ಕೋವಿಡ್ ಇಳಿಕೆ: ತಾಜ್ ಮಹಲ್ ಸ್ಮಾರಕ ಭೇಟಿಗೆ ಪ್ರವಾಸಿಗರಿಗೆ ಅವಕಾಶ
ಆಗ್ರಾ, ಜೂ.16: ಕೊರೊನಾ ಸೋಂಕು ಪ್ರಕರಣಗಳು ಕೊಂಚ ಇಳಿಕೆ ಕಾಣುತ್ತಿರುವ ಮಧ್ಯೆ ಭಾರತೀಯ ಅಧಿಕಾರಿಗಳು ನಿರ್ಬಂಧಗಳನ್ನು ಸಡಿಲಗೊಳಿಸಿದ್ದಾರೆ. ಈ ಹಿನ್ನೆಲೆ ತಾಜ್ ಮಹಲ್ ಸಂದರ್ಶಕರ ಭೇಟಿಗೆ ಮತ್ತೆ ಅವಕಾಶ ನೀಡಿದೆ.
ಸೋಂಕುಗಳು ಮತ್ತು ಸಾವು ಪ್ರಮಾಣಗಳು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ದಾಖಲೆಯ ಮಟ್ಟಕ್ಕೆ ಏರಿತ್ತು. ಈ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಮಾಡಲಾಗಿದೆ. ಹಲವಾರು ಸ್ಮಾರಕ ಸ್ಥಳಕ್ಕೆ ಸಾರ್ವಜನಿಕರ ಭೇಟಿ ನಿರ್ಬಂಧಿಸಲಾಗಿತ್ತು.
ಇತ್ತೀಚಿನ ವಾರಗಳಲ್ಲಿ ಪ್ರಕರಣಗಳು ಇಳಿಮುಖವಾಗಿದ್ದು, ನವದೆಹಲಿ ಮತ್ತು ಮುಂಬೈ ಸೇರಿದಂತೆ ಹಲವಾರು ಪ್ರಮುಖ ನಗರಗಳು ಅನೇಕ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ತಾಜ್ ಮಹಲ್ ಇರುವ ಆಗ್ರಾದಲ್ಲಿ, ಭಾರತದ ಉನ್ನತ ಪ್ರವಾಸಿ ತಾಣಗಳು ಬುಧವಾರ ಮತ್ತೆ ತೆರೆದಿದೆ.

ಮೊಘಲ್ ಚಕ್ರವರ್ತಿ ಷಹಜಹಾನ್ ನಿರ್ಮಿಸಿದ 17 ನೇ ಶತಮಾನದಲ್ಲಿ ನಿರ್ಮಿಸಿದ ಈ ಪ್ರೀತಿಯ ಸ್ಮಾರಕವನ್ನು ಕಳೆದ ಮಾರ್ಚ್ನಲ್ಲಿ ಮುಚ್ಚಲಾಗಿದೆ. ಸೆಪ್ಟೆಂಬರ್ನಲ್ಲಿ ಮತ್ತೆ ತೆರೆಯಲಾಗಿತ್ತು. ಮತ್ತೆ ಏಪ್ರಿಲ್ನಲ್ಲಿ ಮುಚ್ಚಲಾಯಿತು. ಈಗ ಮತ್ತೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆರಂಭದ ಮೊದಲ ದಿನ ಜನಸಂದಣಿ ಕಡಿಮೆಯಾಗಿತ್ತು. ಇನ್ನು ದಿನಕ್ಕೆ 650 ಸಂದರ್ಶಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ 40 ವರ್ಷದ ಬ್ರೆಜಿಲ್ನ ಸಂದರ್ಶಕಿ ಮೆಲಿಸ್ಸಾ ಡಲ್ಲಾ ರೋಸಾ, "ನಾನು ತಾಜ್ಮಹಲ್ ನೋಡಲು ತುಂಬಾ ಉತ್ಸಾಹಿತಳಾಗಿದ್ದೇನೆ. ಇದು ಅದ್ಭುತವಾಗಿದೆ" ಎಂದಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications