ಆಗ್ರಾದಲ್ಲಿ ತಾಜ್ಮಹಲ್ ಸೇರಿ ಇತರೆ ಐತಿಹಾಸಿಕ ಸ್ಮಾರಕಗಳು ಸಧ್ಯಕ್ಕೆ ತೆರೆಯೊಲ್ಲ
ಆಗ್ರಾ, ಜುಲೈ 6: ಆಗ್ರಾದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ತಾಜ್ಮಹಲ್ ಸೇರಿದಂತೆ ಇತರೆ ಐತಿಹಾಸಿಕ ಸ್ಮಾರಕಗಳನ್ನು ಸಧ್ಯಕ್ಕೆ ತೆರೆಯದೇ ಇರಲು ನಿರ್ಧರಿಸಲಾಗಿದೆ.
ತಾಜ್ಮಹಲ್, ಆಗ್ರಾ ಬಂದರು, ಅಕ್ಬರ್ ಟೋಂಬ್ ಇತರೆ ಐತಿಹಾಸಿಕ ಸ್ಮಾರಕಗಳನ್ನು ತೆರೆಯುವಂತಿಲ್ಲ ಎಂದು ಆಗ್ರಾ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಪ್ರಭು ಎನ್ ಸಿಂಗ್ ತಿಳಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಮಾಹಿತಿ ಪ್ರಕಾರ ಕಳೆದ ನಾಲ್ಕು ದಿನಗಳಲ್ಲಿ 55 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 71 ಕಂಟೈನ್ಮೆಂಟ್ ಝೋನ್ಗಳಿವೆ. ಒಂದೊಮ್ಮೆ ಪ್ರವಾಸಿಗರಿಗೆ ಈ ಸ್ಥಳಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.

ಒಂದೊಮ್ಮೆ ಈ ತಾಣಗಳನ್ನು ತೆರೆದರೆ ಪ್ರವಾಸಿಗರು ಬಂದೇ ಬರುತ್ತಾರೆ. ಕೊವಿಡ್ ಲಾಕ್ಡೌನ್ ಸಡಿಲಗೊಂಡ ಬಳಿಕ ಜುಲೈ 6 ರಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಬೇಕಾದರೆ ತಾಜ್ಮಹಲ್ ತೆರೆಯಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದರು.
ಭಾರತದಲ್ಲಿ ಜುಲೈ 5 ರಂದು ಒಂದೇ ದಿನ 24 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿತ್ತು.ಶನಿವಾರ ಬೆಳಗ್ಗೆ 8ಗಂಟೆಯಿಂದ ಭಾನುವಾರ ಬೆಳಗ್ಗೆ ತನಕ ಭಾರತದಲ್ಲಿ 24,850 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 613 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,73,105ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 19,268ಕ್ಕೆ ಏರಿಕೆಯಾಗಿದೆ. ಇದುವರೆಗೂ 4,09,083 ಜನರು ಗುಣಮುಖರಾಗಿದ್ದಾರೆ. ಕಳೆದ 9 ದಿನಗಳಿಂದ ದೇಶದಲ್ಲಿ ಪ್ರತಿದಿನ 18,000ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ.
ಶನಿವಾರ ನವದೆಹಲಿಯಲ್ಲಿ 2,505 ಹೊಸ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 97,000ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 3004.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications