ನೌಕರರ ಪ್ರತಿಭಟನೆಗೆ ಮಣಿದ ಬಿಎಂಟಿಸಿ
ಬೆಂಗಳೂರು, ಸೆ.11 : ವೋಲ್ವೋ ಬಸ್ ನೌಕರರ ಪ್ರತಿಭಟನೆಗೆ ಮಣಿದಿರುವ ಬಿಎಂಟಿಸಿ ಅವರ ಬೇಡಿಕೆಗಳನ್ನು ಈಡೇರಿಲಸಲು ಮುಂದಾಗಿದೆ. ಮೊದಲ ಹಂತದಲ್ಲಿ ಮೆಜೆಸ್ಟಿಕ್ ಮತ್ತು ಕಾಡುಗೋಡಿ ನಡುವೆ ಬಸ್ ಸಂಚರಿಸುವ ಸಮಯಾವಕಾಶ ತಿಳಿಯಲು ಸಮೀಕ್ಷೆ ನಡೆಸಲು ಮುಂದಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್, ಮೆಜೆಸ್ಟಿಕ್ ನಿಂದ ಕಾಡುಗೋಡಿಗೆ 355 ನಂಬರ್ ವೋಲ್ವೋ ಸಂಚರಿಸುತ್ತದೆ. ಈ ಮಾರ್ಗದ ವೈಜ್ಞಾನಿಕ ಸಮೀಕ್ಷೆ ನಡೆಸಲಾಗುವುದು ಎಂದರು.

ಮೆಜೆಸ್ಟಿಕ್ ನಿಂದ ಕಾಡುಗೋಡಿಗೆ ಬಸ್ ಹೋಗಿ ಬರಲು ಎಷ್ಟು ಸಮಯ ಬೇಕಾಗುತ್ತದೆ ಎಂದು ಸಮೀಕ್ಷೆಯಿಂದ ತಿಳಿಯಲಿದೆ. ಬೆಳಗ್ಗೆ, ರಾತ್ರಿ ಹೀಗೆ ವಿವಿಧ ಕಾಲಮಾನದಲ್ಲಿ ಸಮೀಕ್ಷೆ ನಡೆಸಿ ವರದಿ ತಯಾರಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಮಾರ್ಗದಲ್ಲಿ 96 ವಜ್ರ ಬಸ್ ಗಳು ಸಂಚರಿಸುತ್ತವೆ. ಟ್ರಾಫಿಕ್ ಕಂಟ್ರೋಲ್ ಕಾರ್ಪೋರೇಷನ್ ನಿಂದ ಸಮೀಕ್ಷೆ ನಡೆಸಲಾಗುವುದು ಎಂದರು. ಸದ್ಯ ಚಾಲಕರು 12 ಗಂಟೆಯಲ್ಲಿ ಈ ಮಾರ್ಗದಲ್ಲಿ 8 ಟ್ರಿಪ್ ಗಳನ್ನು ಮುಗಿಸಲು ಸಾಧ್ಯವಾಗುತ್ತಿಲ್ಲ. (ಸಿಬ್ಬಂದಿ ಪ್ರತಿಭಟನೆ, ವೋಲ್ವೋ ಬಸ್ ಸಂಚಾರವಿಲ್ಲ)
ಸಮೀಕ್ಷೆಯ ವರದಿ ಆಧರಿಸಿ ಮಾರ್ಗದಲ್ಲಿ ಸಂಚರಿಸುವ ಬಸ್ ಸಮಯಗಳನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಿದರು. ನಿಗದಿ ಪಡಿಸಿದ ಟ್ರಿಪ್ ಗಿಂತ ಹೆಚ್ಚಿನ ಕೆಲಸ ಮಾಡಿ ಎಂದು ಚಾಲಕರಿಗೆ ಸಂಸ್ಥೆ ಯಾವುದೇ ಒತ್ತಡ ಹಾಕುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
12 ಗಂಟೆಗಳ ನಿಗದಿತ ಅವಧಿಯಲ್ಲಿ ಕೆಲವು ಚಾಲಕರು 8 ಟ್ರಿಪ್ ಮುಗಿಸುತ್ತಿದ್ದಾರೆ. ಕೆಲವರು 7 ಮತ್ತು 6 ಟ್ರಿಪ್ ಗಳನ್ನು ಮಾತ್ರ ಮುಗಿಸಲು ಸಾಧ್ಯವಾಗುತ್ತಿದೆ. ಆದ್ದರಿಂದ ಸಮೀಕ್ಷೆ ನಡೆಸಿ ಕಾಲಮಿತಿಯನ್ನು ಪರಿಷ್ಕರಣೆ ಮಾಡಲಾಗುವುದು ಎಂದರು.
ಸಾಮಾನ್ಯ ಪಾಳಿಯಲ್ಲಿ ಕೆಲಸ ಮಾಡುವ ಚಾಲಕರು ಎರಡು ಪೀಕ್ ಆವರ್ಸ್ ಎದುರಿಸಬೇಕಾಗುತ್ತದೆ. ಆದ್ದರಿಂದ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಆದ್ದರಿಂದ ಬಿಎಂಟಿಸಿ ಮೂರು ಶಿಫ್ಟ್ ಗಳನ್ನು ಪರಿಚಯಿಸಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications