ಗಾಂಧಿ ನೆಲದಲ್ಲಿ ಉಗ್ರವಾದ ಹುಟ್ಟು ಹಾಕಲು ಹೊರಟವನ ಕೈಗೆ ಬೇಡಿ
ಗಾಂಧಿನಗರ, ಜನವರಿ.09: ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಹುಟ್ಟು ಹಾಕಲು ಪ್ರಯತ್ನಿಸುತ್ತಿದ್ದ ಶಂಕಿತ ಆರೋಪಿ ಒಬ್ಬನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆಯು ಬಂಧಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವ ಐಸಿಸ್ ಸಂಘಟನೆಯನ್ನು ದೇಶದಲ್ಲಿ ಬೆಳೆಸಲು ಈತ ಸಂಚು ರೂಪಿಸಿದ್ದ ಎನ್ನಲಾಗಿದೆ.
ಗುಜರಾತ್ ವಡೋದರ ನಗರದ ಗೊರ್ವಾ ಪ್ರದೇಶದಲ್ಲಿ ಜಾಫರ್ ಅಲಿ ಎಂಬ ಶಂಕಿತ ಉಗ್ರನನ್ನು ಭಯೋತ್ಪಾದನಾ ನಿಗ್ರಹ ಪಡೆ (ಎಟಿಎಸ್) ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿದ್ದ ಶಂಕಿತನು ಕಳೆದ 10 ರಿಂದ 12 ದಿನಗಳ ಹಿಂದೆಯಷ್ಟೇ ಗುಜರಾತ್ ಗೆ ಆಗಮಿಸಿದ್ದ ಎಂದು ಹೇಳಲಾಗುತ್ತಿದೆ.
ಐಎಸ್ಐಎಸ್ ಸಂಘಟನೆಗೆ ಸೇರಿದ್ದ ಎನ್ನಲಾದ ಶಂಕಿತನ ಬಂಧನಕ್ಕಾಗಿ ತಮಿಳುನಾಡು ಪೊಲೀಸರು ಹುಡುಕಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ, ಗುಜರಾತ್ ನ ವಡೋದರಕ್ಕೆ ಬಂದು ನೆಲೆಸಿದ್ದ ಎಂದು ಮೂಲಗಳು ತಿಳಿಸಿವೆ.

ಐಸಿಸ್ ಸಂಘಟನೆಗೆ ಸೇರಲು ಪ್ರೇರೇಪಣೆ:
ಗುಜರಾತ್ ನಲ್ಲಿ ಉಗ್ರ ಸಂಘಟನೆಯನ್ನು ಬೆಳೆಸುವುದಕ್ಕಾಗಿ ವಡೋದರಾಕ್ಕೆ ಆಗಮಿಸಿದ್ದ ಎಂದು ಹೇಳಲಾಗುತ್ತಿದೆ. ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್ ನತ್ತ ಯುವಕರನ್ನು ಸೆಳೆಯಲು ಜಾಫರ್ ಅಲಿ ಸಂಚು ರೂಪಿಸಿದ್ದು, ಸಂಘಟನೆಗೆ ಸೇರುವಂತೆ ಯುವಕರನ್ನು ಪ್ರೇರೇಪಿಸುತ್ತಿದ್ದ ಎಂದು ತಿಳಿದು ಬಂದಿದೆ. ಈತನ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎಟಿಎಸ್ ಶಂಕಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications