ಸೂರತ್ ನಲ್ಲಿರುವ ಓಎನ್ ಜಿಸಿ ಸ್ಥಾವರದಲ್ಲಿ ಭಾರಿ ಸ್ಫೋಟ
ಸೂರತ್, ಸಪ್ಟೆಂಬರ್.24: ಗುಜರಾತ್ ನ ಸೂರತ್ ನಲ್ಲಿರುವ ಆಯಿಲ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್(ONGC) ಸ್ಥಾವರದಲ್ಲಿ ಗುರುವಾರ ಮಧ್ಯರಾತ್ರಿ ಭಾರಿ ಸ್ಫೋಟವೊಂದು ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.
ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಓಎನ್ ಜಿಸಿ ಘಟಕದಲ್ಲಿ ಸ್ಫೋಟದ ಸದ್ದು ಸುಮಾರು 4 ಕಿಲೋ ಮೀಟರ್ ದೂರದವರೆಗೂ ಕೇಳಿದೆ. ನೋಡನೋಡುತ್ತಿದ್ದಂತೆ ಬೆಂಕಿನ ಕೆನ್ನಾಲಿಗೆ ಸ್ಥಾವರದಲ್ಲಿ ಚಾಚಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

"ಸೂರತ್ ನಲ್ಲಿರುವ ಓಎನ್ ಜಿಸಿಯ ಹಜಿರಾ ಸ್ಥಾವರದಲ್ಲಿ ಮಧ್ಯರಾತ್ರಿ 3 ಗಂಟೆಗೆ 3 ಸ್ಫೋಟಗಳು ಸಂಭವಿಸಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಯ ಯಶಸ್ವಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದುವರೆಗೂ ಯಾವುದೇ ಸಾವು-ನೋವಿನ ಕುರಿತು ಮಾಹಿತಿ ಸಿಕ್ಕಿಲ್ಲ ಎಂದು ಸೂರತ್ ಜಿಲ್ಲಾಧಿಕಾರಿ ಡಾ. ಧವಲ್ ಪಟೇಲ್ ಮಾಹಿತಿ ನೀಡಿದ್ದಾರೆ.
#WATCH Gujarat: A fire breaks out at an Oil and Natural Gas Corporation (ONGC) plant in Surat. Fire tenders present at the spot. More details awaited. pic.twitter.com/6xPKHW5PrR
— ANI (@ANI) September 23, 2020
ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ:
ಸೂರತ್ ನಲ್ಲಿರುವ ಓಎನ್ ಜಿಸಿ ಸ್ಥಾವರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯಾವುದೇ ಆಸ್ತಿ-ಪಾಸ್ತಿ ಮತ್ತು ಪ್ರಾಣ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅಲ್ಲದೇ ಓಎನ್ ಜಿಸಿ ಸ್ಥಾವರದಲ್ಲಿ ಸ್ಫೋಟಕ್ಕೆ ಮತ್ತು ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. ಓಎನ್ ಜಿಸಿ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದಾಗ ಬೆಂಕಿನ ಕೆನ್ನಾಲಿಗೆ ಆಕಾಶದ ಎತ್ತರಕ್ಕೆ ಚಿಮ್ಮಿದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications