ಗೋಧ್ರಾ ಹತ್ಯಾಕಾಂಡ: 19 ವರ್ಷದ ಬಳಿಕ ಪ್ರಮುಖ ಆರೋಪಿ ಬಂಧನ
ಅಹಮದಾಬಾದ್, ಫೆಬ್ರವರಿ 16: ಗುಜರಾತ್ನ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳ ನಂತರ ಪ್ರಮುಖ ಆರೋಪಿ ರಫೀಕ್ ಹುಸೇನ್ ಭಾತುಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೋಧ್ರಾ ನಗರದವನಾದ ರಫೀಕ್, ರೈಲಿಗೆ ಬೆಂಕಿ ಹಚ್ಚುವ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿನ ಮನೆಯೊಂದರಲ್ಲಿ ರಫೀಕ್ ಇರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಭಾಮುವಾರ ರಾತ್ರಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದರು. ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಪೂರೈಕೆ ಮಾಡಿದ್ದ ರಫೀಕ್, ಗಲಭೆಗೂ ಪ್ರಚೋದನೆ ನೀಡಿದ್ದ. ತನಿಖೆ ವೇಳೆ ಈತನ ಪಾತ್ರ ಬಹಿರಂಗವಾಗಿತ್ತು. ಇದನ್ನು ಅರಿತ ಕೂಡಲೇ ಆತ ದೆಹಲಿಗೆ ಪರಾರಿಯಾಗಿದ್ದ. ರಫೀಕ್ ವಿರುದ್ಧ ಕೊಲೆ ಮತ್ತು ಗಲಭೆ ಸೃಷ್ಟಿಸಿದ ಆರೋಪಗಳಿವೆ.

ಗೋಧ್ರಾ ರೈಲು ನಿಲ್ದಾಣದಲ್ಲಿ ಆತ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬೋಗಿಗಳ ಮೇಲೆ ಕಲ್ಲು ಎಸೆದು ಪೆಟ್ರೋಲ್ ಸುರಿದಿದ್ದ. ಬಳಿಕ ಇತರೆ ಅರೋಪಿಗಳು ಬೆಂಕಿ ಹಚ್ಚಿದ್ದರು. ಗೋಧ್ರಾದಿಂದ ಪರಾರಿಯಾಗಿ ತಲೆಮರೆಸಿಕೊಂಡ ಬಳಿಕ ಆತ ದೆಹಲಿಯ ರೈಲು ನಿಲ್ದಾಣ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈ ಹತ್ಯಾಕಾಂ ಪ್ರಕರಣದಲ್ಲಿ ಭಾಗಿಯಾದ ಆರೋಪವಿರುವ ಸಲೀಂ ಇಬ್ರಾಹಿಂ ಬಾದಾಮ್ ಅಲಿಯಾಸ್ ಸಲೀಂ ಪನ್ವಾಲಾ, ಶೌಕತ್ ಚರ್ಕಾ ಮತ್ತು ಅಬ್ದುಲ್ ಮಜೀದ್ ಯೂಸುಫ್ ಇದುವರೆಗೂ ಪತ್ತೆಯಾಗಿಲ್ಲ. ಈ ಮೂವರೂ ಆರೋಪಿಗಳು ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
2002ರ ಫೆಬ್ರವರಿ 27ರಂದು ರೈಲಿಗೆ ಬೆಂಕಿ ಹಚ್ಚಿದ್ದರಿಂದ 59 ಮಂದಿ ಕರ ಸೇವಕರು ಸಜೀವದಹನಗೊಂಡಿದ್ದರು. ಇದರ ಬಳಿಕ ಗುಜರಾತ್ನಲ್ಲಿ ವ್ಯಾಪಕ ಕೋಮುಗಲಭೆ ನಡೆದಿದ್ದವು.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications