ಟ್ರಂಪ್ ಭೇಟಿ: ವಿಮಾನ ನಿಲ್ದಾಣ ಮಾರ್ಗದ ಪಾನ್ ಶಾಪ್ ಬಂದ್
ಅಹಮದಾಬಾದ್, ಫೆಬ್ರವರಿ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಣ್ಣಿಗೆ ಸ್ಲಂಗಳು ಕಾಣದಂತೆ ಅಹಮದಾಬಾದ್ ನಗರಸಭೆ ಗೋಡೆಯನ್ನು ನಿರ್ಮಾಣ ಮಾಡುತ್ತಿರುವುದು ಗೊತ್ತಿರಬಹುದು. ಈಗ ಗೋಡೆಗಳ ಸೌಂದರ್ಯ ಕಾಪಾಡಲು ವಿಮಾನ ನಿಲ್ದಾಣ ಮಾರ್ಗದಲ್ಲಿದ್ದ ಪಾನ್ ಶಾಪ್ ಗಳನ್ನು ಬಂದ್ ಮಾಡಲು ಅಹಮದಾಬಾದ್ ನಗರಸಭೆ ಮುಂದಾಗಿದೆ.
ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ-ಇಂದಿರಾ ಬ್ರಿಡ್ಜ್ ತನಕ ಸಾಗುವ ಮಾರ್ಗದಲ್ಲಿ ಗೋಡೆ ನಿರ್ಮಿಸಲಾಗುತ್ತಿದೆ. ಈ ಮಾರ್ಗದಲ್ಲಿ ಪಾನ್ ಅಂಗಡಿ ಇದ್ದರೆ, ಸ್ವಚ್ಛತೆ ಕಾಪಾಡಲು ಕಷ್ಟ ಎಂಬ ಕಾರಣದಿಂದ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಆದೇಶ ಉಲ್ಲಂಘಿಸಿ ಅಂಗಡಿ ಬಾಗಿಲು ತೆರೆದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಪಾಲಿಕೆ ಹೇಳಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24 ಮತ್ತು 25ರಂದು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಅಹಮದಾಬಾದ್ಗೆ ಅವರು ಭೇಟಿ ನೀಡಲಿದ್ದು, ವಿಮಾನ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಜೊತೆ ರೋಡ್ ಶೋ ನಡೆಸಲಿದ್ದಾರೆ. ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ನಂತರ ಮೊಟೆರಾದ ನೂತನ ಬೃಹತ್ ಕ್ರೀಡಾಂಗಣ ಉದ್ಘಾಟಿಸಿ, ಭಾಷಣ ಮಾಡಲಿದ್ದಾರೆ.

ರೋಡ್ ಶೋ ವೇಳೆ ಸ್ಲಂ ಕಾಣದಂತೆ ಸುಮಾರು ಅರ್ಧ ಕಿಲೋಮೀಟರ್ ಉದ್ದದ ಗೋಡೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಗಾಂಧಿನಗರ ಮತ್ತು ಅಹಮದಾಬಾದ್ ನಡುವಿನ ಮಾರ್ಗವನ್ನು ಸುಂದರಗೊಳಿಸಲು ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ದೇವ್ ಸರನ್ ಎಂದು ಕರೆಯಲಾಗುವ ಸ್ಲಂನಲ್ಲಿ ಸುಮಾರು 500 ಮನೆಗಳಿದ್ದು, 2500 ಜನರು ದಶಕಗಳಿಂದ ವಾಸವಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications