ನಟಿ, ರೂಪದರ್ಶಿ ಪಾಯಲ್ ಪಟೇಲ್- ಅತಿ ಕಿರಿಯ ಕಾರ್ಪೊರೇಟರ್
ಸೂರತ್, ಫೆಬ್ರವರಿ 24: ಗುಜರಾತಿನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದರ ಮೂಲಕ ಅಮೋಘ ಪದಾರ್ಪಣೆ ಮಾಡಿ, ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ಶಕ್ತಿಯಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷ ಹೊರಹೊಮ್ಮಿದೆ ಎಂದು ಪಕ್ಷದ ವಕ್ತಾರರು ಸಾಧನೆಯ ಸಂಭ್ರಮದಲ್ಲಿ ಹೇಳಿದ್ದಾರೆ.
ಈ ನಡುವೆ ಸೂರತ್ ಮುನ್ಸಿಪಾಲ್ ಕಾರ್ಪೊರೇಷನ್(ಎಸ್ ಎಂಸಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ನಟಿ ಕಮ್ ರೂಪದರ್ಶಿ ಪಾಯಲ್ ಪಟೇಲ್ ಅವರು ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಸೂರತ್ 16ನೇ ವಾರ್ಡಿನ ಕಾರ್ಪೊರೇಟರ್ ಆಗಿ ಹೊರ ಹೊಮ್ಮಿದ್ದಾರೆ. 22 ವರ್ಷ ವಯಸ್ಸಿನ ಪಾಯಲ್ ಅವರು ಅತಿ ಕಿರಿಯ ಕಾರ್ಪೊರೇಟರ್ ಎಂದೆನಿಸಿದ್ದಾರೆ.
ಅಮ್ರೇಲಿಯಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಪಾಯಲ್ ಅವರು ವಾರ್ಡ್ 16 ಪೂರ್ಣ(ಪಶ್ಚಿಮ) ಕ್ಷೇತ್ರದಲ್ಲಿ ಬಿಜೆಪಿ ಪ್ರತಿಸ್ಪರ್ಧಿಯನ್ನು 12,000ಕ್ಕೂ ಅಧಿಕ ಅಂತರದಿಂದ ಸೋಲಿಸಿದ್ದಾರೆ.

"ಜನ ಸೇವೆ ಮಾಡಬೇಕು ಎಂದು ಎಎಪಿ ಮೂಲಕ ಸ್ಪರ್ಧೆಗಿಳಿದೆ. ಗೆಲುವು ಲಭಿಸಿರುವುದು ಜನರು ಮಾಡಿರುವ ಆಶೀರ್ವಾದ, ಆದರೆ, ಹಾಲಿ ಕಾರ್ಪೊರೇಟರ್ ಎದುರು ಭಾರಿ ಅಂತರದ ಗೆಲುವು ಖಂಡಿತಾ ನಿರೀಕ್ಷಿಸಿರಲಿಲ್ಲ'' ಎಂದು ಗೆಲುವಿನ ಸಂಭ್ರಮದಲ್ಲಿ ಪಾಯಲ್ ಪ್ರತಿಕ್ರಿಯಿಸಿದ್ದಾರೆ.
ತಾರಿ ಮಾರಿ ದೋಸ್ತಿ ಎಂಬ ಚಿತ್ರದಲ್ಲಿ ನಟಿಸಿರುವ ಪಾಯಲ್ ಅವರು 50ಕ್ಕೂ ಅಧಿಕ ವಿಡಿಯೋ ಸಾಂಗ್ಸ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಗುಜರಾತ್ ಅಲ್ಲದೆ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ, ದೆಹಲಿ, ಪಂಜಾಬಿಗೆ ಮಾತ್ರ ಸೀಮಿತವಾಗಿದ್ದ ನಮ್ಮ ಪಕ್ಷ, ಇಂದು ಹರಿಯಾಣ, ಜಾರ್ಕಂಡ್, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗೋವಾ, ಈಗ ಗುಜರಾತ್ ಮುಂದೆ ಕರ್ನಾಟಕ ಅಲ್ಲದೇ ಇಡೀ ದೇಶದ ಚುಕ್ಕಾಣಿ ಹಿಡಿಯುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications