ಗಾಂಧಿ ನೆಲದಲ್ಲಿ ಉಗ್ರವಾದ ಹುಟ್ಟು ಹಾಕಲು ಹೊರಟವನ ಕೈಗೆ ಬೇಡಿ
ಗಾಂಧಿನಗರ, ಜನವರಿ.09: ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಹುಟ್ಟು ಹಾಕಲು ಪ್ರಯತ್ನಿಸುತ್ತಿದ್ದ ಶಂಕಿತ ಆರೋಪಿ ಒಬ್ಬನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆಯು ಬಂಧಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವ ಐಸಿಸ್ ಸಂಘಟನೆಯನ್ನು ದೇಶದಲ್ಲಿ ಬೆಳೆಸಲು ಈತ ಸಂಚು ರೂಪಿಸಿದ್ದ ಎನ್ನಲಾಗಿದೆ.
ಗುಜರಾತ್ ವಡೋದರ ನಗರದ ಗೊರ್ವಾ ಪ್ರದೇಶದಲ್ಲಿ ಜಾಫರ್ ಅಲಿ ಎಂಬ ಶಂಕಿತ ಉಗ್ರನನ್ನು ಭಯೋತ್ಪಾದನಾ ನಿಗ್ರಹ ಪಡೆ (ಎಟಿಎಸ್) ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ತಮಿಳುನಾಡಿನಲ್ಲಿದ್ದ ಶಂಕಿತನು ಕಳೆದ 10 ರಿಂದ 12 ದಿನಗಳ ಹಿಂದೆಯಷ್ಟೇ ಗುಜರಾತ್ ಗೆ ಆಗಮಿಸಿದ್ದ ಎಂದು ಹೇಳಲಾಗುತ್ತಿದೆ.
ಐಎಸ್ಐಎಸ್ ಸಂಘಟನೆಗೆ ಸೇರಿದ್ದ ಎನ್ನಲಾದ ಶಂಕಿತನ ಬಂಧನಕ್ಕಾಗಿ ತಮಿಳುನಾಡು ಪೊಲೀಸರು ಹುಡುಕಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ, ಗುಜರಾತ್ ನ ವಡೋದರಕ್ಕೆ ಬಂದು ನೆಲೆಸಿದ್ದ ಎಂದು ಮೂಲಗಳು ತಿಳಿಸಿವೆ.

ಐಸಿಸ್ ಸಂಘಟನೆಗೆ ಸೇರಲು ಪ್ರೇರೇಪಣೆ:
ಗುಜರಾತ್ ನಲ್ಲಿ ಉಗ್ರ ಸಂಘಟನೆಯನ್ನು ಬೆಳೆಸುವುದಕ್ಕಾಗಿ ವಡೋದರಾಕ್ಕೆ ಆಗಮಿಸಿದ್ದ ಎಂದು ಹೇಳಲಾಗುತ್ತಿದೆ. ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್ ನತ್ತ ಯುವಕರನ್ನು ಸೆಳೆಯಲು ಜಾಫರ್ ಅಲಿ ಸಂಚು ರೂಪಿಸಿದ್ದು, ಸಂಘಟನೆಗೆ ಸೇರುವಂತೆ ಯುವಕರನ್ನು ಪ್ರೇರೇಪಿಸುತ್ತಿದ್ದ ಎಂದು ತಿಳಿದು ಬಂದಿದೆ. ಈತನ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎಟಿಎಸ್ ಶಂಕಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications