ಆಗ್ರಾದಲ್ಲಿ ಅಣಕು ಕಾರ್ಯಾಚರಣೆಯಿಂದ 22 ರೋಗಿಗಳು ಸಾವು? ತನಿಖೆಗೆ ಆದೇಶ
ಆಗ್ರಾ, ಜೂನ್ 8: ಆಗ್ರಾದ ಖಾಸಗಿ ಆಸ್ಪತ್ರೆಯಲ್ಲಿ ಏಪ್ರಿಲ್ 26ರಂದು 22 ಕೊರೊನಾ ರೋಗಿಗಳು ಸಾವನ್ನಪ್ಪಿದ್ದು, ಅಣಕು ಕಾರ್ಯಾಚರಣೆಗಾಗಿ ವೈದ್ಯಕೀಯ ಆಮ್ಲಜನಕ ಸರಬರಾಜನ್ನು ಕಡಿತಗೊಳಿಸಿದ್ದ ಕಾರಣ ಈ ಘಟನೆ ನಡೆದಿದೆಯೇ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಈ ಕುರಿತು ಆಗ್ರಾ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದೆ.
ಪರಾಸ್ ಆಸ್ಪತ್ರೆ ಮಾಲೀಕ ಅರಿಂಜನ್ ಜೈನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ, ಆಸ್ಪತ್ರೆಯಲ್ಲಿ ಆಮ್ಲಜನಕ ಸರಬರಾಜು ಅಣಕು ಕಾರ್ಯಾಚರಣೆ ನಂತರ 22 ರೋಗಿಗಳು ಸಾವನ್ನಪ್ಪಿರುವ ಸಂಗತಿ ಪ್ರಸ್ತಾಪವಾಗಿತ್ತು.
"ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಇದ್ದು, ಡಿಸ್ಚಾರ್ಜ್ ಆಗುವಂತೆ ಜನರಿಗೆ ಮನವಿ ಮಾಡಿದ್ದೆವು. ಆದರೆ ಯಾರೂ ಸಿದ್ಧರಿರಲಿಲ್ಲ. ಹೀಗಾಗಿ ಅಣಕು ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆವು. ಏಪ್ರಿಲ್ 26ರ ಬೆಳಿಗ್ಗೆ ಏಳು ಗಂಟೆಗೆ 5 ನಿಮಿಷಗಳ ಕಾಲ ಆಮ್ಲಜನಕ ಸರಬರಾಜನ್ನು ನಿಲ್ಲಿಸಿದ್ದೆವು. 22 ಕೊರೊನಾ ಸೋಂಕಿತರು ತೀವ್ರ ಉಸಿರಾಟ ತೊಂದರೆಯಲ್ಲಿದ್ದು, ಆಮ್ಲಜನಕವಿಲ್ಲದೇ ಬದುಕುಳಿಯಲಾರರು ಎಂಬುದು ತಿಳಿದುಬಂದಿತು. ಕೂಡಲೇ ನಾವು ಉಳಿದ 74 ರೋಗಿಗಳ ಕುಟುಂಬದವರಿಗೆ ಸ್ವಂತ ಖರ್ಚಿನಲ್ಲಿ ಆಮ್ಲಜನಕ ಸಿಲಿಂಡರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆವು" ಎಂದು ಅರಿಂಜನ್ ಜೈನ್ ಹೇಳಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆಗೆ ಆಗ್ರಹಿಸಿದೆ. ಆಗ್ರಾ ಮ್ಯಾಜೆಸ್ಟ್ರೇಟ್ ಪಿಎನ್ ಸಿಂಗ್ ಹಾಗೂ ಮುಖ್ಯ ವೈದ್ಯಾಧಿಕಾರಿ ಆರ್ಸಿ ಪಾಂಡೆ ತನಿಖೆಗೆ ಪ್ರತ್ಯೇಕ ಸಮಿತಿ ರಚಿಸಿರುವುದಾಗಿ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಅಣಕು ಕಾರ್ಯಾಚರಣೆ ಕಾರಣವಾಗಿ 22 ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ ಎನ್ನಲಾದ ವಿಡಿಯೋ ಕುರಿತು ತನಿಖೆಗೆ ಆದೇಶಿಸಲಾಗಿದೆ. ಆಸ್ಪತ್ರೆಗೆ ಆಮ್ಲಜನಕವನ್ನು ಪೂರೈಕೆ ಮಾಡಿದ್ದೆವು. ವಿಡಿಯೋ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪಿಎನ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿಡಿಯೋ ಬಗ್ಗೆ ಅರಿಂಜನ್ ಜೈನ್ ಕೂಡ ಮಾತನಾಡಿದ್ದು, "ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾವು ಏಪ್ರಿಲ್ 26ರಂದು ಅಣಕು ಕಾರ್ಯಾಚರಣೆ ನಡೆಸಿದ್ದೆವು. ತೀರಾ ಗಂಭೀರ ರೋಗಿಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಈ ಕಾರ್ಯಾಚರಣೆ ನಡೆಸಿದ್ದೆವಷ್ಟೆ. ಏಪ್ರಿಲ್ 26ರಂದು ನಾಲ್ಕು ಕೊರೊನಾ ರೋಗಿಗಳು ಮೃತಪಟ್ಟಿದ್ದರು" ಎಂದು ಹೇಳಿಕೆ ನೀಡಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications