Olxನಲ್ಲಿ ಏಕತಾ ಪ್ರತಿಮೆಗೆ 30 ಸಾವಿರ ಕೋಟಿ ರು ಫಿಕ್ಸ್ ಏಕೆ?
ಅಹಮದಾಬಾದ್, ಏಪ್ರಿಲ್ 6: ವಿಶ್ವದ ಅತಿ ಎತ್ತರ ಪ್ರತಿಮೆ ಎನಿಸಿಕೊಂಡಿರುವ ಏಕತಾ ಪ್ರತಿಮೆ(Statue of Unity) ಆನ್ ಲೈನ್ ನಲ್ಲಿ ಮಾರಾಟಕ್ಕಿಡಲಾಗಿತ್ತು. ಸರಿ ಸುಮಾರು 30, 000 ಕೋಟಿ ರು ಬೆಲೆ ಕಟ್ಟಿ, ಈ ಹಣವನ್ನು ಕೊವಿಡ್19 ವಿರುದ್ಧ ಹೋರಾಟಕ್ಕೆ ಸರ್ಕಾರ ಬಳಸಲಿ ಎಂದು ವ್ಯಕ್ತಿಯೊಬ್ಬ ತನ್ನ ಜಾಹೀರಾತಿನಲ್ಲಿ ಹೇಳಿಕೊಂಡಿದ್ದ. ಸದ್ಯ ಜಾಹೀರಾತು ತೆಗೆದು ಹಾಕಲಾಗಿದೆ, ಆ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ಹಾಕಲಾಗಿದೆ
ಗುಜರಾತಿನ ನರ್ಮದಾ ಜಿಲ್ಲೆಯ ಕೇವಡಿಯಾದಲ್ಲಿರುವ 182 ಮೀಟರ್ ಎತ್ತರದ ಪ್ರತಿಮೆಯನ್ನು 2018ರಲ್ಲಿ ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಿದ್ದರು. ಇಲ್ಲಿ ತನಕ ಲಕ್ಷಾಂತರ ಮಂದಿ ಪ್ರವಾಸಿಗರು ಇಲ್ಲಿಗೆ ಭೇಟಿ ಕೊಟ್ಟಿದ್ದಾರೆ.
ಕಳೆದ ಶನಿವಾರದಂದು ಅನಾಮಿಕ ವ್ಯಕ್ತಿಯೊಬ್ಬ ಒಎಲ್ಎಕ್ಸ್ ನಲ್ಲಿ ಏಕತಾ ಪ್ರತಿಮೆಯನ್ನು 30,000 ಕೋಟಿ ರು ಗಳಿಗೆ ಮಾರಾಟಕ್ಕಿಟ್ಟಿದ್ದ. ಇದರಿಂದ ಬಂದ ಹಣವನ್ನು ಆರೋಗ್ಯ ಇಲಾಖೆ ಉಪಕರಣ, ಸಾಧನ, ವೆಂಟಿಲೇಟರ್ ಖರೀದಿಗೆ ಬಳಸುವ ಮೂಲಕ ಕೊವಿಡ್19 ರೋಗಿಗಳಿಗೆ ಸರ್ಕಾರ ಸೂಕ್ತ ಚಿಕಿತ್ಸೆ ಒದಗಿಸಬಹುದು ಎಂದು ಹೇಳಿಕೊಂಡಿದ್ದ.

ಸ್ಥಳೀಯ ಪತ್ರಿಕೆಯೊಂದರಲ್ಲಿ ಈ ಕುರಿತಂತೆ ಸುದ್ದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸ್ಮಾರಕ ಸಂರಕ್ಷಣಾ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸರ ಮೊರೆ ಹೊಕ್ಕಿದ್ದಾರೆ. ಐಪಿಸಿ ಸೆಕ್ಷನ್ 420 ಅನ್ವಯ ವಂಚನೆ, ಫೋರ್ಜರಿ, ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಉಲ್ಲಂಘನೆ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ಪಿಟಿ ಚೌಧುರಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications