ತಾಜ್ಮಹಲ್ಗೆ ಬಾಂಬ್ ಬೆದರಿಕೆ; ಪ್ರವಾಸಿಗರನ್ನು ತೆರವುಗೊಳಿಸಿದ ಪೊಲೀಸರು
ಆಗ್ರಾ, ಮಾರ್ಚ್ 4: ತಾಜ್ ಮಹಲ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಗುರುವಾರ ಬೆಳಿಗ್ಗೆ ಪೊಲೀಸರಿಗೆ ಬೆದರಿಕೆ ಕರೆ ಬಂದಿದ್ದು, ತಕ್ಷಣವೇ ಅಲ್ಲಿಗೆ ದೌಡಾಯಿಸಿದ ಪೊಲೀಸರು ಪ್ರವಾಸಿಗರನ್ನು ತೆರವುಗೊಳಿಸಿದ ಸಂಗತಿ ನಡೆದಿದೆ.
ತಾಜ್ ಮಹಲ್ನಲ್ಲಿ ತಾನು ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತಾಜ್ ಮಹಲ್ ನೋಡಲು ಬಂದಿದ್ದ ಸಾವಿರಾರು ಪ್ರವಾಸಿಗರನ್ನು ಹೊರಗೆ ಕಳುಹಿಸಿದ್ದಾರೆ. ನಂತರ ಅಧಿಕಾರಿಗಳು ತಾಜ್ ಮಹಲ್ ಸುತ್ತ ತಪಾಸಣೆ ನಡೆಸಿದ್ದಾರೆ. ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ.
ವ್ಯಕ್ತಿಯೊಬ್ಬ ಕರೆ ಮಾಡಿ, ಮಿಲಿಟರಿ ನೇಮಕಾತಿಯಲ್ಲಿ ಅಕ್ರಮ ನಡೆಯುತ್ತಿದೆ. ನಾನು ಅರ್ಹನಾಗಿದ್ದರೂ ನನ್ನನ್ನು ನೇಮಿಸಿಕೊಂಡಿಲ್ಲ. ಹೀಗಾಗಿ ತಾಜ್ ಮಹಲ್ನಲ್ಲಿ ಬಾಂಬ್ ಇಟ್ಟಿದ್ದೇನೆ. ಕೆಲವೇ ನಿಮಿಷಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದೆವು. ಸ್ಥಳದಲ್ಲಿ ಸ್ಫೋಟಕ ಪತ್ತೆಯಾಗಿಲ್ಲ. ಇದು ಹುಸಿ ಬಾಂಬ್ ಕರೆ ಎಂದು ಎಸ್ಪಿ ಶಿವರಾಮ್ ಯಾದವ್ ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿ ಫೋನ್ ನಂಬರ್ ಟ್ರ್ಯಾಕ್ ಮಾಡಿದ್ದು, ಆತ ಫಿರೋಜಾಬಾದ್ನಲ್ಲಿರುವುದಾಗಿ ತಿಳಿದುಬಂದಿದೆ. ಆತನಿಗೆ ಶೋಧ ಕಾರ್ಯ ಆರಂಭಿಸಿರುವುದಾಗಿ ಎಸ್ಪಿ ತಿಳಿಸಿದ್ದಾರೆ.
ಇದು ಹುಸಿ ಬಾಂಬ್ ಕರೆ ಎಂದು ತಿಳಿಯುತ್ತಿದ್ದಂತೆ ಮತ್ತೆ ಬೆಳಿಗ್ಗೆ 11.15ಕ್ಕೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ.
ಕೊರೊನಾ ಸೋಂಕಿನ ಕಾರಣದಿಂದ ತಾಜ್ ಮಹಲ್ಗೆ ಆರು ತಿಂಗಳುಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ನಂತರ ಸೆಪ್ಟೆಂಬರ್ನಲ್ಲಿ ತೆರೆಯಲಾಯಿತು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications