ಜೆಪಿ ನಗರ ಒಂಟಿ ಮಹಿಳೆ ಜ್ಯೋತಿಲಕ್ಷ್ಮಿ ಹಂತಕ ಸಿಕ್ಕಿಬಿದ್ದ

ಜ್ಯೋತಿಲಕ್ಷ್ಮಿಗೆ ಪರಿಚಿತನೇ ಆಗಿದ್ದ ಬನ್ನೇರುಘಟ್ಟ ರಸ್ತೆ ದೊರೆಸ್ವಾಮಿಪಾಳ್ಯ ನಿವಾಸಿ ಅರುಣ್ (23) ಬಂಧಿತ ಆರೋಪಿ. ಕ್ಯಾಬ್ ಡ್ರೈವರ್ ಆಗಿರುವ ಆರೋಪಿ ಅರುಣನನ್ನು ಕಳೆದ ವಾರವೇ ವಶಕ್ಕೆ ತೆಗೆದುಕೊಂಡಿರುವ ಜೆಪಿ ನಗರ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಹತ್ಯೆಯ ವೃತ್ತಾಂತ ತನಿಖೆಯ ಬಳಿಕ ಇನ್ನಷ್ಟೇ ಬಹಿರಂಗವಾಗಬೇಕಿದೆ.
ನಗರದ ದಕ್ಷಿಣ ಭಾಗದಲ್ಲಿರುವ ಜೆಪಿ ನಗರದಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದ ಖಾಸಗಿ ಕಂಪನಿಯ ಮಾನವ ಸಂಪನ್ಮೂಲ ಮ್ಯಾನೇಜರ್ ಜ್ಯೋತಿಲಕ್ಷ್ಮಿ ಅವರನ್ನು ಆಗಸ್ಟ್ 2 ರಂದು ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಪೊಲೀಸರು ಅನುಮಾಣದ ಮೇಲೆ ಒಟ್ಟು 8 ಮಂದಿಯನ್ನು ಬಂಧಿಸಿದ್ದರು.
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಅರುಣ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ. ಈ ಹಿನ್ನೆಲೆಯಲ್ಲಿ ಮಗಳೊಂದಿಗೆ ಒಂಟಿಯಾಗಿ ವೆಂಕಟಾದ್ರಿ ಬಡಾವಣೆಯಲ್ಲಿ ವಾಸಿಸುತ್ತಿದ್ದ ಜ್ಯೋತಿಲಕ್ಷ್ಮಿ ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದೋಚಲು ಸಂಚು ರೂಪಿಸಿದ್ದ.
ಅದರಂತೆ ಆಗಸ್ಟ್ 2ರಂದು ಜ್ಯೋತಿಲಕ್ಷೀ ಮನೆಗೆ ಬಂದಿದ್ದ ಅರುಣ್ ಸ್ವಲ್ಪ ಹೊತ್ತು ಮಾತನಾಡಿ, ಬಳಿಕ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದ. ಆ ಸಂದರ್ಭದಲ್ಲಿ ಜ್ಯೋತಿ ಹಾಗೂ ಆಕೆಯ ಪುಟ್ಟ ಮಗಳು ಜಾಗೃತಿ ಕಿರುಚಿಕೊಂಡಿದ್ದರು.
ಕಿರುಚಾಟದಿಂದ ಯಾರಾದರೂ ಮನೆಗೆ ಬಂದರೆ ಸಿಕ್ಕಿ ಬೀಳಬಹುದು ಎಂಬ ಭಯದಿಂದ ಅರುಣ್, ಬಾಲಕಿಯ ಕತ್ತು ಹಿಸುಕಿ ಗೊಡೆಗೆ ತಳ್ಳಿದ್ದ. ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ಕಿಟಿಕಿಯಿಂದ ಎಸೆದಿದ್ದ. ಆದರೆ ಹಣ, ಚಿನ್ನಾಭರಣ ದೋಚದೆ ಪರಾರಿಯಾಗಿದ್ದ.
ಜ್ಯೋತಿ 7 ವರ್ಷಗಳ ಹಿಂದೆ ಹೇಮಚಂದ್ರ ಎಂಬುವವರನ್ನು ವಿವಾಹವಾಗಿದ್ದರು. ಆದರೆ ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದು ಪ್ರತ್ಯೇಕವಾಗಿ ಮಗಳೊಂದಿಗೆ ವಾಸಿಸುತ್ತಿದ್ದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications