ಸಿಬ್ಬಂದಿ ಪ್ರತಿಭಟನೆ, ವೋಲ್ವೋ ಬಸ್ ಸಂಚಾರವಿಲ್ಲ

ಮಂಗಳವಾರ ನಗರದಲ್ಲಿ ಬಿಎಂಟಿಸಿ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಆದರೆ, ಮೆಜೆಸ್ಟಿಕ್ ಡಿಪೋದಿಂದ ಹೊರಡುವ ವೋಲ್ವೋ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಿಬ್ಬಂದಿಗಳು ಹೆಚ್ಚುವರಿ ವೇತನ(ಓ.ಟಿ) ನೀಡುವಂತೆ ಆಗ್ರಹಿಸಿ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಡಿಪೋ ಸಂಖ್ಯೆ 7ರ ನೌಕರರ ಜೊತೆ, ಡಿಪೋ ಮ್ಯಾನೇಜರ್ ಔರಾದ್ಕರ್ ನಡೆಸಿದ ಮಾತುಕತೆ ವಿಫಲವಾಗಿದ್ದು, ಸಂಚಾರ ಆರಂಭವಾಗಿಲ್ಲ. ಓ.ಟಿ ನೀಡುವ ಕುರಿತು ಕೇಂದ್ರ ಕಚೇರಿಯೊಂದಿಗೆ ಮಾತುಕತೆ ನಡೆಸುವುದಾಗಿ ಮ್ಯಾನೇಜರ್ ಭರವಸೆ ನೀಡಿದ್ದಾರೆ.
12 ಗಂಟೆಗೂ ಹೆಚ್ಚು ಕೆಲಸ ನಿರ್ವಹಿಸಿದರೂ ಕೇವಲ ಒಂದು ಗಂಟೆ ಓ.ಟಿ. ನೀಡಿರುವ ಕುರಿತು ಡಿಪೋ ಮ್ಯಾನೇಜರ್ ಮತ್ತು ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಸಿಬ್ಬಂದಿ ಪ್ರತಿಭಟನೆಯಿಂದಾಗಿ ವೋಲ್ವೋ ಸಂಚಾರ ರದ್ದಾಗಿದೆ.
ನಗರದಲ್ಲಿ ವಾಹನ ದಟ್ಟಣೆಯ ಸಮಸ್ಯೆ ಹೆಚ್ಚಾಗಿದೆ. ಬಸ್ ಆಗಮನ ಮತ್ತು ನಿರ್ಗಮನಕ್ಕೆ ಹಿಂದೆ ನಿಗದಿಪಡಿಸಿದ ಕಾಲಾವಧಿ ಅವೈಜ್ಞಾನಿಕವಾಗಿದೆ. ನೂತನವಾಗಿ ಸಮೀಕ್ಷೆ ನಡೆಸಿ ಹೊಸ ಕಾಲಾವಧಿ ನಿಗದಿಗೊಳಿಸಬೇಕು ಎಂದು ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ.
ವೇಳೆ ಮಹಿಳಾ ಸಿಬ್ಬಂದಿಗಳಿಗೂ ಸರಿಯಾದ ಪಾಳಿ ನಿಗದಿಗೊಳಿಸಬೇಕು. ವೇತನ ಹೆಚ್ಚಿಸಬೇಕು ಎಂದು ಸಿಬ್ಭಂದಿ ಬೇಡಿಕೆ ಮುಂದಿಟ್ಟಿದ್ದಾರೆ. ಸಿಬ್ಬಂದಿ ಬೇಡಿಕೆಗಳ ಕುರಿತು ಕೇಂದ್ರ ಕಚೇರಿಯೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಅಧಿಕಾರಿಗಳಿಂದ ಬೇಡಿಕೆ ಈಡೇರಿಸುವ ಭರವಸೆ ದೊರೆಯುವ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಸಿಬ್ಬಂದಿಗಳು ಹೇಳಿದ್ದು, ಪ್ರತಿಭಟನೆ ಮುಂದುವರೆದಿದೆ. ಮೆಜೆಸ್ಟಿಕ್ ನಲ್ಲಿ ವೋಲ್ವೋ ಬಸ್ ಗಳಿಗೆ ಕಾಯದೇ ಇರುವುದು ಉತ್ತಮ. (ಹೊಸ ಮಾರ್ಗಗಳಲ್ಲಿ ವೋಲ್ವೋ ಓಡಿಸಲಿದೆ ಬಿಎಂಟಿಸಿ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications