂಧಿಸಲಾಗಿದೆ ಎಂದರು.
ಶುಕ್ರವಾರ ಜೈಶಂಕರ್ ನಾನು ಬೆಂಗಳೂರಿನಲ್ಲಿದ್ದೇನೆ ಎಂದು ಸ್ನೇಹಿತರಿಗೆ ಕರೆ ಮಾಡಿದ ಕರೆಯ ಮಾಹಿತಿ ಆಧಿರಿಸಿ, ಆತನನ್ನು ಬಂಧಿಸಲಾಗಿದೆ ಎಂದು ಹೇಳಿದರು. ಭದ್ರತಾ ದೃಷ್ಟಿಯಿಂದ ಕಾರ್ಯಾಚರಣೆಯ ಸಂಪೂರ್ಣ ವಿವರ ನೀಡಲು ಸಾಧ್ಯವಿಲ್ಲ ಎಂದರು. (ಸೈಕೋ ಜಯಶಂಕರ್ ಯಾರು?)
ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಜೈ ಶಂಕರ್ ನನ್ನು ಬಂಧಿಸುವಂತೆ ಆದೇಶಿಸಿದ್ದರು. ಪೊಲೀಸ್ ಇಲಾಖೆ ಕನ್ನಡ, ತಮಿಳು, ಇಂಗ್ಲಿಶ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ಜೈಶಂಕರ್ ಕುರಿತು ಮಾಹಿತಿ ನೀಡುವಂತೆ 10 ಸಾವಿರ ಪೋಸ್ಟರ್ ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿತ್ತು ಎಂದು ತಿಳಿಸಿದರು.
ಪೊಲೀಸರ ತಂಡ : ಸೈಕೋ ಜಯಶಂಕರ್ ಬಂಧನದ ತಂಡದ ನೇತೃತ್ವವನ್ನು ಬಿ.ಕೆ.ಸಿಂಗ್ ವಹಿಸಿದ್ದರು. ತಂಡದಲ್ಲಿ ಬೆಂಗಳೂರಿನ ಇನ್ಸ್ ಪೆಕ್ಟರ್ ಗಳಾದ ಬಾಲಾಜಿ ಸಿಂಗ್, ಲಕ್ಷ್ಮೀನಾರಾಯಣ್, ಶ್ರೀನಿವಾಸ್, ಬಾಪು, ಮಹೇಶ್, ಶಿರಾದ ರವಿ ಮತ್ತು ಚಿತ್ರದುರ್ಗದ ಪಿಎಸ್ಐ ಉಮೇಶ್ ಮುಂತಾದವರಿದ್ದರು ಎಂದು ಮಾಹಿತಿ ನೀಡಿದರು.
ಗುಡಿಸಲಿನಲ್ಲಿ ಅಡಗಿದ್ದ : ಜೈ ಶಂಕರ್ ಕೂಡ್ಲುಗೇಟ್ ಬಳಿಯಿದ್ದ ಪಾಳುಬಿದ್ದಂತಿದ್ದ ಗುಡಿಸಲಿನಲ್ಲಿ ವಾಸವಾಗಿದ್ದ. ಕೂಡ್ಲುಗೇಟ್ ಬಳಿಯ ಕೆರೆಯಲ್ಲಿ ಮೀನುಹಿಡಿಯುವವರು ಮಾಡಿಕೊಂಡಿದ್ದ ಗುಡಿಸಿಲಿನಲ್ಲಿ ಜೈ ಶಂಕರ್ ತಂಗಿದ್ದ.
ಗುಡಿಸಿಲಿನ ಅಕ್ಕಪಕ್ಕದ ಜನರಿಗೆ ತಾನು ತಮಿಳುನಾಡಿನ ಸರ್ಕಾರಿ ಬಸ್ ಚಾಲಕನಾಗಿದ್ದು, ಬಸ್ ಅಪಘಾತ ಸಂಭವಿದೆ. ಆದ್ದರಿಂದ ಪೊಲೀಸರು ನನ್ನು ಬಂಧಿಸಲು ಹುಡುಕುತ್ತಿದ್ದಾರೆ. ನನಗೆ ಇಲ್ಲಿ ವಾಸಿಸಲು ಅವಕಾಶ ನೀಡಿ ಎಂದು ಸುಳ್ಳು ಹೇಳಿ ಗುಡಿಸಲು ಸೇರಿದ್ದ.
ಶುಕ್ರವಾರ ಅಲ್ಲಿನ ಜನರಿಗೆ ನೀರು ಮತ್ತು ಊಟ ತೆಗೆದುಕೊಂಡು ಬರುವಂತೆ ಹಣ ನೀಡಿದ್ದ. ನಂತರ ಅವರ ಮೊಬೈಲ್ ಮೂಲಕ ತನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ಇಲ್ಲಿದ್ದೇನೆ ಎಂದು ಮಾಹಿತಿ ನೀಡಿದ್ದ.
ಈ ಕರೆಯ ಮಾಹಿತಿ ಆಧಾರದ ಮೇಲೆಯೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜೈಶಂಕರ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಜೈಶಂಕರ್ ನನ್ನು ಐದು ದಿನಗಳಲ್ಲಿಯೇ ಬಂಧಿಸಿದ ಪೊಲೀಸರ ಸಾಹಸ ಮೆಚ್ಚಲೇಬೇಕು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications