ನೆಲಕ್ಕುರುಳಿದ ಐತಿಹಾಸಿಕ ವಿದುರಾಶ್ವತ್ಥ ಮರ

ಗೌರಿ ಬಿದನೂರು ನಗರದಿಂದ ಸುಮಾರು 9 ಕಿ.ಮೀ. ದೂರದಲ್ಲಿ ವಿದುರಾಶ್ವಥ ಕ್ಷೇತ್ರವಿದೆ. ಇಲ್ಲಿ ವಿದುರಾಶ್ವಥ ನಾರಾಯಣ ಸ್ವಾಮಿ ದೇವಸ್ಥಾನವಿದ್ದು, ಇದೊಂದು ಪುಣ್ಯ ಸ್ಥಳವಾಗಿದೆ. ಇಲ್ಲಿನ ವಿದುರ ಮರ ಬುಧವಾರ ಬೆಳಗ್ಗೆ ಭಾರೀ ಮಳೆಯ ಕಾರಣ ಧರೆಗೆ ಉರುಳಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆಸುರಿಯುತ್ತಿದೆ. ಮಂಗಳವಾರ ರಾತ್ರಿಯೂ ಗೌರಿಬಿದನೂರಿನಲ್ಲಿ 5 ಸೆಂ.ಮೀ.ಮಳೆ ಸುರಿದಿತ್ತು. ಇದರಿಂದಾಗಿ ಐತಿಹಾಸಿಕ ಮರ ಧರೆಗುರುಳಿದೆ.
ಪುರಾಣದಂತೆ ವಿದುರ ದೃತರಾಷ್ಟ್ರನ ತಮ್ಮ. ಕೌರವರಿಗೆ ರಾಜ್ಯಭಾರ ಮಾಡಲು ಅವರು ಸಹಾಯ ಮಾಡುತ್ತಿದ್ದರಂತೆ. ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಮೈತ್ರೆಯೀ ಮುನಿಯ ಆಶ್ರಮಕ್ಕೆ ಬಂದ ವಿದುರ ಅಲ್ಲಿ ವಾಸಿಸುತ್ತಿದ್ದನಂತೆ.
ಋಷಿವರ್ಯರು ವಿದುರನಿಗೆ ಆಶ್ರಮದಲ್ಲಿ ಅಶ್ವಥ ಮರ ನೆಟ್ಟು, ಅದನ್ನು ಬೆಳೆಸಬೇಕೆಂದು ತಿಳಿಸಿ ದೇಶ ಪರ್ಯಟನೆಗೆ ಹೊರಟರಂತೆ. ವಿದುರನು ಆಶ್ವತ ಮರವನ್ನು ಮತ್ತು ಆ ಪ್ರದೇಶ ವನ್ನು ನೋಡಿಕೊಂಡದ್ದರಿಂದ ಈ ಸ್ಥಳ ವಿದುರಾಶ್ವಥ ಎಂದೇ ಪ್ರಸಿದ್ದವಾಗಿದೆ.
ವಿದುರಾಶ್ವತ್ಥವು ದಕ್ಷಿಣ ಭಾರತದ ಜಲಿಯಾನ್ ವಾಲಾ ಬಾಗ್ ಎಂದೂ ಪ್ರಸಿದ್ಧವಾಗಿದೆ. 1938ರಲ್ಲಿ ಹಲವಾರು ಪ್ರತಿಭಟನಾಕಾರರು ಬ್ರಿಟಿಷರ ಗುಂಡೇಟಿಗೆ ಈ ಸ್ಥಳದಲ್ಲಿ ಬಲಿಯಾಗಿದ್ದರು. ಮರದ ಪಕ್ಕದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮರ "ಶಿಲಾ ಸ್ಮಾರಕ" ಹಾಗೂ "ವೀರ ಸೌಧ"ಗಳಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ












Click it and Unblock the Notifications