ಅಹ್ಮದಾಬಾದ್ ಬ್ಯಾಂಕ್ ಕೇಸ್: ರಾಹುಲ್ ಗಾಂಧಿಗೆ ಜಾಮೀನು
ಅಹ್ಮದಾಬಾದ್, ಜುಲೈ 12: ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಅಹ್ಮದಾಬಾದ್ ಜಿಲ್ಲೆ ಸಹಕಾರಿ ಬ್ಯಾಂಕ್ ವೊಂದು ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತಿನ ನ್ಯಾಯಾಲಯವೊಂದು ಅವರಿಗೆ ಜಾಮೀನು ನೀಡಿದೆ.
ಅಪನಗದೀಕರಣದ ನಂತರ ಸುಮಾರು 749.59 ಕೋಟಿ ರೂ.ಗಳಷ್ಟು ಹಳೆಯ ನೋಟುಗಳನ್ನು ಈ ಬ್ಯಾಂಕ್ ಹೊಸ ಮೂಲಕ ನೋಟುಗಳಿಗೆ ಬದಲಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅವರ ಈ ಹೇಳಿಕೆಯ ವಿರುದ್ಧ ಬ್ಯಾಂಕಿನ ಚೇರ್ ಮನ್ ಅಜಯ್ ಪಟೇಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಈ ಬ್ಯಾಂಕಿನ ನಿರ್ದೇಶಕರಲ್ಲೊಬ್ಬರಾಗಿರುವುದರಿಂದ ಈ ಪ್ರಕರಣ ಕುತೂಹಲ ಸೃಷ್ಟಿಸಿತ್ತು.
ಹೈಕೋರ್ಟ್ ನಿಂದ ರಾಹುಲ್ ಗಾಂಧಿಗೆ ಜಾಮೀನು
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ರಾಹುಲ್ ಗಾಂಧಿ ಅವರು ಇಂದು ಖುದ್ದು ಕೋರ್ಟಿಗೆ ಹಾಜರಾಗಿದ್ದರು. ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಷ್ಟೇ ಅಲ್ಲದೆ, ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರ ಮೇಲೂ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.