ಆಗ್ರಾ: ಗಂಡು ಮಗುವಿನಾಸೆಗೆ 7 ಮಕ್ಕಳ ತಂದೆಯಾದ ಆಟೋ ಡ್ರೈವರ್
ಆಗ್ರಾ ಜೂನ್ 29: ಆಟೋ ಚಾಲಕನೊಬ್ಬ ಗಂಡು ಮಗುವಿನ ಆಸೆಗೆ 7 ಮಕ್ಕಳ ತಂದೆಯಾದ ಪ್ರಕರಣ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ನಡೆದಿದೆ. ಒಬ್ಬ ಆಟೋ ಡ್ರೈವರ್ಗೆ ಮೂವರು ಹೆಣ್ಣು ಮಕ್ಕಳಿದ್ದರು, ಆದರೆ ಅವರಿಗೆ ಒಬ್ಬ ಗಂಡು ಮಗ ಬೇಕಿತ್ತು. ಮಗನ ಆಸೆ ಈಡೇರಿದ್ದು, ಈ ವಿಚಾರದಲ್ಲಿ ಆಟೋ ಚಾಲಕ ಏಳು ಮಕ್ಕಳ ತಂದೆಯಾಗಿದ್ದಾರೆ. ಆತನ ಹೆಂಡತಿ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಅವರಿಗೆ ಬೇಕಿದ್ದ ಒಂದು ಗಂಡು ಮಗು ಆದರೆ ಆತನ ಪತ್ನಿ ಒಂದು ಗಂಡು ಮಗುವಿನೊಂದಿಗೆ 3 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಹೆಣ್ಣು ಮಕ್ಕಳು ವಿದ್ಯಾಭ್ಯಾಸದಿಂದ ಹಿಡಿದು ವ್ಯಾಪಾರ ಮತ್ತು ರಾಜಕೀಯದವರೆಗೆ ಅಗ್ರಸ್ಥಾನದಲ್ಲಿದ್ದಾರೆ. ಇಂದು ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಬಾವುಟವನ್ನು ಹಾರಿಸಿದ್ದಾರೆ. ಹೀಗಿದ್ದರೂ ಇಂದಿಗೂ ಕೆಲವರು ಮಗನ ಆಸೆಗೆ ಬೀಳುತ್ತಾರೆ.
ಆಗ್ರಾದ ಠಾಣಾ ಎತ್ಮದ್ದೌಲದ ಪ್ರಕಾಶ್ ನಗರದ ನಿವಾಸಿ ಮನೋಜ್ ಕುಮಾರ್ ಅವರ ಪತ್ನಿ ಖುಷ್ಬೂ ಅವರನ್ನು ಕೆಲವು ದಿನಗಳ ಹಿಂದೆ ಆಗ್ರಾ ಟ್ರಾನ್ಸ್ ಯಮುನಾ ಕಾಲೋನಿ ರಾಂಬಾಗ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಈಕೆ 3 ಹೆಣ್ಣು ಮತ್ತು 1 ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ ಮಹಿಳೆ ನರಕವನ್ನೇ ಅನುಭವಿಸಿದ್ದಾಳೆ. ಅವಧಿಪೂರ್ವ ಹೆರಿಗೆಯಿಂದಾಗಿ ಮಕ್ಕಳು ಪೂರ್ಣವಾಗಿ ಬೆಳವಣಿಗೆ ಹೊಂದಿರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಮಕ್ಕಳ ತಂದೆ ಮನೋಜ್ ಕುಮಾರ್ ಆಟೋ ಚಾಲಕ. ಹೆರಿಗೆ ನೋವಿನಿಂದ ಪತ್ನಿಯನ್ನು ಯಮುನಾಪರ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮನೋಜ್ ತಿಳಿಸಿದ್ದಾರೆ. ಇಲ್ಲಿ ಅಲ್ಟ್ರಾಸೌಂಡ್ ಮಾಡಿದಾಗ, ವೈದ್ಯರು ಗರ್ಭದಲ್ಲಿ ನಾಲ್ಕು ಮಕ್ಕಳಿವೆ ಎಂದು ಹೇಳಿದರು. ಮನೋಜ್ಗೆ ಈಗಾಗಲೇ ಮೂವರು ಹೆಣ್ಣು ಮಕ್ಕಳಿದ್ದು, ಮತ್ತೆ ಮೂವರು ಹೆಣ್ಣು ಮಕ್ಕಳ ತಂದೆಯಾಗಿದ್ದಾರೆ. ಜೊತೆಗೆ ಗಂಡು ಮಗುವಿನ ಆಸೆ ಕೂಡ ಈಡೇರಿದೆ.

Recommended Video
ಮಾಧ್ಯಮ ವರದಿಗಳ ಪ್ರಕಾರ, ಆಸ್ಪತ್ರೆಯ ನಿರ್ದೇಶಕ ಮಹೇಶ್ ಚೌಧರಿ ಅವರು 10 ವರ್ಷಗಳಿಂದ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ ಅಂತಹ ಪವಾಡವನ್ನು ನೋಡಿಲ್ಲ. ಈ ಮಕ್ಕಳನ್ನು ನಾನೇ ನೋಡಿಕೊಳ್ಳುತ್ತೇನೆ ಎಂದು ಹೇಳಿದರು. ಕುಟುಂಬಕ್ಕೆ ಯಾವುದೇ ಆರ್ಥಿಕ ಸಹಾಯ ಬೇಕಾದರೆ ನೀಡಲು ಸಿದ್ಧ ಎಂದಿದ್ದಾರೆ. ಜತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications