ತಾಜ್ಮಹಲ್ಗೆ 3 ದಿನಗಳ ಕಾಲ ಉಚಿತ ಭೇಟಿಗೆ ಅವಕಾಶ
ಲಕ್ನೋ, ಫೆಬ್ರವರಿ 19:ತಾಜ್ ಮಹಲ್ಗೆ 3 ದಿನಗಳ ಕಾಲ ಉಚಿತ ಪ್ರವೇಶಾವಕಾಶವನ್ನು ಕಲ್ಪಿಸಿಕೊಡಲಾಗಿದೆ.
ಪ್ರತಿ ವರ್ಷ ಉರುಸ್ ಆಚರಣೆ ಸಂದರ್ಭದಲ್ಲಿ ಈ ವಿನಾಯಿತಿಯನ್ನು ನೀಡಲಾಗುತ್ತದೆ. ಇದರೊಂದಿಗೆ ವಿಶ್ವ ಪ್ರವಾಸೋದ್ಯಮ ದಿನದಂದು ಕೂಡಾ ತಾಜ್ ಮಹಲ್ನಲ್ಲಿ ಪ್ರವೇಶ ಉಚಿತವಾಗಿದೆ.
ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಫೆಬ್ರವರಿ 27, 28 ಹಾಗೂ ಮಾರ್ಚ್ 1ರಂದು ಪ್ರವಾಸಿಗರಿಗೆ ಉಚಿತ ಪ್ರವೇಶ ನೀಡುವುದಾಗಿ ತಿಳಿಸಿದೆ. ಈ 3 ದಿನ ತಾಜ್ ಮಹಲ್ನಲ್ಲಿ ಷಹಜಹಾನ್ನ ಉರ್ಸ್ ಆಚರಿಸಲಾಗುವುದು. ಹೀಗಾಗಿ ಈ 3 ದಿನಗಳಲ್ಲಿ ಪ್ರವಾಸಿಗರು ವಿನಾಯಿತಿ ಪಡೆಯಲಿದ್ದಾರೆ ಎಂದು ತಿಳಿಸಿದೆ.

ಷಹಜಹಾನ್ನ 3 ದಿನಗಳ ಉರುಸ್ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ ಇರಲಿದೆ. ಹೀಗಾಗಿ ತಾಜ್ ಮಹಲ್ನ ಭದ್ರತಾ ವ್ಯವಸ್ಥೆ ಬಲಪಡಿಸಲಾಗುತ್ತದೆ. ಉಚಿತ ಪ್ರವೇಶ ಪಡೆಯುವ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.
ತಾಜ್ ಮಹಲ್ನಲ್ಲಿ ಮುಮ್ತಾಜ್ ಮಹಲ್ನ ಸಮಾಧಿ ಇದೆ. ಷಹಜಹಾನ್ನನ್ನು ಅವನ ಪತ್ನಿಯೊಂದಿಗೆ ಸಮಾಧಿ ಮಾಡಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಅನುಮತಿಗೆ ಅನುಗುಣವಾಗಿ ಪ್ರತಿ ವರ್ಷ ಚಕ್ರವರ್ತಿಯ ಷಹಜಹಾನ್ ಮೃತಪಟ್ಟ ದಿನದಂದು ಇಲ್ಲಿ ಉರುಸ್ ನಡೆಯುತ್ತದೆ
ಫೆಬ್ರವರಿ 27ರಂದು ಷಹಜಹಾನ್ನ ಉರುಸ್ ಮೊದಲ ದಿನ. ಅಂದು ಮಧ್ಯಾಹ್ನ 2 ಗಂಟೆಯಿಂದ ಸೂರ್ಯಾಸ್ತದ ವರೆಗೆ ಎಲ್ಲಾ ಪ್ರವಾಸಿಗರಿಗೂ ಉಚಿತ ಪ್ರವೇಶ ಇರಲಿದೆ. ಫೆಬ್ರವರಿ 28 ರಂದು ಹಿಂದಿನ ದಿನದ ವೇಳಾಪಟ್ಟಿ ಅನುಸರಿಸಲಾಗುತ್ತದೆ.
ಮಾರ್ಚ್ 1 ಉರುಸ್ ಕೊನೆಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಉಚಿತ ಪ್ರವೇಶ ಇರಲಿದೆ ಎಂದು ಎಎಸ್ಐನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಡಾ. ರಾಜ್ಕುಮಾರ್ ಪಟೇಲ್ ತಿಳಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications